Karnataka: ಉದ್ಯಮಿಗಳಿಗೆ ಮತ್ತೆ ವಿದ್ಯುದಾಘಾತ!
- ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸುವವರಿಗೆ ವಿದ್ಯುತ್ ಸಾಗಣೆ ವೆಚ್ಚ ಅನ್ವಯ
Team Udayavani, Jul 3, 2023, 7:45 AM IST
ಬೆಂಗಳೂರು: “ದುಬಾರಿ ಬಿಲ್” ಹೊರೆ ತಗ್ಗಿಸಿಕೊಳ್ಳಲು ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವ ಉದ್ಯಮಿಗಳಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ಪರೋಕ್ಷವಾಗಿ ಮತ್ತೂಂದು “ಶಾಕ್” ನೀಡಿದೆ!
ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್ ಖರೀದಿಸುವವರಿಗೆ ಆ ವಿದ್ಯುತ್ ಸಾಗಾಣಿಕೆ ವೆಚ್ಚ (ವೀಲಿಂಗ್ ಚಾರ್ಜ್)ಕ್ಕೆ ಪ್ರತೀ ಯೂನಿಟ್ಗೆ 35 ಪೈಸೆ ಹೆಚ್ಚುವರಿ “ತೆರಿಗೆ ಭಾರ’ (ಹೆಚ್ಚುವರಿ ಸರ್ಚಾರ್ಜ್) ವಿಧಿಸಿ ಜೂನ್ನಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ತಮ್ಮದೇ ಆದ ವಿದ್ಯುತ್ ಉತ್ಪಾದನ ಘಟಕಗಳನ್ನು ಹೊರತುಪಡಿಸಿ, ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್ ಖರೀದಿಸುವ ಉದ್ಯಮಿಗಳಿಗೆ ಇದರ ಹೊರೆ ಬೀಳಲಿದೆ.
ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಕಳೆದ ಮೇ 12ರಂದು ಹೊರಡಿಸಿದ್ದ ಆದೇಶದಲ್ಲಿ ಈ ವರ್ಗಕ್ಕೆ ಪ್ರತೀ ಯೂನಿಟ್ಗೆ 1.48 ರೂ. ಹೆಚ್ಚುವರಿ ಸರ್ಚಾರ್ಜ್ ವಿಧಿಸಿ ಆದೇಶ ಹೊರಡಿಸಿತ್ತು. ಅನಂತರ ಕೆಇಆರ್ಸಿಯ ಈ ಆದೇಶವನ್ನು ಪ್ರಶ್ನಿಸಿ ಸೋಹನ್ ರಿನ್ಯೂವೇಬಲ್ ಎನರ್ಜಿ ಇಂಡಿಯಾ ಪ್ರೈ.ಲಿ. ಹಾಗೂ ಉಮಿಯಾ ಹೋಲ್ಡಿಂಗ್ ಪ್ರೈ.ಲಿ. ಹೈಕೋರ್ಟ್ನಲ್ಲಿ ಈಚೆಗೆ ಮೇಲ್ಮನವಿ ಸಲ್ಲಿಸಿದ್ದವು. ಬೆಸ್ಕಾಂ ಹಾಗೂ ಪಿಸಿಕೆಎಲ್ಗಳನ್ನು ಕೂಡ ಇದರಲ್ಲಿ ಭಾಗೀದಾರರನ್ನಾಗಿ ಮಾಡಲಾಗಿತ್ತು.
ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತೀ ಯೂನಿಟ್ಗೆ 35 ಪೈಸೆ ಹೆಚ್ಚುವರಿ ಸರ್ಚಾರ್ಜ್ ವಿಧಿಸಲು ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಜೂನ್ ಬಿಲ್ನಿಂದ ಸಂಗ್ರಹಿಸಲು ಬೆಸ್ಕಾಂ ಸೂಚನೆ ನೀಡಿದೆ. ವಿದ್ಯುತ್ ಸರಬರಾಜು ಕಂಪೆನಿಗಳಿಂದ ಖರೀದಿಸುವ ವಿದ್ಯುತ್ ದುಬಾರಿಯಾಗಿ ಪರಿಣಮಿಸಿದ ಹಿನ್ನೆಲೆಯಲ್ಲಿ ಉದ್ಯಮಿಗಳು ಈಚೆಗೆ ಮುಕ್ತ ಮಾರುಕಟ್ಟೆ ಮೊರೆ ಹೋಗಿದ್ದಾರೆ. ಇದರಿಂದ ಹೊರೆ ತುಸು ಕಡಿಮೆಯೂ ಆಗುತ್ತಿದೆ. ಈ ಮಧ್ಯೆಯೇ ಹೆಚ್ಚುವರಿ ತೆರಿಗೆ ಭಾರ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.