![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 10, 2022, 11:56 AM IST
ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೋಮವಾರ (ಅ.10) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆಗಸ್ಟ್ 22ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಅವರನ್ನು ಅಕ್ಟೋಬರ್ 2ರಂದು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮುಲಾಯಂ(82ವರ್ಷ) ವಿಧಿವಶರಾಗಿದ್ದಾರೆ.
ಮುಖ್ಯಮಂತ್ರಿ ಗಾದಿಗೆ ಏರಿದ್ದ “ಕುಸ್ತಿಪಟು”…
ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದಲ್ಲಿ 1939 ನವೆಂಬರ್ 22ರಂದು ಮುಲಾಯಂ ಸಿಂಗ್ ಯಾದವ್ ಜನಿಸಿದ್ದರು. ಮೂರ್ತಿ ದೇವಿ ಮತ್ತು ಸುಗಾರ್ ಸಿಂಗ್ ಯಾದವ್ ದಂಪತಿಯ ಮಗ ಮುಲಾಯಂ ಸಿಂಗ್ ಯಾದವ್. ಡಾ.ರಾಮ್ ಮನೋಹರ ಲೋಹಿಯಾ ಅವರ ಸಮಾಜವಾದಿ ಚಿಂತನೆಗಳಿಂದ ಪ್ರಭಾವಿತರಾದ ಮುಲಾಯಂ ನಂತರ ರಾಜಕೀಯ ಪ್ರವೇಶಿಸಿದ್ದರು. ಅಂದಿನ ಹೆಸರಾಂತ ಸಮಾಜವಾದಿಗಳಾದ ಮಧು ಲಿಮಯೆ, ಕರ್ಪೂರಿ ಠಾಕೂರ್, ರಾಮ್ ಸೇವಕ್ ಯಾದವ್, ರಾಜ್ ನಾರಾಯಣ್ ಮತ್ತು ಜ್ಞಾನೇಶ್ವರ್ ಮಿಶ್ರಾ ಅವರ ಜತೆ ಮುಲಾಯಂ ನಿಕಟವರ್ತಿಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಮುಲಾಯಂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡಿದ್ದರು.
ಉತ್ತರಪ್ರದೇಶದ ಕೆಪಿಜಿಸಿ ಕಾಲೇಜಿನಲ್ಲಿ ಬಿಎ ಪದವಿ ಪಡೆದ ಮುಲಾಯಂ ನಂತರ ಶಿಕೋಹಾಬಾದ್ ನ ಎಕೆ ಕಾಲೇಜ್ ನಲ್ಲಿ ಬಿ.ಟಿ ಪದವಿ ಹಾಗೂ ಆಗ್ರಾ ಯೂನಿರ್ವಸಿಟಿಯಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದರು. ಬಾಲ್ಯದಲ್ಲಿಯೇ ಕುಸ್ತಿಪಟುವಾಗಬೇಕೆಂಬ ಕನಸು ಕಂಡಿದ್ದ ಮುಲಾಯಂ ನಂತರ ಕುಸ್ತಿಪಟುವಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದರು. ಮಣಿಪುರದಲ್ಲಿ ನಡೆದ ಕುಸ್ತಿ ಪಂದ್ಯದಲ್ಲಿ ಮೊದಲ ಬಾರಿಗೆ ಮುಲಾಯಂ ಅವರ ಸಾಮರ್ಥ್ಯವನ್ನು ಕಂಡುಕೊಂಡವರು ಜಸ್ವಂತ್ ನಗರ್ ಶಾಸಕ ನಾಥು ಸಿಂಗ್. ಇದು ಮುಲಾಯಂ ಬದುಕಿನ ಟರ್ನಿಂಗ್ ಪಾಯಿಂಟ್ ಗೆ ಸಾಕ್ಷಿಯಾಗಿತ್ತು. ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ಮುಲಾಯಂ ಶಿಕ್ಷಕರಾಗಿದ್ದರು.
