![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 6, 2023, 4:23 PM IST
ಬೆಂಗಳೂರು: ಬೆಂಗಳೂರು ತಂತ್ರಜ್ಞಾನ, ಪ್ರತಿಭೆ ಮತ್ತು ನಾವೀನ್ಯತೆಯ ಶಕ್ತಿಯಿಂದ ತುಂಬಿರುವ ನಗರವಾಗಿದೆ. ನನ್ನಂತೆ ನೀವೂ ಇಲ್ಲಿನ ಯುವಶಕ್ತಿಯನ್ನು ಅನುಭವಿಸುತ್ತಿರಬೇಕು. ಇದು ಭಾರತದ G-20 ಪ್ರೆಸಿಡೆನ್ಸಿ ಕ್ಯಾಲೆಂಡರ್ನ ಮೊದಲ ಪ್ರಮುಖ ಶಕ್ತಿಯ ಘಟನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೋಮವಾರ ಇಂಡಿಯಾ ಎನರ್ಜಿ ಸಪ್ತಾಹ 2023 ಉದ್ಘಾಟನೆ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಸಮಯದಲ್ಲಿ ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪದ ಮೇಲೆ ನಾವೆಲ್ಲರೂ ನಮ್ಮ ಕಣ್ಣುಗಳನ್ನು ನೆಟ್ಟಿದ್ದೇವೆ. ಅನೇಕ ದುರಂತ ಸಾವುಗಳು ಮತ್ತು ವ್ಯಾಪಕ ಹಾನಿಯ ವರದಿಗಳಿವೆ. ಭಾರತದ 140 ಕೋಟಿ ಜನರ ಸಹಾನುಭೂತಿ ಭೂಕಂಪ ಸಂತ್ರಸ್ತರ ಜೊತೆಗಿದೆ. ಭೂಕಂಪ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದರು.
ಇದರ ಹಿಂದೆ ಹಲವು ಅಂಶಗಳು ಕೆಲಸ ಮಾಡಿದ್ದವು. ಮೊದಲನೆಯದು- ಸ್ಥಿರ ಸರ್ಕಾರ, ಎರಡನೆಯದು- ಸುಸ್ಥಿರ ಸುಧಾರಣೆಗಳು, ಮೂರನೆಯದು- ತಳಮಟ್ಟದಲ್ಲಿ ಸಾಮಾಜಿಕ-ಆರ್ಥಿಕ ಸಬಲೀಕರಣ ಎಂದರು.
ಜಾಗತಿಕ ಹೂಡಿಕೆದಾರರು ದೇಶದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು, ಪ್ರಸ್ತುತ ಭಾರತವು ಅತ್ಯಂತ ಸೂಕ್ತ ಸ್ಥಳವಾಗಿದೆ ಎಂದರು.
ಈ ಸಾಲಿನ ಬಜೆಟ್ ಬಂಡವಾಳ ವೆಚ್ಚಕ್ಕಾಗಿ 10 ಲಕ್ಷ ಕೋಟಿ ರೂ.ಗಳನ್ನು ಒದಗಿಸಿದೆ, ಇದು ಹಸಿರು ಜಲಜನಕ, ಸೌರಶಕ್ತಿ ಮತ್ತು ರಸ್ತೆ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತದೆ. ಭಾರತದ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಅವಕಾಶಗಳನ್ನು ಅನ್ವೇಷಿಸಲು ನಾನು ನಿಮ್ಮನ್ನು ಕೇಳುತ್ತೇನೆ. ಭಾರತವು ಇಂದು ಹೂಡಿಕೆಗೆ ಅತ್ಯಂತ ಸೂಕ್ತವಾದ ಸ್ಥಳವಾಗಿದೆ ಎಂದರು.
ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ವಿವಿಧ ರಾಷ್ಟ್ರಗಳ ಹಲವಾರು ಮಂತ್ರಿಗಳು, ಕಾರ್ಪೊರೇಟ್ ನಾಯಕರು ಮತ್ತು ತಜ್ಞರು ಭಾಗವಹಿಸುತ್ತಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.