ಆಟಕ್ಕುಂಟು ಲೆಕ್ಕಕ್ಕಿಲ್ಲದ ಆಹಾರ ಸುರಕ್ಷೆ-ಗುಣಮಟ್ಟ ಪ್ರಾಧಿಕಾರ!


Team Udayavani, May 30, 2023, 6:13 AM IST

food safety

ಬೆಂಗಳೂರು: ಆಳವಾಗಿ ಬೇರೂರಿರುವ ಆಹಾರ ಕಲಬೆರಕೆ ತಡೆಗಟ್ಟುವಲ್ಲಿ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ವಿಫ‌ಲವಾಗಿದ್ದು, ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರವು ಮಂಗಳವಾರ ಸಭೆ ನಡೆಸಿ ಪ್ರಾಧಿಕಾರಕ್ಕೆ ಸರ್ಜರಿ ಮಾಡಲು ಮುಂದಾಗಿದೆ.

ರಾಜ್ಯದಲ್ಲಿ ಸಾವಿರಾರು ಆಹಾರ ಉತ್ಪಾದಕ ಕಾರ್ಖಾನೆಗಳು, ಹೊಟೇಲ್‌ಗ‌ಳಿದ್ದು, ಇವುಗಳಲ್ಲಿ ಶುಚಿತ್ವದ ಕೊರತೆ, ಕಳಪೆ ಗುಣಮಟ್ಟದ ಉತ್ಪನ್ನ ಬಳಸುತ್ತಿರುವ ಆರೋಪ ಕೇಳಿಬರುತ್ತಿವೆ. ದಿನಬಳಕೆ ಆಹಾರ ವಸ್ತುಗಳ ಕಲಬೆರಕೆ ದಂಧೆ ರಾಜ್ಯವ್ಯಾಪಿ ಇದೆ. ಇದರಿಂದ ಜನಸಾಮಾನ್ಯರ ಆರೋಗ್ಯಕ್ಕೆ ತೊಂದರೆ ಉಂಟಾಗುವ ಆತಂಕವಿದೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕುವಲ್ಲಿ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ವಿಫ‌ಲವಾಗಿದೆ.

ಕಲಬೆರಕೆ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಿಗಿ ಕ್ರಮ ಕೈಗೊಳ್ಳದಿರುವುದು ವಂಚಕ ವ್ಯಾಪಾರಿಗಳಿಗೆ ವರವಾಗಿದೆ.

ಇದನ್ನು ಮನಗಂಡಿರುವ ನೂತನ ಕಾಂಗ್ರೆಸ್‌ ಸರಕಾರವು ಅಕ್ರಮಗಳಿಗೆ ಬ್ರೇಕ್‌ ಹಾಕಲು ಚಿಂತಿಸಿದೆ. ಈ ನಿಟ್ಟಿನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಮಂಗಳವಾರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಪ್ರಾಧಿಕಾರದ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದಾರೆ.

ಪ್ರಾಧಿಕಾರದ ವೈಫ‌ಲ್ಯವೇನು ?
ಧಾನ್ಯ ಮತ್ತು ಕಾಳುಗಳಿಗೆ ಬಣ್ಣ ಮಿಶ್ರಣ, ಅಡುಗೆ ಎಣ್ಣೆಗೆ ನಕಲಿ ಎಣ್ಣೆ, ಬೆಣ್ಣೆಗೆ ಕೊಬ್ಬು, ಹಾಲಿಗೆ ಯೂರಿಯಾ, ಕಾಫಿ ಮತ್ತು ಟೀ ಪುಡಿ ಆಕರ್ಷಕವಾಗಿ ಕಾಣಲು ಅತಿಯಾದ ರಾಸಾಯನಿಕ, ಮರದ ಹೊಟ್ಟು ಮಿಶ್ರಣ, ಕರಿದ ಪದಾರ್ಥಗಳಿಗೆ ರುಚಿ ಹೆಚ್ಚಿಸಲು, ಹಣ್ಣು, ತರಕಾರಿ ಆಕರ್ಷಕವಾಗಿ ಕಾಣಲು ಅಪಾಯಕಾರಿ ರಾಸಾಯನಿಕ ಬಳಕೆ, ಕಳಪೆ ಗುಣಮಟ್ಟದ ಬೇಳೆ-ಕಾಳು, ಎಣ್ಣೆ, ಮೈದಾ, ಗೋದಿ ಹಿಟ್ಟು ಹೆಚ್ಚಿನ ಬೆಲೆಗೆ ಮಾರಾಟ ಹೀಗೆ ರಾಜ್ಯದಲ್ಲಿ ಹತ್ತು-ಹಲವು ಅಕ್ರಮಗಳು ದಂಧೆ ಇವೆ. ಆದರೆ ಆಹಾರ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು 2022-23ರಲ್ಲಿ ಕೇವಲ 131 ಅಕ್ರಮ ಪತ್ತೆ ಹಚ್ಚಿದ್ದಾರೆ. ಈ ಪೈಕಿ 109 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯ ರ್ಥಗೊಂಡಿದ್ದು, 7.88 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಬೆಂಗಳೂರು, ಬೆಳಗಾವಿ, ಮಂಗಳೂರು, ಹಾಸನ, ವಿಜಯಪುರ, ಕೊಡಗು ಜಿಲ್ಲೆಗಳಲ್ಲಿ ಕಲಬೆರಕೆ ದಂಧೆ ಹೆಚ್ಚಾಗಿದೆ.

