ಅವರವರ ಪ್ರಕೃತಿಗೆ ಅನುಸರಿಸಿ ಸುಖ, ಸಂತೋಷ


Team Udayavani, Mar 18, 2021, 6:20 AM IST

ಅವರವರ ಪ್ರಕೃತಿಗೆ ಅನುಸರಿಸಿ ಸುಖ, ಸಂತೋಷ

ಸಂತಸ ಅಥವಾ ಮನಸಿನ ತೃಪ್ತಿ ಅಂದರೆ ಇದಮಿತ್ತಂ ಅಂತ ಹೇಳಬರುವುದಿಲ್ಲ. ಕೆಲವರಿಗೆ ಹಣ ಕೂಡಿ ಹಾಕಿ ಹಾಕಿ ರಸ್ತೆಯಲ್ಲಿ ಕುಣಿದು ಕುಪ್ಪಳಿಸುವ ಆಸೆ ಯಾದರೆ? ಇನ್ನೂ ಕೆಲವರಿಗೆ ದೊಡ್ಡ ಸಾಧನೆ ಮಾಡದೆ ಪ್ರಚಾರ ಗಿಟ್ಟಿಸುವ ಗೀಳು. ಮತ್ತೆ ಕೆಲವರಿಗೆ ದೊಡ್ಡ ರಾಜಕಾರಣಿಗಳ ಸಂಗ ಮಾಡಿ ಅವರಿಗೆ ಭೋಪರಾಕು ಹಾಕುವುದೇ ಜೀವನದ ಸುಂದರ ಕ್ಷಣಗಳು. ತಿಂಡಿಪೋತರಿಗೆ ಪುಗಸಟ್ಟೆ ಹೊಟ್ಟೆ ತುಂಬಾ ತಿಂದು ತೇಗುವುದೆ ಗಮ್ಮತ್ತು. ಇನ್ನೂ ಕೆಲವು ಮಂದಿ ಚಿತ್ರಕಲೆ, ಗಾಯನ, ನೃತ್ಯ ಇತ್ಯಾದಿಗಳನ್ನು ಸುಖದ ತಾಣವಾಗಿ, ಹವ್ಯಾಸವಾಗಿ ಬೆಳೆಸಿಕೊಳ್ಳುತ್ತಾರೆ.

ಇದಲ್ಲದೆ ಇನ್ನೊಂದು ಅಪರೂಪದ ಗುಂಪು ಕೂಡ ಇದೆ. ಇವರು ಸಂತಸವನ್ನು ಅರಸಿ ಬಡಬಗ್ಗರ, ದೀನ ದಲಿತರ ಸೇವೆಯಲ್ಲಿ ತಮ್ಮ ಜೀವನದಲ್ಲಿ ಸಾರ್ಥಕ್ಯ ಕಾಣುತ್ತಾರೆ. ಆದರೆ ಈ ಕೊನೆಯ ವರ್ಗ ಮಾತ್ರ ಅಪರೂಪದ ಮತ್ತು ಅತೀ ಕಡಿಮೆ ಸಂಖ್ಯೆಯಲ್ಲಿರುವವರು. ಇವರಿಗೆ ಹಣಬಲ ಬೇಕೆಂದೇನೂ ಇಲ್ಲ. ಆದರೆ ತಮ್ಮೊಂದಿಗೆ ಸಹಕರಿಸುವ, ಸ್ಪಂದಿಸುವ ಜನಬಲವೇ ಇವರ ಆಸ್ತಿ.

ಹಾಗೆ ಲೋಕದಲ್ಲಿ ಜನರ ಸುಖ ಸಂತೋಷ ಅಳೆಯುವುದು ಅವರವರ ಪ್ರಕೃತಿಗೆ ಅನುಸರಿಸಿ ಎನ್ನದೆ ವಿಧಿ ಇಲ್ಲ.
ಆದರೆ ಇದಕ್ಕೆಲ್ಲ ವಿಪರೀತವಾಗಿ ನಾನು, ನನ್ನದು ಎಂದು ಬಗೆದು ಲೋಕ ಮುಳುಗಿದರೆ ನನಗೇನು ಎಂಬ ಭಾವ ಮೆರೆಯುವ ಸ್ವಕೇಂದ್ರಿತ, ಸ್ವಜನ ಹಿತ ಬಯಸುವ, ಸಮಾಜದ ಋಣ ನಾನೇಕೆ ತೀರಿಸಲಿ ಎಂದು ಅಹಂಕಾರದ ಮೂಟೆ ಹೊತ್ತು ಜೀವಿಸುವ ವರ್ಗ ಮಾತ್ರ ಅದೇನು ಸುಖದಿಂದ ಬಾಳುತ್ತದೋ ತಿಳಿಯದು. ಕೊನೆಗೆ ನಂದ ರಾಯನ ಬದುಕು ನರಿ, ನಾಯಿ ತಿಂದು ಹೋಯಿತು ಅಂದ ಹಾಗೆ ಇವರ ಬದುಕು.

