ಛದ್ಮ ಯುದ್ಧಕ್ಕೆ ನಿರೀಕ್ಷಿತ ಉತ್ತರ ಕಾರ್ಗಿಲ್‌ ಕದನ!


Team Udayavani, Jul 26, 2023, 7:14 AM IST

KARGIL

ಯುದ್ಧವೆಂದರೆ ಕೇವಲ ಎರಡು ರಾಷ್ಟ್ರಗಳ ನಡುವಿನ ಕಿತ್ತಾಟವಲ್ಲ ಅಥವಾ ಸೈನಿಕರು ದಾಳಿಮಾಡಿ ಎದುರಾಳಿ ಗಳನ್ನು ನಾಶ ಮಾಡುವುದೆಂದಲ್ಲ. ಅದೊಂದು ಭಾವನಾತ್ಮಕ ವಿಚಾರ. ಅದಕ್ಕೆ ದೀರ್ಘ‌ಕಾಲದ ತಯಾರಿ ಬೇಕು. ಸರಕಾರವೊಂದು ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡು ತನ್ನ ರಾಷ್ಟ್ರವನ್ನು ಮಾನಸಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸನ್ನದ್ಧಗೊಳಿಸಿಕೊಳ್ಳಬೇಕು. ಸಂಬಂಧ ಪಟ್ಟ ಎಲ್ಲ ಇಲಾಖೆಗಳು ಪೂರಕವಾಗಿ ಕೆಲಸ ಮಾಡಲಾರಂಭಿಸಬೇಕು. ಅಲ್ಲದೆ ಜಗತ್ತಿನ ರಾಷ್ಟ್ರಗಳಿಗೆ ಯುದ್ಧದ ಆವಶ್ಯಕತೆಗಳನ್ನು ಮನಗಾಣಿಸಬೇಕು. ಹೀಗೆ ಎಲ್ಲವನ್ನೂ ಅಚ್ಚುಕಟ್ಟಾಗಿ ನಿಭಾಯಿಸಿ ರಾಷ್ಟ್ರಕ್ಕಾಗಿ ರಣಾಂಗಣದಲ್ಲಿ ಹೋರಾಡಿ ಮಡಿದ ವೀರಯೋಧರು ಜಯಿಸಿದ ಕಾರ್ಗಿಲ್‌ ವಿಜಯದ ಕಥನವನ್ನು ಈ ಕಾಲಕ್ಕೆ ಒಮ್ಮೆ ಮೆಲುಕು ಹಾಕಲೇಬೇಕು.

ಭಾರತ ಅಣ್ವಸ್ತ್ರ ಪ್ರಯೋಗಿಸಿ 15 ದಿನಗಳಲ್ಲಿ ಪಾಕಿಸ್ಥಾನ ಕೂಡ ಅಣು ಪರೀಕ್ಷೆ ನಡೆಸಿತ್ತು. ಪರಿಣಾಮ ಜಗತ್ತಿನ ರಾಷ್ಟ್ರಗಳು ಭಾರತ ಮತ್ತು ಪಾಕಿಸ್ಥಾನದ ಮೇಲೆ ನಿಬಂìಧ ಹೇರಿದವು. ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳೆಯುತ್ತಾ ದಾಯಾ ದಿಗಳೆಂಬಂತೆ ಬೇರೆಯಾಗಿದ್ದವರು ಸೇರುವ ಸಮಯ ಬಂದಿತ್ತು. ಭಾರತ ಹಿರಿಯಣ್ಣನಾಗಿ ಪಾಕಿಸ್ಥಾನ ವನ್ನು ತಬ್ಬಿಕೊಳ್ಳಲು, ಸ್ನೇಹದ ಮಾತುಗಳನ್ನಾಡಲು ಕೈ ಚಾಚಿತು. ಅಂದಿನ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ 1999ರ ಫೆ.20ರಂದು ಭಾರತದಿಂದ ಪಾಕಿಸ್ಥಾನದತ್ತ ಬಸ್ಸೊಂದನ್ನು ಹೊರಡಿಸಿದರು. ಇತಿ ಹಾಸದ ಪುಟಕ್ಕೆ ಹೊಸ ದಾಖಲೆ ಸೇರಿಸುವ ಸಂತಸ.

