![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 26, 2021, 2:29 PM IST
ಕುಣಿಗಲ್: ಪಟ್ಟಣದಲ್ಲಿರುವ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ ಅವರ ಕಾಂಪ್ಲೆಕ್ಸ್ ನಲ್ಲಿ ನಾಲ್ಕು ಮಂದಿ ದುಷ್ಟಕರ್ಮಿಗಳು ಚಾಮುಂಡಿ ಟೆಕ್ಸ್ ಟೈಲ್ಸ್ ಬಟ್ಟೆ ಅಂಗಡಿಯ ಬೀಗ ಮುರಿದು ಲಕ್ಷಾಂತರ ರೂ ನಗದು ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಎಂದಿನಂತೆ ಬೆಟ್ಟೆ ಅಂಗಡಿ ಸಿಬ್ಬಂದಿಗಳು ವ್ಯಾಪಾರ ಮುಗಿಸಿಕೊಂಡು ಗುರುವಾರ ರಾತ್ರಿ 10 ಗಂಟೆ ಸಮಯದಲ್ಲಿ ಅಂಗಡಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದಾರೆ. ಆದರೆ ಶುಕ್ರವಾರ ಮಧ್ಯ ರಾತ್ರಿ 2 ರ ಸಮಯದಲ್ಲಿ ನಾಲ್ಕು ಮಂದಿ ದುಷ್ಟಕರ್ಮಿಗಳ ತಂಡವು, ಅಂಗಡಿ ಬೀಗ ಮುರಿದು, ಒಳಗೆ ಪ್ರವೇಶಿಸಿ, ಕ್ಯಾಶ್ ಕೌಂಟರ್ ನಲ್ಲಿ ಇದ್ದ ಬೀಗವನ್ನು ಮುರಿದು, 1.20 ಲಕ್ಷ ನಗದು, 10 ಸಾವಿರರೂ ಬೆಲೆ ಬಾಳುವ ಬಟ್ಟೆಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಚಿವ ಬಿ.ಸಿ.ಪಾಟೀಲ್
ಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಬಿ.ಎಂ ರಸ್ತೆಯ ಜನ ನಿಬಿಡ ಪ್ರದೇಶದಲ್ಲಿ ಕಳ್ಳತನವಾಗಿರುವುದು ವ್ಯಾಪಾರಸ್ಥರನ್ನು ಬೆಚ್ಚಿ ಬೀಳಿಸಿದೆ. ಪಟ್ಟಣದ ಠಾಣೆಯಲ್ಲಿ ಪ್ರತ್ಯೇಕವಾಗಿ ಅಪರಾಧ ವಿಭಾಗದ ಪೊಲೀಸರು ಇದ್ದರು ಸಹ ಕಳ್ಳತನವಾಗಿರುವುದು ಈ ವಿಭಾಗದ ಪೊಲೀಸರ ಕರ್ತವ್ಯವನ್ನು ಪ್ರಶ್ನಿಸುವಂತ್ತಾಗಿದೆ. ಈ ಸಂಬಂಧ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.