ನಮ್ಮ ಗಳಿಕೆ ಎಂಬುದು ಸಮಾಜ ಒದಗಿಸಿದ್ದು. ಕೆಲವೊಮ್ಮೆ ನಮ್ಮ ನಿರೀಕ್ಷೆಗೂ ಮೀರಿ ಧನ ಸಂಪತ್ತು ಲಭ್ಯವಾಗುವುದು ಸುಳ್ಳಲ್ಲ. ದೇವರು ಕೆಲವೊಂದು ಮಂದಿಗೆ ಅದೇಕೋ ಉದಾರತೆ ತೋರುತ್ತಾನೆ. ಆ ಸಂದರ್ಭದಲ್ಲಿ ವ್ಯಕ್ತಿ ಅಹಂಕಾರ ಮೆರೆಯುವುದು ಸರಿಯಲ್ಲ. ತನ್ನ ಆವಶ್ಯಕತೆಗೆ ತಕ್ಕಷ್ಟು ತನ್ನದು ಉಳಿದದ್ದು ಸಮಾಜಕ್ಕೆ ಸಲ್ಲ ಬೇಕಾದದ್ದು ಎಂಬ ಮನೋಧರ್ಮ ತನ್ನದಾಗಿಸಿಕೊಂಡರೆ ಆತನ ಸಂತಸದ ಕ್ಷಣಗಳು ಹೆಚ್ಚುತ್ತವೆ. ಬಾಯಾರಿದವನಿಗೆ ನೀರು, ಹಸಿದವನಿಗೆ ಒಂದು ಹಿಡಿ ಅನ್ನ, ರೋಗದಿಂದ ಬಳಲುವ ವ್ಯಕ್ತಿಗೆ ತಕ್ಕ ಚಿಕಿತ್ಸೆ ಇತ್ಯಾದಿ ಕರ್ಮಗಳನ್ನು ಮಾಡಿ ಅದರಲ್ಲಿ ತನ್ನ ಜೀವನದ ಸಾರ್ಥಕ್ಯ ಭಾವ ಮೆರೆಯುವ ಜನರು ನಿಜವಾಗಿಯೂ ಧನ್ಯರು. ತಮ್ಮ ಬದುಕು ತಮಗಾಗಿಯೇ ಅಲ್ಲ. ಸಹಜೀವಿಗಳಿಗೂ ಅದರಲ್ಲಿ ಹಕ್ಕು ಇದೆ ಎಂಬ ಮನಸ್ಸು ನಿಜ ಅರ್ಥದಲ್ಲಿ ಶ್ರೀಮಂತಿಕೆ. ಈ ತರದ ಸಮಾಜಮುಖೀ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ಬಾಳುವ ಮಂದಿ ನಿಜವಾಗಿಯೂ ದೇವರಿಗೆ ಪೂಜೆ ಪುನಸ್ಕಾರ ಮಾಡದಿದ್ದರೂ “ಮಾನವ ಸೇವೆ ಮಾಧವ ಸೇವೆ’ ಎಂಬ ಧರ್ಮ ಅನುಸರಿಸುವ ಮಹಾನ್‌ ಚೇತನಗಳು. ಇವರೇನೂ ತಮ್ಮ ಸತ್ಕಾರ್ಯಗಳಿಗೆ ಪ್ರತಿಯಾಗಿ ಏನೇನೂ ಅಪೇಕ್ಷೆ ಇಟ್ಟುಕೊಳ್ಳುವ ಜಾಯಮಾನದವರಲ್ಲ. ತಮ್ಮ ಕಾಯಕ ನೆರವೇರಿಸಿ ಅದರಲ್ಲೇ ತೃಪ್ತಿ, ಸಂತಸ ಪಡುವ ಮನೋಧರ್ಮದ ಶ್ರೀಮಂತರು.

ಮನುಷ್ಯ ಜೀವನದ ಉದ್ದೇಶ ಏನೆಂದು ಅರಿತು, ಸಂತೃಪ್ತಿ-ಸಂತೋಷಗಳ ನಿರ್ವಚ ನವನ್ನು ಆವಿಷ್ಕರಿಸಿದ ವ್ಯಕ್ತಿ ಹುಟ್ಟಿದ್ದು ನಿಜವಾಗಿಯೂ ಸಾರ್ಥಕ. ಯಾವುದು ಸರಿಯೋ ಅದನ್ನು ಆರಿಸಿ ತಮ್ಮ ಜೀವನಕ್ಕೆ ಅರ್ಥ ಕಂಡುಕೊಳ್ಳಿ. ಅರ್ಥವತ್ತಾಗಿ ಜೀವಿಸಲು ಕಲಿಯಿರಿ, “ಅರ್ಥ’ ಹೊತ್ತು ಹೊತ್ತು, ಬಳಲಿ ಕೊನೆಯಲ್ಲಿ ನಾಲ್ಕು ಜನಕ್ಕೆ ಹೊರುವ ಕಾಯಕ ಸಿಗದಂತೆ ಜೀವನಕ್ಕೆ ವಿದಾಯ ಹೇಳಬೇಡಿ.

– ಬಿ. ನರಸಿಂಗ ರಾವ್‌, ಕಾಸರಗೋಡು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.