![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 15, 2022, 12:27 PM IST
ನವದೆಹಲಿ: ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮಾರ್ಚ್ 15) ನಡೆದ ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಸ್ಪಷ್ಟ ಸಂದೇಶವನ್ನು ರವಾನಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಸಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿರ್ಧಾರ
“ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ಇತರ ಪಕ್ಷಗಳಲ್ಲಿ ಇರುವ ವಂಶಾಡಳಿತದ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಒಂದು ವೇಳೆ ಯಾರ ಮಕ್ಕಳಿಗಾದರು ಟಿಕೆಟ್ ನಿರಾಕರಿಸಿದರೆ ಅದರ ಹೊಣೆ ನಾನೇ ಹೊರುತ್ತೇನೆ ಎಂದು ಹೇಳಿರುವುದಾಗಿ ವರದಿ ವಿವರಿಸಿದೆ.
ಸಭೆಯಲ್ಲಿ ಯುದ್ಧಗ್ರಸ್ಥ ಉಕ್ರೇನ್ ನಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿಯವರು ಮಾಹಿತಿ ನೀಡಿದ್ದು, ಮೂಲಗಳ ಪ್ರಕಾರ, ಬಿಜೆಪಿಯೇತರ ಮುಖ್ಯಮಂತ್ರಿಗಳು ಉಕ್ರೇನ್ ವಿಚಾರವನ್ನು ರಾಜಕೀಯಗೊಳಿಸಿರುವುದಾಗಿ ಆರೋಪಿಸಿದ್ದಾರೆ ಎಂದು ವರದಿ ಹೇಳಿದೆ.
ಸಭೆಯಲ್ಲಿ ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಪ್ರಸ್ತಾಪ:
ಬಿಜೆಪಿ ಸಂಸದ ಮನೋಜ್ ತಿವಾರಿ ತಿಳಿಸಿರುವಂತೆ, ಸಭೆಯಲ್ಲಿ ಪ್ರಧಾನಿ ಮೋದಿ ಅವರು ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಧ್ವನಿ ಎತ್ತಿದ್ದು, ಕೆಲವೊಂದು ಗುಂಪುಗಳು ಈಗಲೂ ಸತ್ಯವನ್ನು ಸಮಾಧಿ ಮಾಡಲು ಹೊರಟಿವೆ. ನಾವು ಇಂತಹ ಸತ್ಯಗಳನ್ನು ದೇಶದ ಜನರ ಮುಂದಿಡಬೇಕೆಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಪಂಚರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಕಳಪೆ ಸಾಧನೆ ಮಾಡಿರುವ ಕ್ಷೇತ್ರಗಳ ಬಗ್ಗೆ ಕಾರಣದ ಕುರಿತು ಪರಿಶೀಲನೆ ನಡೆಸಬೇಕು ಎಂದು ಪ್ರಧಾನಿ ಮೋದಿ ಅವರು ಪಕ್ಷದ ಸಂಸದರಿಗೆ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.