Election Result 2022: ನಾಲ್ಕು ರಾಜ್ಯಗಳು ಬಿಜೆಪಿಗೆ; ಪಂಜಾಬ್ ನಲ್ಲಿ ಆಪ್ ಜಯಭೇರಿ

ಪಂಚ ರಾಜ್ಯಗಳ ಸಂಖ್ಯಾ ಬಲ ಇಂತಿದೆ

Team Udayavani, Mar 10, 2022, 7:40 PM IST

BJP FLAG

ನವದೆಹಲಿ : ದೇಶದ ರಾಜಕೀಯದ ದಿಕ್ಸೂಚಿ ಎಂದು ಪರಿಗಣಿಸಲಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿದ್ದು,ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವವಾಗಿ ಗೆದ್ದು ಅಧಿಕಾರಕ್ಕೆ ಬಂದು ಹೊಸ ಭರವಸೆ ಮೂಡಿಸಿದೆ.

ಉತ್ತರಪ್ರದೇಶದಲ್ಲಿ ಯೋಗಿಗೆ ಮತ್ತೆ ಸಿಎಂ ಆಗುವ ಯೋಗ

403 ಸದಸ್ಯ ಬಲದ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದಿದ್ದು, ಮಿತ್ರ ಪಕ್ಷಗಳು ಹಲವು ಸ್ಥಾನಗಳಲ್ಲಿ ಗೆದ್ದಿವೆ. ಬಿಜೆಪಿ 252 ಸ್ಥಾನ ಗೆದ್ದಿದ್ದು, ಎನ್ ಡಿಎ ಮೈತ್ರಿ ಕೂಟದ ಅಪ್ನಾ ದಳ(ಸೋನೆಲಾಲ್ ) 11, ನಿರ್ಬಲ್ ಇಂಡಿಯನ್ ಶೋಷಿತ್ ಹಮಾರಾ ಆಮ್ ದಳ(ನಿಶದ್) 7 ಸ್ಥಾನ ಗೆದ್ದು ಗಮನ ಸೆಳೆದಿದೆ. ಪ್ರಮುಖ ವಿಪಕ್ಷ ಅಖಿಲೇಶ್ ಯಾದವ್ ಅವರ ನಾಯಕತ್ವದ ಸಮಾಜವಾದಿ ಪಕ್ಷ 114 ಸ್ಥಾನ ಗೆದ್ದಿದೆ. , ಬಿಎಸ್ ಪಿ ಕೇವಲ ಒಂದು ಸ್ಥಾನ ಗೆದ್ದಿದ್ದು ಎಂದೂ ಕಂಡರಿಯದ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಭಾರಿ ಪ್ರಚಾರ ಕೈಗೊಂಡರೂ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಜನಸತ್ತಾ ದಳ ಡೆಮಾಕ್ರಟಿಕ್ 2 ಸ್ಥಾನ ಗೆದ್ದಿದೆ. ಎಸ್ ಪಿ ಮಿತ್ರಪಕ್ಷ ಆರ್ ಎಲ್ ಡಿ 8 ಸ್ಥಾನಗಳನ್ನು ಗೆದ್ದಿದೆ. ಸುಹೇಲ್ದೇವ್ ಭಾರತೀಯ ಸಮಾಜ 6 ಸ್ಥಾನಗಳನ್ನು ಗೆದ್ದಿದೆ.

ಪಂಜಾಬ್ ಆಮ್ ಆದ್ಮಿಗೆ ಭಗವಂತನ ಕೃಪೆ

ಸಿಖ್ಭರ ನಾಡು ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ದೈತ್ಯ ಶಕ್ತಿಯಾಗಿ ಹೊರ ಹೊಮ್ಮಿದೆ. 117 ಸ್ಥಾನಗಳ ಪೈಕಿ ಭಗವಂತ್ ಮಾನ್ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದ ಆಮ್ ಆದ್ಮಿ ಪಾರ್ಟಿ 92 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಐತಿಹಾಸಿಕ ಗೆಲುವು ತನ್ನದಾಗಿಸಿಕೊಂಡಿದೆ. ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದಿದ್ದು, ಭಾರಿ ಮುಖಭಂಗ ಅನುಭವಿಸಿದೆ. ಸಿಎಂ ಚರಣ್ ಜಿತ್ ಸಿಂಗ್ ಚೆನ್ನಿ, ನವಜೋತ್ ಸಿಂಗ್ ಸಿಧು ಸೇರಿ ಘಟಾನುಘಟಿ ನಾಯಕರುಗಳೆಲ್ಲ ಸೋಲು ಅನುಭವಿಸಿದ್ದಾರೆ. ಬಿಜೆಪಿ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಶಿರೋಮಣಿ ಅಕಾಲಿ ದಳ 3, ಬಿಎಸ್ ಪಿ 1, ಪಕ್ಷೇತರ 1 ಸ್ಥಾನ ಪಡೆದುಕೊಂಡಿದ್ದಾರೆ.

ಉತ್ತರಾಖಂಡದದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಸಿಎಂ ಗೆ ಆಘಾತ 

70 ಸ್ಥಾನಗಳ ಪೈಕಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಭರ್ಜರಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ಅಚ್ಚರಿಯೆಂದರೆ ಮತದಾರರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸೋಲು ಉಣಿಸಿದ್ದಾರೆ. ಸದ್ಯ ಯಾರು ಮುಂದಿನ ಸಿಎಂ ಆಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಕಾಂಗ್ರೆಸ್ 19 ಸ್ಥಾನಗಳನ್ನು ಗೆದ್ದು ಪ್ರಮುಖ ವಿಪಕ್ಷವಾಗಿದೆ. ಬಿಎಸ್ ಪಿ 2, ಪಕ್ಷೇತರರು 2 ಸ್ಥಾನಗಳನ್ನು ಗೆದ್ದಿದ್ದಾರೆ.

ಗೋವಾದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ

40 ಸದಸ್ಯ ಬಲದ ಗೋವಾ ದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿದ್ದು, ಸರಕಾರ ರಚಿಸಲಿದೆ. ಬಿಜೆಪಿಗೆ ಮೂವರು ಇತರರು ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದು, ಪ್ರಮೋದ್ ಸಾವಂತ್ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕಾಂಗ್ರೆಸ್ 11 , ಆಮ್ ಆದ್ಮಿ ಪಕ್ಷ 2 , ಪಕ್ಷೇತರರು 3 , ಎಂಜಿಪಿ 2 ಮತ್ತು ಆರ್ ಜಿಪಿ 1 ಸ್ಥಾನ ಗೆದ್ದಿದೆ.

ಮಣಿಪುರದಲ್ಲಿ ಬಿಜೆಪಿಗೆ ಸಲಾಂ

60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಪಡೆದಿದೆ. ಸಂಯುಕ್ತ ಜನತಾ ದಳ 6 ಸ್ಥಾನ, ಕಾಂಗ್ರೆಸ್ 4, ಕುಕಿ ಪೀಪಲ್ಸ್ ಮೈತ್ರಿಕೂಟ 2 , ನಾಗಾ ಪೀಪಲ್ಸ್ ಫ್ರಂಟ್ 5 , ಎಂಪಿಪಿ 8 ಮತ್ತು ಪಕ್ಷೇತರರು 3 ಸ್ಥಾನಗಳನ್ನು ಗೆದ್ದಿದ್ದಾರೆ. ಬಿರೇನ್ ಸಿಂಗ್ ಅವರು ಮತ್ತೆ ಸಿಎಂ ಆಗಲಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.