ಇನ್ನು ಮುಂದೆ ನಾವಿಬ್ಬರೂ ವೈರಿಗಳಲ್ಲ! ಬಸ್‌-ರೈಲುಗಳ ಮೂಲಕ ಸಂಬಂಧ ಬೆಸೆಯಲಿರುವ ಹಳೆಯ ಗೆಳೆ ಯರು! ಅಖಂಡ ಭಾರತ ಮಾತೆಯ ಅಮೃತ ಪುತ್ರರು! ಪೂರ್ವಜರ ಪ್ರಮಾದಗಳನ್ನು ತಿದ್ದುವ ಪ್ರಜ್ಞಾವಂತ ಋಷಿ ಸಂತಾನರು ಎಂದು ಒಳಗೊಳಗೆ ಬೀಗಲಾರಂಭಿಸಿದ್ದರು (ಆದರೆ ವಾಸ್ತವ ಬೇರೆಯೇ ಇತ್ತು). ಸ್ವತಃ ಅಟಲ್‌ಜೀ ಎಲ್ಲ ಒತ್ತಡಗಳನ್ನು ಮೀರಿ ಪಾಕಿಸ್ಥಾನಕ್ಕೆ ಹೊರಟರಷ್ಟೇ ಅಲ್ಲ ಲಾಹೋರ್‌ ಒಪ್ಪಂದಕ್ಕೆ ಸಹಿ ಹಾಕಿ, ಶಿಮ್ಲಾ ಒಪ್ಪಂದಕ್ಕೆ ಬದ್ಧರಾಗುವಂತೆ ಮತ್ತು ಜಮ್ಮು-ಕಾಶ್ಮೀರದ ಸಮಸ್ಯೆ ಗಳನ್ನು ತಮ್ಮೊಳಗೆ ಬಗೆಹರಿಸಿಕೊಳ್ಳುವಂತೆ ಭರವಸೆಯನ್ನು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಂಡರು.

ಪಾಕಿಸ್ಥಾನ ನರಿ ಬುದ್ಧಿಯ ರಾಷ್ಟ್ರ. ಅಲ್ಲಿ ಕೊಟ್ಟ ಮಾತುಗಳಿಗಾಗಲಿ, ಇಟ್ಟ ಭರವಸೆಗಳಿಗಾಗಲಿ ಬೆಲೆ ಇಲ್ಲ. ಧರ್ಮಾಂಧತೆಯೆ ತುಂಬಿದ ಆ ದೇಶ ಎಂದೂ ತನ್ನ ಮೂಲ ಮನೋಧರ್ಮದ ಗುಣ ಬಿಡದು. ಹೀಗಾ ಗಿಯೇ ಇತ್ತ ಜಂಟಲ್‌ವುನ್‌ ಒಪ್ಪಂದದ ಕರಾರುಗಳನ್ನು ಮರೆತು ಲಾಹೋರ್‌ ಘೋಷಣೆಗೆ ಅಂಕಿತ ಬಿದ್ದ ಐದೇ ವಾರಗಳಲ್ಲಿ ಅಂದರೆ 1999 ಮಾ.28ರ ವೇಳೆಗೆ ಕಾರ್ಗಿಲ್‌ ಬೆಟ್ಟಗಳತ್ತ ಪಾಕಿಸ್ಥಾನಿ ಸೇನೆ ದಾಳಿಗೆಂದು ಕಾಲಿಟ್ಟಿತ್ತು.

