![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 17, 2023, 8:07 AM IST
ನವದೆಹಲಿ:ದೆಹಲಿಯ ಅಬಕಾರಿ ನೀತಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಭಾನುವಾರ ಒಂಭತ್ತು ಗಂಟೆಗಳ ವಿಚಾರಣೆ ನಡೆಸಿದೆ. ರಾತ್ರಿ 8.30ಕ್ಕೆ ನಿಮಿಷಕ್ಕೆ ವಿಚಾರಣೆ ಮುಗಿಸಿ ಹೊರಬಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಪತ್ರಕರ್ತರು ಅವರ ಪ್ರತಿಕ್ರಿಯೆಗೆ ಬಯಸಿದರೂ, ಅವರು ಮಾತನಾಡದೆ ತೆರಳಿದರು.
ಬೆಳಗ್ಗೆ 11 ಗಂಟೆಗೆ ಆಗಮಿಸಿದ ಅವರನ್ನು ಸಿಬಿಐನ ಪ್ರಧಾನ ಕಚೇರಿಯಲ್ಲಿ ಇರುವ ಭ್ರಷ್ಟಾಚಾರ ನಿಗ್ರಹ ವಿಭಾಗಕ್ಕೆ ಕರೆದೊಯ್ಯಲಾಯಿತು. ತನಿಖಾ ಸಂಸ್ಥೆಯ ಕಚೇರಿಯಲ್ಲಿಯೇ ಅವರಿಗೆ ಮಧ್ಯಾಹ್ನದ ಊಟವನ್ನು ನೀಡಲಾಗಿತ್ತು.
ವಿಚಾರಣೆ ಪ್ರಗತಿಯಲ್ಲಿ ಇರುವಂತೆಯೇ ಆಪ್ನ ಮುಖಂಡರು ಮತ್ತು ಕಾರ್ಯಕರ್ತರು ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದರು. ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಲಿದೆ ಎಂಬ ಆತಂಕವನ್ನೂ ಪಕ್ಷದ ನಾಯಕ ಗೋಪಾಲ್ ರಾಯ್ ವ್ಯಕ್ತಪಡಿಸಿದ್ದರು. ದೆಹಲಿ ಮುಖ್ಯಮಂತ್ರಿ ವಿಚಾರಣೆ ಖಂಡಿಸಿ ಪ್ರತಿಭಟನೆ ನಡೆಸಿದ ಆಪ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.