ಶೇ. 70ರಷ್ಟು ಹುದ್ದೆಗಳು ಖಾಲಿ
ಪ್ರಾಧಿಕಾರದಲ್ಲಿ ಒಟ್ಟು 422 ಹುದ್ದೆ ಮಂಜೂರಾಗಿದ್ದು, ಸದ್ಯ 158 ಸಿಬಂದಿ ಕೆಲಸ ಮಾಡುತ್ತಿದ್ದಾರೆ. ಬರೋಬ್ಬರಿ 264 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ 8 ವರ್ಷಗಳಿಂದ ನೇಮಕಾತಿ ನಡೆದಿಲ್ಲ. ಆಹಾರ ಸುರಕ್ಷಾಧಿಕಾರಿ 158, ಪ್ರಥಮ ದರ್ಜೆ ಸಹಾಯಕ 29, ಕಿರಿಯ ಆಹಾರ ವಿಶ್ಲೇಷಕ 18, ಮುಖ್ಯ ಆಹಾರ ವಿಶ್ಲೇಷಕ 4, ಅಂಕಿತಾಧಿಕಾರಿ 14, ಶೀಘ್ರಲಿಪಿಕಾರ, ಕಿರಿಯ ಮೈಕ್ರೋ ಬಯಾಲಜಿಸ್ಟ್‌, ಕಾನೂನು ಸಲಹೆಗಾರ ವಿಭಾಗಕ್ಕೆ ಒಬ್ಬರನ್ನೂ ನೇಮಿಸಿಲ್ಲ.

ನಿಯೋಜನೆಗೆ ಪೈಪೋಟಿ
ಆರೋಗ್ಯ ಇಲಾಖೆಯಡಿ ಪ್ರಾಧಿಕಾರವು ಕಾರ್ಯ ನಿರ್ವಹಿಸುತ್ತಿದ್ದು, ಆರೋಗ್ಯ ಇಲಾಖೆಗೆ ನೇಮಕವಾದ ಕೆಲವು ವೈದ್ಯರು ಖಾಲಿ ಉಳಿದಿರುವ ಹು¨ªೆಗಳನ್ನು ದುರ್ಬಳಕೆ ಮಾಡಿ
ಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ. ಆರೋಗ್ಯ ಇಲಾಖೆಯಲ್ಲಿ 85 ಸಾ. ರೂ. ವಿಶೇಷ ಭತ್ತೆ ಸಿಗುತ್ತಿದ್ದರೂ ಅದನ್ನು ತಿರಸ್ಕರಿಸುವ ವೈದ್ಯರು ಪ್ರಾಧಿಕಾರಕ್ಕೆ ನಿಯೋಜನೆ ಮೇರೆಗೆ ಬರಲು ಪೈಪೋಟಿಗಿಳಿದಿರುವುದು ಈ ಆರೋಪಗಳಿಗೆ ಪುಷ್ಟಿ ನೀಡುತ್ತವೆ.

~ ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.