ಪಾಕಿಸ್ಥಾನ ಭಾರತದೊಂದಿಗೆ 1948, 1965, 1971ರ ಮೂರು ನೇರ ಯುದ್ಧಗಳಲ್ಲಿ ಸೋಲುಂಡ ಮೇಲೆ ಈ ಬಾರಿ ಛದ್ಮಯುದ್ಧದ ಮಾರ್ಗಹಿಡಿಯಿತು. ಪಾಕೀ ಸೈನ್ಯ ಹಾಗೂ ಐಎಸ್‌ಐಗಳು ಸಮರ್ಥ ಯೋಜನೆಗಳನ್ನು ರೂಪಿಸಿದ್ದವು. ಯೋಜನೆಯಂತೆ ಭಾರತದ ಸೇನೆಯ ದಿಕ್ಕು ತಪ್ಪಿಸಲು ಪಾಕ್‌ ಆಕ್ರಮಿತ ಜಿಲ್ಲೆಗಳಾದ ರಜೌರಿ, ಪೂಂಛ, ಗಂದರ್‌ಬಾಲ್‌, ಅನಂತನಾಗ್‌ಗಳಲ್ಲಿ ಭಯೋ ತ್ಪಾದಕ ಕೃತ್ಯ ಮಿತಿ ಮೀರಿತು. ಪಾಕಿಸ್ಥಾನದ ಸೇನಾ ಮುಖ್ಯಸ್ಥ ಫ‌ರ್ವೇಜ್‌ ಮುಷರ್ರಫ್ ತಡಮಾಡಲಿಲ್ಲ ಆಪ ರೇಷನ್‌ ಬಿದ್ರ್ಗೆ ಚಾಲನೆ ನೀಡಿದರು. ಶತ್ರುಗಳಿಗೆ ತಿಳಿಯುವ ಮುನ್ನ ಎತ್ತರದ ಗುಡ್ಡಗಳನ್ನು ವಶಪಡಿ ಸಿಕೊಳ್ಳುವುದೇ ಈ ಯೋಜನೆಯ ಗುರಿಯಾಗಿತ್ತು. ಮೇ 8ರ ಹೊತ್ತಿಗೆ ಪಾಕಿಗಳು ಗುಡ್ಡಗಳನ್ನು ಆಕ್ರಮಿಸಿ ಬಂಕರುಗಳಲ್ಲಿ ಕುಳಿತುಬಿಟ್ಟರು. ಮರುದಿನ ಸೇನಾ ಠಾಣೆಗೆ ದನಗಾಯಿಗಳು ಸುದ್ದಿ ತಲುಪಿಸಿದರು.

ಮರುದಿನವೇ ಸೇನೆ ಜಾಟ್‌ ರೆಜಿಮೆಂಟ್‌ನ ಕ್ಯಾಪ್ಟನ್‌ ಸೌರಭ್‌ ಕಾಲಿಯಾರನ್ನು ಕಳುಹಿಸಿತು. 6 ಜನರ ತಂಡ ದೊಂದಿಗೆ ಭಜರಂಗ್‌ ಪೋಸ್ಟಿನತ್ತ ಹೊರಟರು, ಶತ್ರುಗಳಿ ರುವುದು ಖಾತ್ರಿಯಾಗಿ ತಂಡ ಕದನಕ್ಕಿಳಿಯಿತು. ಶತ್ರುಗಳ ಸಂಖ್ಯೆಯನ್ನು ಅಂದಾಜಿಸಲು ಎಡವಿದ್ದ ತಂಡ ಜೆಹಾದಿ ಸೈನಿಕರ ಬಂಧನದಲ್ಲಿ ಸೆರೆ ಸಿಕ್ಕಿ, ಚಿತ್ರಹಿಂಸೆಗೊಳಗಾಗಿ 22 ದಿನಗಳ ಸೆರೆಯ ಅನಂತರ ಕೊಲ್ಲಲ್ಪಟ್ಟರು.

ಮೇ 24ರಂದು ಇದು ವ್ಯವಸ್ಥಿತ ದಾಳಿ ಎಂದರಿತ ಸೇನೆ ಪ್ರಧಾನಿ, ರಕ್ಷಣ ಸಚಿವರು, ವಿದೇಶಾಂಗ ಸಚಿವರು, ಐಬಿ, ರಾಗಳು ಮತ್ತು ಮೂರೂ ಸೇನೆಯ ಮುಖ್ಯಸ್ಥ ರುಗಳನ್ನು ಸೇರಿಸಿ ಮಹತ್ವದ ಸಭೆ ನಡೆಸಿತು. ಭಾರತ ಸೇನೆಯ ಜನರಲ್‌ ಮಲಿಕ್‌ ಸೇನೆಯ ಮೂರೂ ವಿಭಾಗ ಗಳು ಜತೆಗೂಡಿ ದಾಳಿಗೈದರೆ ಮಾತ್ರ ಪರಿಹಾರ. ಅನು ಮತಿ ಕೊಡಿ ಎಂದು ಪ್ರಧಾನಿಗೆ ತಾಕೀತು ಮಾಡಿದರು. ಅನು ಮತಿ ದೊರೆತ ಅನಂತರ ಕೊನೆಯಲ್ಲಿ ಎದ್ದುನಿಂತು ನಿಶ್ಚಿತ ಗೆಲುವಿನ ಭರವಸೆಯಿಂದ ಇಡೀ ಹೋರಾಟ ವನ್ನು ಆಪರೇಷನ್‌ ವಿಜಯ ಎಂದು ಕರೆಯಲಾಯಿತು.

