ಮುಂಬೈ ಇಂಡಿಯನ್ಸ್‌ಗೆ ಮೊದಲ ಸೋಲು: ಯುಪಿ ವಾರಿಯರ್ ಹಾದಿ ಸುಗಮ


Team Udayavani, Mar 19, 2023, 5:25 AM IST

MUMBAI WPL

ಮುಂಬೈ: ಮುಂಬೈ ಇಂಡಿಯನ್ಸ್‌ಗೆ ವನಿತಾ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಸಲ ಸೋಲಿನ ಬಿಸಿ ಮುಟ್ಟಿದೆ. ಹರ್ಮನ್‌ಪ್ರೀತ್‌ ಕೌರ್‌ ಪಡೆಯನ್ನು ಕೆಡವಿದ ತಂಡ ಯುಪಿ ವಾರಿಯರ್. ಶನಿವಾರದ ಮೊದಲ ಮುಖಾಮುಖೀಯಲ್ಲಿ ಯುಪಿ 5 ವಿಕೆಟ್‌ಗಳ ಜಯ ಸಾಧಿಸಿ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬೈ ಸರಿಯಾಗಿ 20 ಓವರ್‌ಗಳಲ್ಲಿ 127ಕ್ಕೆ ಆಲೌಟ್‌ ಆಯಿತು. ಆರಂಭಿಕ ಆಟಗಾರ್ತಿ ಮ್ಯಾಥ್ಯೂಸ್‌ 35, ಇಸ್ಸಿ ವಾಂಗ್‌ 32 ಮತ್ತು ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಅವರು 25 ರನ್‌ ಗಳಿಸಿದರು. ಈ ಮೂವರನ್ನು ಬಿಟ್ಟರೆ ಬೇರಾವ ಬ್ಯಾಟಿಗರು ಎರಡಂಕಿ ದಾಟಲಿಲ್ಲ. ಹೀಗಾಗಿ ಮುಂಬೈ ಅಳೆದು ತೂಗಿ ಎಲ್ಲ ವಿಕೆಟ್‌ ಕಳೆದುಕೊಂಡು 127 ರನ್‌ ಗಳಿಸಲಷ್ಟೇ ಶಕ್ತವಾಯಿತು. ಯುಪಿ ಪರ ಸೋಫಿ 3, ರಾಜೇಶ್ವರಿ ಗಾಯಕ್ವಾಡ್‌ ಮತ್ತು ದೀಪ್ತಿ ಶರ್ಮ ತಲಾ 2 ವಿಕೆಟ್‌ ಪಡೆದು ಮಿಂಚಿದರು.

ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್‌ 19.3 ಓವರ್ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 129 ರನ್‌ ಬಾರಿಸಿತು. ಹಾಗಂತ ಯುಪಿ ವಾರಿಯರ್ಸ್‌ ಆರಂಭ ಕೂಡ ಚೆನ್ನಾಗಿರಲಿಲ್ಲ. ಕೇವಲ 1 ರನ್‌ಗೆ ಮೊದ ಲನೇ ವಿಕೆಟ್‌, 21 ರನ್‌ಗೆ 2ನೇ ವಿಕೆಟ್‌ ಹೋಯಿತು. ಆದರೂ ಗ್ರೇಸ್‌ ಹ್ಯಾರೀಸ್‌ ಮತ್ತು ಮೆಕ್‌ ಗ್ರಾತ್‌ ಕ್ರಮ ವಾಗಿ 39 ಮತ್ತು 38 ರನ್‌ ಗಳಿಸಿ ಗೆಲುವಿನಲ್ಲಿ ನೆರವಾದರು. ಆ್ಯಮೆಲಿಯಾ ಕೇರ್‌ 2 ವಿಕೆಟ್‌ ಗಳಿಸಿದರು.

ಇದರೊಂದಿಗೆ ಈ ಪಂದ್ಯಾವಳಿಯಲ್ಲಿ ಮುಂಬೈಯನ್ನು ಮೊದಲ ಸಲ ಆಲೌಟ್‌ ಮಾಡಿದ ಹಾಗೂ ಮುಂಬೈಯನ್ನು ಮೊದಲ ಸಲ ಸೋಲಿಸಿದ ಹಿರಿಮೆ ಯುಪಿ ತಂಡದ್ದಾಯಿತು. ಇದು 6 ಪಂದ್ಯಗಳಲ್ಲಿ ಯುಪಿ ಸಾಧಿಸಿದ 3ನೇ ಜಯ. 6 ಅಂಕ ಹೊಂದಿರುವ ಅಲಿಸ್ಸಾ ಹೀಲಿ ಬಳಗವೀಗ 3ನೇ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
ಸಂಕ್ಷಿಪ್ತ ಸ್ಕೋರ್‌
ಮುಂಬೈ – 127/10. 20 ಓವರ್‌. ಮ್ಯಾಥ್ಯೂಸ್‌ 35, ಇಸ್ಸಿ ವಾಂಗ್‌ 32, ಹರ್ಮನ್‌ ಕೌರ್‌ 25, ಸೋಫಿ 15/3. ಯುಪಿ ವಾರಿಯರ್ಸ್‌ – 129/5. 19.3 ಓವರ್‌. ಗ್ರೇಸ್‌ ಹ್ಯಾರೀಸ್‌ 39, ಮೆಕ್‌ ಗ್ರಾತ್‌ 38.

ಟಾಪ್ ನ್ಯೂಸ್

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.