ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ


Team Udayavani, Mar 30, 2023, 7:23 AM IST

ipl o[pening

ಅಹ್ಮದಾಬಾದ್‌: ಈ ಬಾರಿಯ ಐಪಿಎಲ್‌ ಪಂದ್ಯಾವಳಿ “ಗತವೈಭವದತ್ತ ಮೊದಲ ಹೆಜ್ಜೆ” ಎಂಬುದಾಗಿ ಬಣ್ಣಿಸಲ್ಪಟ್ಟಿದೆ. ಕಳೆದ 4 ವರ್ಷಗಳ ಕಾಲ ಪುಲ್ವಾಮಾ ದಾಳಿ ಹಾಗೂ ಕೊರೊನಾ ಉಪಟಳದಿಂದ ಐಪಿಎಲ್‌ನ ಜೋಶ್‌ ದೊಡ್ಡ ಮಟ್ಟದಲ್ಲಿ ಕಂಡುಬಂದಿರಲಿಲ್ಲ. ಈ ಬಾರಿ ಮತ್ತೆ ಹಿಂದಿನ ವೈಭವದ ಸ್ಪಷ್ಟ ಸೂಚನೆ ಲಭಿಸಿದೆ. ಇದಕ್ಕೆ ಕಾರಣ, ಉದ್ಘಾಟನ ಸಮಾರಂಭ. 2018ರ ಬಳಿಕ ಐಪಿಎಲ್‌ ಮೊದಲ ಬಾರಿಗೆ “ಐಪಿಎಲ್‌ ಓಪನಿಂಗ್‌ ಸೆರಮನಿ’ ನಡೆಯುತ್ತಿರುವುದು ವಿಶೇಷ.

2008ರ ಚೊಚ್ಚಲ ಕೂಟದಿಂದಲೂ ಐಪಿಎಲ್‌ ಭರ್ಜರಿ ಉದ್ಘಾಟನ ಸಮಾರಂಭಕ್ಕೆ ಸಾಕ್ಷಿಯಾಗುತ್ತ ಬಂದಿತ್ತು. ಸಲ್ಮಾನ್‌ ಖಾನ್‌, ಪಿಟ್‌ಬುಲ್‌, ಶಾರೂಖ್‌ ಖಾನ್‌, ಶ್ರೀಯಾ ಶರಣ್‌, ಕತ್ರಿನಾ ಕೈಫ್ ಮೊದಲಾದ ಸೆಲಿಬ್ರಿಟಿಗಳಿಂದ ರಂಗೇರಿಸಿಕೊಂಡಿತ್ತು. ಆದರೆ 2019ರಿಂದ 2022ರ ತನಕ ಐಪಿಎಲ್‌ ಉದ್ಘಾಟನ ಸಮಾರಂಭವನ್ನು ಕೈಬಿಡಲಾಯಿತು.
2019ರಂದು ಉದ್ಘಾಟನೆಯನ್ನು ಕೈಬಿಡಲು ಮುಖ್ಯ ಕಾರಣ ಪುಲ್ವಾಮ ದಾಳಿ. ಅಂದಿನ ಉದ್ಘಾಟನ ಸಮಾರಂಭದ ದೊಡ್ಡ ಮೊತ್ತವನ್ನು ಮೃತಪಟ್ಟ ಸಿಆರ್‌ಪಿಎಫ್ ಯೋಧರ ಕುಟುಂಬದವರಿಗೆ ನೀಡಲಾಯಿತು. ಬಳಿಕ ಕೊರೊನಾ ದಾಳಿ ನಡೆಸಿತು. ಐಪಿಎಲ್‌ ವೇಳಾಪಟ್ಟಿ, ಸ್ಥಳ, ಮಾದರಿ… ಎಲ್ಲವೂ ಅಸ್ತವ್ಯಸ್ತಗೊಂಡಿತು.

ಒಂದು ಗಂಟೆ ಶೋ
ಇದೀಗ 4 ವರ್ಷಗಳ ಬಳಿಕ ಐಪಿಎಲ್‌ ಅದ್ಧೂರಿಯ ಹಾಗೂ ರಂಗುರಂಗಿನ ಉದ್ಘಾಟನ ಸಮಾರಂಭವನ್ನು ಕಾಣಲಿದೆ. ಶುಕ್ರವಾರದ ಆರಂಭಿಕ ಪಂದ್ಯಕ್ಕೂ ಒಂದು ಗಂಟೆ ಮೊದಲು ಅಹ್ಮದಾಬಾದ್‌ನಲ್ಲಿ ಈ ಸಮಾರಂಭ ಕಳೆಗಟ್ಟಲಿದೆ. ಐಪಿಎಲ್‌ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದಂತೆ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಮುಖ್ಯ ಆಕರ್ಷಣೆ ಆಗಲಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಹೆಸರು ಕೂಡ ಕೇಳಿಬರುತ್ತಿದೆ. ಆದರೆ ಬಿಸಿಸಿಐ ಮಾತ್ರ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ಎಲ್ಲ ನಾಯಕರಿಲ್ಲ
ಕೂಟದಲ್ಲಿ 10 ತಂಡಗಳು ಭಾಗವಹಿಸುತ್ತಿವೆಯಾದರೂ ಉದ್ಘಾಟನ ಸಮಾ ರಂಭದಲ್ಲಿ ಕೆಲವು ನಾಯಕರಿಗೆ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.
ಈಗಿನ ಸ್ಥಿತಿಯಂತೆ ಪಂಜಾಬ್‌ ಕಿಂಗ್ಸ್‌, ಕೆಕೆಆರ್‌, ಲಕ್ನೋ ಮತ್ತು ಡೆಲ್ಲಿ ತಂಡಗಳ ನಾಯಕರು ಭಾಗವಹಿಸುವುದು ಅನುಮಾನ. ಇವರೆಲ್ಲ ಮರುದಿನ ಮೊಹಾಲಿ ಮತ್ತು ಲಕ್ನೋದಲ್ಲಿ ನಡೆಯುವ ಪಂದ್ಯದಲ್ಲಿ ಪಾಲ್ಗೊಳ್ಳಬೇಕಿದೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.