ಯುದ್ಧ ಬಹಳ ಜೋರಾಗಿಯೇ ಶುರುವಾಯಿತು. ದಾಳಿ-ಪ್ರತಿದಾಳಿಗಳು ನಡೆದವು. ವಿಮಾನಗಳ ವೇಗದ ಹಾರಾಟ, ಹೆಲಿಕಾಪ್ಟರ್‌ಗಳ ಭರ್ಜರಿ ಸದ್ಧು, ಮದ್ದು-ಗುಂಡುಗಳ ಅಬ್ಬರದ ಸಿಡಿತ, ರಾಷ್ಟ್ರಕ್ಕಾಗಿ ಪ್ರಾಣಕೊಡುವ ಸೈನಿಕನ ತುಡಿತ ಎಲ್ಲವೂ ಜೋರಾಗಿಯೇ ಸಾಗಿತ್ತು. ಮೊದಮೊದಲು ಸ್ವಲ್ಪ ನಷ್ಟ ಅನುಭವಿಸಿದ ಭಾರತೀಯ ಸೇನೆ ಸಜ್ಜನರ ಸೋಗಿನ ವ್ಯಾಘ್ರ ಪಾಕಿಗಳನ್ನು ಬಗ್ಗುಬಡೆದು ತೋಲೋಲಿಂಗ್‌, ಟೈಗರ್‌ ಹಿಲ್‌, ಪಾಯಿಂಟ್‌ 5140, 4700, 5100, ಲೋನ್‌ ಹಿಲ್‌ ಮತ್ತು ಥ್ರಿà ಪಿಂಪಲ್ಸ್‌ಗಳನ್ನು ಸಹಿತ ಹಲವಾರು ಪ್ರದೇಶ ಗಳನ್ನು ಜುಲೈ 15ರ ಹೊತ್ತಿಗೆ ಅವರ ಕಪಿಮುಷ್ಟಿಯಿಂದ ವಶಪಡಿಸಿಕೊಂಡಿತು.

ಸುಮಾರು 527 ಯೋಧರ ಬಲಿ ದಾನದ ಬಳಿಕ 1999ರ ಜುಲೈ 26ಕ್ಕೆ ಕಾರ್ಯಾಚರಣೆ ನಿಲ್ಲಿಸಿ ಆಪರೇಷನ್‌ ವಿಜಯದ‌ ಸಂಭ್ರಮಾಚರಣೆಯಲ್ಲಿ ತೊಡಗಿತ್ತು. ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿತ್ತು. ಪಾಕಿಸ್ಥಾನ ತೀವ್ರ ಮುಖಭಂಗಕ್ಕೆ ಒಳಗಾಗಿತಲ್ಲದೆ ಬೆನ್ನಿಗೆ ಚೂರಿಹಾಕುವ ರಾಷ್ಟ್ರ ಎಂದು ಜಗತ್ತಿಗೆ ತಿಳಿಯಿತು.

