Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
ನಕಲಿ ದಾಖಲೆ ಉತ್ಪಾದಿಸುವ ಭಾರೀ ಪ್ರಮಾಣದ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು.
Team Udayavani, Sep 16, 2024, 4:11 PM IST
ನವದೆಹಲಿ:ನಕಲಿ ವೀಸಾ (Fake Visa) ಉತ್ಪಾದನಾ ಫ್ಯಾಕ್ಟರಿಯೊಂದನ್ನು ದೆಹಲಿಯ ವಿಮಾನ ನಿಲ್ದಾಣ (Air port) ಘಟಕದ ಪೊಲೀಸರು ತಿಲಕ್ ನಗರದಲ್ಲಿ ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ವ್ಯಕ್ತಿ ಸೇರಿದಂತೆ ಐದು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಕ್ಕೆ ತೆರಳುವ ಪ್ರಯಾಣಿಕರನ್ನು ವಂಚಿಸುವ ನಿಟ್ಟಿನಲ್ಲಿ ಭಾರೀ ಪ್ರಮಾಣದಲ್ಲಿ ನಕಲಿ ವೀಸಾಗಳನ್ನು ಫ್ಯಾಕ್ಟರಿಯಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು ಎಂದು ವರದಿ ವಿವರಿಸಿದೆ. ಕಳೆದ ವಾರ ನಕಲಿ ಫ್ಯಾಕ್ಟರಿಯೊಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು ನಕಲಿ ದಾಖಲೆ ಉತ್ಪಾದಿಸುವ ಭಾರೀ ಪ್ರಮಾಣದ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ 30 ನಕಲಿ ವೀಸಾಗಳ ಸ್ಟಿಕ್ಕ್ ರ್ಸ್, ವಿವಿಧ ದೇಶಗಳ 23 ರಬ್ಬರ್ ಸ್ಟ್ಯಾಂಪ್ಸ್, ಇಟಲಿ ನಿವಾಸದ ನಕಲಿ ವಿಳಾಸದ ಕಾರ್ಡ್ಸ್ ಸೇರಿದಂತೆ ಹಲವಾರು ಉಪಕರಣಗಳನ್ನು ಜಪ್ತಿ ಮಾಡಿರುವುದಾಗಿ ಡಿಸಿಪಿ(IGI) ಉಷಾ ರಂಗಾನಿ ತಿಳಿಸಿರುವುದಾಗಿ ವರದಿಯಾಗಿದೆ.
ನಕಲಿ ಫ್ಯಾಕ್ಟರಿಯಲ್ಲಿ ಭಾರೀ ಪ್ರಮಾಣದಲ್ಲಿ ನೇಪಾಳದ ಪಾಸ್ ಪೋರ್ಟ್ಸ್ ಗಳು, ಎರಡು ಭಾರತದ ಪಾಸ್ ಪೋರ್ಟ್ಸ್, ಲ್ಯಾಮಿನೇಷನ್ ಶೀಟ್ಸ್, ವಾಟರ್ ಮಾರ್ಕ್ ಪ್ರಿಂಟ್ಸ್, ಪ್ರಿಂಟೆಡ್ ಎನ್ವಲಪ್ಸ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.