ವಾಕ್ ಸ್ವಾತಂತ್ರ್ಯ ಎಂದರೆ ಬೇರೆ ದೇಶಕ್ಕೆ ಜಿಂದಾಬಾದ್ ಹೇಳುವುದಲ್ಲ: ಸ್ಪೀಕರ್ ಕಾಗೇರಿ
Team Udayavani, Feb 4, 2022, 12:27 PM IST
ಬೆಂಗಳೂರು : ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ,ವಾಕ್ ಸ್ವಾತಂತ್ರ್ಯ ಎಂದರೆ ಕೆಲವರು ಬೇರೆ ದೇಶಕ್ಕೆ ಜಿಂದಾಬಾದ್ ಹೇಳುವುದಕ್ಕೆ ಬಳಸುತ್ತಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ನಡೆಯುತ್ತಿರುವ ಎರಡನೇ ದಿನದ ಕಾರ್ಯಾಗಾರದಲ್ಲಿ ಸಂವಿಧಾನ ಅಡಿಯಲ್ಲಿ ಜನರ ನಿರೀಕ್ಷೆ ಹಾಗೂ ಶಾಸಕರ ಜವಾಬ್ದಾರಿ’ ವಿಷಯ ಮಂಡಿಸಿ ಮಾತನಾಡಿದರು.
ಡಾ.ಬಿಆರ್. ಅಂಬೇಡ್ಕರ್ ಗೆ ಎಷ್ಟು ಗೌರವ ಸೂಚಿಸಿದರೂ ಕಡಿಮೆಯೇ.ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾದುದು.ಬೇರೆ ದೇಶಗಳಲ್ಲಿ ಹಲವು ಬಾರಿ ಸಂವಿಧಾನವನ್ನ ಬದಲಾಯಿಸಲಾಗಿದೆ.ಪಾಕಿಸ್ತಾನದಲ್ಲಿ ನಾಲ್ಕು ಭಾರಿ ಬದಲಾಯಿಸಲಾಗಿದೆ. ನಮ್ಮ ದೇಶದಲ್ಲಿ ೭೩ ವರ್ಷವಾದರೂ ಬದಲಾವಣೆ ಮಾಡಿಲ್ಲ ಎಂದು ಹೇಳಿದರು.
ನಮ್ಮದು ಅಂತಹ ಶ್ರೇಷ್ಠವಾದ ಸಂವಿಧಾನ.ಚಿಕ್ಕಪುಟ್ಟ ತಿದ್ದುಪಡಿಗಳನ್ನ ಮಾಡಲಾಗಿದೆ.ಆಯಾ ಕಾಲಕ್ಕೆ ಅನುಗುಣವಾಗಿ ತಿದ್ದುಪಡಿ ಮಾಡಲಾಗಿದೆ.ಭಗವದ್ಗೀತೆ ಶ್ರೇಷ್ಠ ಗ್ರಂಥ.ಅದರಲ್ಲಿ ಸತ್ಯದ ಸಂಗತಿಗಳನ್ನ ತಿಳಿಸುವ ಅಂಶಗಳಿವೆ. ವೇದೋಪನಿಷತ್ ಕೂಡ ಪವಿತ್ರವಾದ ಗ್ರಂಥ. ಅಷ್ಟೇ ಪವಿತ್ರವಾದುದು ನಮ್ಮ ಸಂವಿಧಾನ ಎಂದರು.
ನಾವು ಶಾಸಕಾಂಗದವರು. ಎಷ್ಟೇ ಕಾನೂನು ಬದಲಾವಣೆ ಮಾಡಬಹುದು.ಆದರೆ, ಪ್ರಸ್ತಾವನೆ ಬಹಳ ಮುಖ್ಯ. ನಾವು ಪಾಸ್ ಮಾಡಿದ್ರೆ ಸಾಲದು. ಅದು ರಾಜ್ಯಪಾಲರ ಬಳಿ ಹೋಗಬೇಕು. ರಾಜ್ಯಪಾಲರು ಒಪ್ಪಿದ್ರೂ, ಅದು ಅಂತಿಮವಾಗಿ ರಾಷ್ಟ್ರಪತಿ ಬಳಿ ಹೋಗಬೇಕು.ನಮ್ಮ ನ್ಯಾಯಾಂಗ ವ್ಯವಸ್ಥೆ ಉತ್ತಮವಾಗಿದೆ. ನ್ಯಾಯಾಂಗ ತನ್ನದೇ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಸ್ವಾತಂತ್ರ ಅಂದ್ರೆ ಸ್ವೇಚ್ಛೆಯಿಂದ ವರ್ತಿಸುವುದಲ್ಲ. ವಾಕ್ ಸ್ವಾತಂತ್ರ್ಯ ಅಂತ ಕೆಲವರು ಬೇರೆ ದೇಶದ ಜಿಂದಾಬಾದ್ ಅಂತಾ ಹೇಳ್ತಾರೆ. ಕಾರ್ಯಕ್ರಮವೊಂದರಲ್ಲಿ ಯುವತಿಯೊಬ್ಬಳು ಪಾಕಿಸ್ತಾನ ಜಿಂದಾಬಾದ್ ಅಂತ ಹೇಳಿದ್ದಳು. ಆಕೆಯನ್ನ ಪೊಲೀಸರು ಬಂಧಿಸಿ ಕರೆದೊಯ್ದರು. ಇದನ್ನ ಕೆಲವರು ಟೀಕಿಸಿದರು.ನಮಗೆ ವಾಕ್ ಸ್ವಾತಂತ್ರ್ಯ ಇಲ್ಲವಾ ಅಂತ ಪ್ರಶ್ನೆ ಮಾಡಿದ್ರು. ನಮ್ಮ ಸಂವಿಧಾನದಲ್ಲಿ ಅದಕ್ಕೆಲ್ಲ ಅವಕಾಶ ಇಲ್ಲ. ವಾಕ್ ಸ್ವಾತಂತ್ರ್ಯ ಅಂತ ಈ ರೀತಿ ಮಾಡಬಾರದು.ಹಾಗೆ ಮಾಡಿದ್ರೆ ಅರಾಜಕತೆ ಉಂಟಾಗಲಿದೆ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.