ಕ್ಯಾಪ್ಟನ್‌ ಸೌರಭ್‌ ಕಾಲಿಯಾ, ಕ್ಯಾಪ್ಟನ್‌ ವಿಕ್ರಂ ಬಾತ್ರಾ, ಗ್ರೇನೇಡಿಯರ್‌ ಯೋಗೇಂದರ್‌ ಸಿಂಗ್‌ ಯಾದವ್‌, ಕ್ಯಾಪ್ಟನ್‌ ಅಮೋಲ್‌ ಕಾಲಿಯಾ, ರಾಜೇಶ್‌ ಅಧಿಕಾರಿ, ಅಜಯ್‌ ಅಹುಜಾ, ಮೇಜರ್‌ ವಿವೇಕ್‌ ಗುಪ್ತಾ, ಕೆಂಗುರುಸೆ, ಲೆಫ್ಟಿನೆಂಟ್‌ ಮನೋಜ್‌ ಕುಮಾರ್‌ ಪಾಂಡೆ ಸೇರಿದಂತೆ ಸಾವಿರಾರು ತರುಣ ಯೋಧರ ಸಾಹಸ ಮತ್ತು ತ್ಯಾಗದ ಪ್ರತೀಕವಾಗಿ ಗೆಲುವು ಪ್ರಾಪ್ತವಾಯಿತು. ಅಂತಹ ಸಾವಿರ ಸಾವಿರ ಯೋಧರ ಬಲಿದಾನವನ್ನು ನಾವಿಂದು ಸ್ಮರಿಸಿಕೊಳ್ಳಬೇಕಿದೆ. ನಾವು ಈ ಬಲಿದಾನದ ಕಥನಗಳನ್ನು ಮರೆತದ್ದೇ ಆದರೆ ಅದು ರಾಷ್ಟ್ರಕ್ಕೆ ಮಾಡುವ ಮೋಸ ಎಂಬುದು ನನ್ನ ಅಭಿಪ್ರಾಯ.

ಶಾಂತಿಯ ಹೊತ್ತಲ್ಲಿ ಮಗ ತಂದೆಯ ಶವಕ್ಕೆ ಅಂತ್ಯಸಂಸ್ಕಾರ ಮಾಡಿದರೆ, ಯುದ್ಧದ ಹೊತ್ತಲ್ಲಿ ತಂದೆಯೇ ಮಗನ ಚಿತೆಗೆ ಕೊಳ್ಳಿ ಇಡುತ್ತಾನೆ ಎಂದು ಕೇಳಿದ್ದೆ. ಕಾರ್ಗಿಲ್‌ ಯುದ್ಧ ಇಂತಹ ಅನೇಕ ಘಟನಾವಳಿಗಳಿಗೆ ಸಾಕ್ಷಿಯಾಯಿತು. ಅದು ಪಾಕಿಸ್ಥಾನದಡೆಯಿಂದ ಅನಿರೀಕ್ಷಿತ ದಾಳಿ, ಆದರೆ ನಮ್ಮೆಡೆಯಿಂದ ನಿರೀಕ್ಷಿತ ಪ್ರತ್ಯುತ್ತರ. ಈ ಗೆಲುವಿನ ಶ್ರೇಯಸ್ಸೆಲ್ಲ ಹೋರಾಡಿದ, ಮಡಿದ ಭಾರತ ಮಾತೆಯ ಅಮರ ಪುತ್ರರಿಗೆ ಸಲ್ಲಬೇಕು.

ರಾಷ್ಟ್ರಕ್ಕಾಗಿ ಸಾಯುವ ಅವಕಾಶ ಬಲು ಕಡಿಮೆ ಆದರೂ ಅದನ್ನು ಪಡೆದವ ಧನ್ಯ. ಅಂತಹ ಪುಣ್ಯಾತ್ಮರಿಗೊಂದು ನಮನ ನಮ್ಮಿಂದ ಸಮರ್ಪಣೆ ಆಗಲಿ. ಜತೆಗೆ ಒಂದು ಭಿನ್ನಹವೆಂದರೆ, ರಾಷ್ಟ್ರಕ್ಕಾಗಿ ಬದುಕುವ ಅಥವಾ ಮಡಿಯುವ ಪುಟ್ಟ ಅವಕಾಶ ಸಿಕ್ಕರೂ ಅದನ್ನು ಕಳೆದುಕೊಳ್ಳದಿರಿ. ಇದುವೇ ನಾವು ಹುತಾತ್ಮರಿಗೆ ಕೊಡುವ ಬಹುದೊಡ್ಡ ಗೌರವ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.