ತುಂಗಭದ್ರಾ ನದಿಗೆ ಹೆಚ್ಚುವರಿ ನೀರು: ನಿಷೇಧವಿದ್ದರೂ ಬೋಟಿಂಗ್


Team Udayavani, Oct 9, 2021, 4:19 PM IST

tu-1

ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ತುಂಗಭದ್ರಾ ಡ್ಯಾಂಗೆ 60 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಡ್ಯಾಂ ಭರ್ತಿ ಆಗಿರುವುದರಿಂದ ಹರಿದು ಬರುತ್ತಿರುವ ನೀರಿನಲ್ಲಿ ಐವತ್ತು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ .ಇದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸಂಬಂಧಪಟ್ಟ ಗ್ರಾಪಂ ಗಳ ಮೂಲಕ ಡಂಗುರ ಸಾರಿಸಿ ಮುನ್ನೆಚ್ಚರಿಕೆ ನೀಡಿದೆ. ತಾಲ್ಲೂಕಿನ ಸಣಾಪುರ ವಿರುಪಾಪುರಗಡ್ಡೆ ಹನುಮನಹಳ್ಳಿ ಋಷಿಮುಖ ಪರ್ವತ, ನವವೃಂದಾವನ ಗಡ್ಡೆ ಸಂಪೂರ್ಣ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ.

ನದಿಯಲ್ಲಿ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದ ನದಿಯಲ್ಲಿ ಬೋಟಿಂಗ್ ಸೇರಿದಂತೆ ಹರಿಗೋಲು ಹಾಕುವುದನ್ನು ಜಿಲ್ಲಾಡಳಿತ ನಿಷೇಧ ಮಾಡಿದ್ದರೂ ಆನೆಗುಂದಿಯ ನವವೃಂದಾವನ ಗಡ್ಡೆಗೆ ಶನಿವಾರ ಬೆಳಿಗ್ಗೆ ಭಕ್ತರು ಮತ್ತು ಕೆಲವು ಅರ್ಚಕರನ್ನ ಸಾಗಿಸಲು ಬೋಟನ್ನು ಹರಿಯುವ ನದಿಯಲ್ಲಿಯೇ ಬಳಸಲಾಗಿದೆ .ಇದರಿಂದ ಬೋಟ್ ನಲ್ಲಿ ತೆರಳುವ ಪ್ರಯಾಣಿಕರಿಗೆ ಜೀವ ಅಪಾಯವಾಗುವ ಕುರಿತು ಗ್ರಾಮ ಪಂಚಾಯತ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಶುಕ್ರವಾರವೇ ಬೋಟ್ ಹಾಕುವ ಗುತ್ತಿಗೆದಾರರಿಗೆ ಮುನ್ನೆಚ್ಚರಿಕೆ ನೀಡಿ ಬೋಟನ್ನು ಹಾಕದಂತೆ ಎಚ್ಚರಿಕೆ ನೀಡಿದ್ದರೂ ಶನಿವಾರ ಬೆಳಿಗ್ಗೆ ಕೆಲವರ ಒತ್ತಡದಿಂದ ಸುಮಾರು ಇಪ್ಪತ್ತು ಜನರನ್ನು ಬೋಟ್ ನಲ್ಲಿ ಕುಳ್ಳಿರಿಸಿಕೊಂಡು ಹರಿಯುತ್ತಿರುವ ನದಿಯಲ್ಲಿಯೇ ನವವೃಂದಾವನ ಗಡ್ಡೆಗೆ ಹೋಗಿದ್ದಾರೆ .

ಈ ಮಧ್ಯೆ ಆನೆಗೊಂದಿ ಗ್ರಾ ಪಂ ಪಿಡಿಒ ಕೃಷ್ಣಪ್ಪ ಉದಯವಾಣಿ ಜತೆ ಮಾತನಾಡಿ ಮುನ್ನೆಚ್ಚರಿಕೆ ನೀಡಿದ್ದರೂ ಸಹ ಬೋಟ್ ನಡೆಸುವ ಗುತ್ತಿಗೆದಾರ ಸೂಚನೆ ಮೀರಿ ಭಕ್ತರು ಹಾಗೂ ಅರ್ಚಕರನ್ನ ನವವೃಂದಾವನ ಗೆ ಕರೆದುಕೊಂಡು ಹೋಗಿದ್ದಾರೆ ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ಗುತ್ತಿಗೆದಾರನಿಗೆ ಎಚ್ಚರಿಕೆ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ .

ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್

ಈ ಮಧ್ಯೆ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಬೋಟಿಂಗ್ ಮೂಲಕ ನವವೃಂದಾವನ ಗಡ್ಡಿ ಗೆ ತೆರಳಿ ಅಲ್ಲಿ ಯತಿಗಳ ವೃಂದಾವನಕ್ಕೆ ಪೂಜೆ ಮತ್ತು ಭಜನೆ ಮಾಡುವ ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್ ಆಗಿದೆ. ಇದರಿಂದ ಹೆಚ್ಚಿನ ಭಕ್ತರು ನದಿ ಪಾತ್ರಕ್ಕೆ ಆಗಮಿಸಿ ತಮ್ಮನ್ನು ಸಹ ನವವೃಂದಾವನ ಗಡ್ಡೆಗೆ ಕರೆದುಕೊಂಡು ಹೋಗುವಂತೆ ಬೋಟ್ ಗುತ್ತಿಗೆದಾರ ಮತ್ತು ಗ್ರಾ.ಪಂ. ಅಧಿಕಾರಿಗಳಿಗೆ ಒತ್ತಡ ಹಾಕಿದ ಘಟನೆಯೂ ಜರುಗಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.