France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!
ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಅವರಿಗೆ ಹಿನ್ನಡೆ ಅನುಭವಿಸುವಂತೆ ಮಾಡಿದೆ
Team Udayavani, Jul 8, 2024, 3:50 PM IST
ಪ್ಯಾರೀಸ್: ಇತ್ತೀಚೆಗೆ ಬ್ರಿಟನ್ ಸಂಸತ್ ಗೆ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷ ಪ್ರಚಂಡ ಜಯಗಳಿಸುವ ಮೂಲಕ ಕೀರ್ ಸ್ಟಾರ್ಮರ್ ಪ್ರಧಾನಿ ಗದ್ದುಗೆ ಏರಿದ್ದು, ಬಲಪಂಥೀಯ ಕನ್ಸರ್ವೇಟಿವ್ ಪಕ್ಷ ಪರಾಜಯಗೊಂಡಿತ್ತು. ಇದೀಗ ಫ್ರಾನ್ಸ್ ಸಂಸತ್ ಗೆ ಭಾನುವಾರ (ಜುಲೈ 07) ನಡೆದ ಚುನಾವಣೆಯಲ್ಲಿ ಬಲಪಂಥೀಯ National Rally ಪಕ್ಷ ಸೋಲು ಕಂಡಿದ್ದು, ಎಡ ಪಕ್ಷಗಳು ಮೇಲುಗೈ ಸಾಧಿಸಿದೆ. ಆದರೆ ಯಾವುದೇ ಪಕ್ಷಗಳು ಸ್ಪಷ್ಟ ಬಹುಮತ ಪಡೆಯದೇ ಅತಂತ್ರ ಸಂಸತ್ ನಿರ್ಮಾಣವಾಗಿದೆ.
ಇದನ್ನೂ ಓದಿ:Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ
ಮರೀನ್ ಲೇ ಪೆನ್ ಅವರ ನ್ಯಾಷನಲ್ Rally ಪಕ್ಷವು ಭಾರೀ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದೆ. ಚುನಾವಣೆಯಲ್ಲಿ ಲೆಫ್ಟಿಟಿಸ್ಟ್ ನ್ಯೂ ಪಾಪ್ಯುಲರ್ ಫ್ರಂಟ್ (NFP) ಅಧಿಕ ಸ್ಥಾನಗಳನ್ನು ಪಡೆದಿದೆ. ಆದರೆ ಫ್ರಾನ್ಸ್ ನಲ್ಲಿ ಯಾವುದೇ ಒಂದು ಪಕ್ಷ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ ಮೈತ್ರಿ ಸರ್ಕಾರ ರಚನೆಗಾಗಿ ಪೈಪೋಟಿ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.
ಪ್ಯಾರೀಸ್ ನಲ್ಲಿ ಒಲಿಂಪಿಕ್ಸ್ ಗೇಮ್ಸ್ ನಡೆಯುವ ಒಂದು ವಾರದ ಮೊದಲು ಈ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಈ ಫಲಿತಾಂಶ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಅವರಿಗೆ ಹಿನ್ನಡೆ ಅನುಭವಿಸುವಂತೆ ಮಾಡಿದೆ.
ಎಡಪಕ್ಷಗಳು 182 ಸ್ಥಾನಗಳಲ್ಲಿ ಜಯ ಗಳಿಸಿದ್ದು, ಮ್ಯಾಕ್ರೋನ್ ನೇತೃತ್ವದ ಸೆಂಟ್ರಿಸ್ಟ್ ಮೈತ್ರಿಕೂಟ 168 ಸ್ಥಾನಗಳಲ್ಲಿ ಹಾಗೂ ಲೇ ಪೆನ್ ಅವರ National Rally ಮೈತ್ರಿಕೂಟ 143 ಸ್ಥಾನಗಳಲ್ಲಿ ಜಯಗಳಿಸಿರುವುದಾಗಿ ಆಂತರಿಕ ಸಚಿವಾಲಯ ಬಿಡುಗಡೆಗೊಳಿಸಿರುವ ಮಾಹಿತಿಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.