ಮುಲಯಾಂ ಅವರ ಕೌಶಲ, ಬುದ್ಧಿಮತ್ತೆಯಿಂದ ಪ್ರಭಾವಿತರಾದ ನಾಥು ಸಿಂಗ್, ಮುಲಾಯಂ ಅವರನ್ನು ರಾಜಕೀಯ ಗರಡಿಯಲ್ಲಿ ಪಳಗಿಸಲು ಮುಂದಾಗಿದ್ದರು. ಅದರ ಪರಿಣಾಮ ನಾಥು ಸಿಂಗ್ ಅವರು ಜಸ್ವಂತ್ ನಗರ ವಿಧಾನಸಭಾ ಕ್ಷೇತ್ರದಿಂದ ಸಂಯುಕ್ತ ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನಾಗಿ ಮುಲಾಯಂ ಸಿಂಗ್ ಅವರನ್ನು ಕಣಕ್ಕಿಳಿಸುವ ಮೂಲಕ ರಾಜಕೀಯ ಪ್ರವೇಶಕ್ಕೆ ನಾಂದಿ ಹಾಡಿದ್ದರು.
1967ರಲ್ಲಿ ನಡೆದ ಚುನಾವಣೆಯಲ್ಲಿ ಯಾದವ್ ತಮ್ಮ 28ನೇ ವರ್ಷದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಐದು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಮುಲಾಯಂ ಸಿಂಗ್ ಯಾದವ್ ಹತ್ತು ಬಾರಿ ಶಾಸಕರಾಗಿ ಹಾಗೂ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕುಳ್ಳನೇ ದೇಹದ ಮುಲಾಯಂ ಸಿಂಗ್ ಯಾದವ್ ರಾಜಕೀಯ ಜೀವನದಲ್ಲಿ ತುಂಬಾ ಎತ್ತರಕ್ಕೆ ಏರಿದ್ದರು.
ತುರ್ತು ಪರಿಸ್ಥಿತಿ ವೇಳೆ ಜೈಲುವಾಸ:
ಪ್ರಧಾನಿ ಇಂದಿರಾ ಗಾಂಧಿ 1975ರಲ್ಲಿ ದೇಶಾದ್ಯಂತ ಹೇರಿದ್ದ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಮುಲಾಯಂ ಸಿಂಗ್ ಯಾದವ್ ಕೂಡಾ ಬಂಧನಕ್ಕೊಳಗಾಗಿದ್ದು, 19 ತಿಂಗಳು ಜೈಲುವಾಸ ಅನುಭವಿಸಿದ್ದರು. 1977ರಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಹೀಗೆ ತಮ್ಮ ರಾಜಕೀಯ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ನಡೆಸಿದ ಹೋರಾಟದಿಂದ ಸುಮಾರು 9 ಬಾರಿ ಜೈಲುವಾಸ ಅನುಭವಿಸಿದ್ದರು.
1989ರಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಮೊದಲ ಬಾರಿಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಗಾದಿಗೆ ಏರಿದ್ದರು. 1992ರಲ್ಲಿ ಮುಲಾಯಂ ಅವರು ಸಮಾಜವಾದಿ ರಾಮ್ ಮನೋಹರ ಲೋಹಿಯಾ ಅವರ ಮೌಲ್ಯದ ಅನುಷ್ಠಾನಕ್ಕಾಗಿ ಸಮಾಜವಾದಿ ಪಕ್ಷವನ್ನು ಸ್ಥಾಪಿಸಿದ್ದರು. ನಂತರ 1993ರಲ್ಲಿ ಉತ್ತರಪ್ರದೇಶದ ವಿಧಾನಸಭೆಯ ಚುನಾವಣೆಯಲ್ಲಿ ಮಾಯಾವತಿಯ ಬಹುಜನ್ ಸಮಾಜ್ ಪಕ್ಷದ ಜೊತೆ ಕೈಜೋಡಿಸುವ ಮೂಲಕ ಸಮಾಜವಾದಿ ಪಕ್ಷ ಜಯಭೇರಿ ಗಳಿಸಿತ್ತು.
ಅಯೋಧ್ಯೆ ವಿವಾದ:
ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡ ಘಟನೆ ನಡೆದ ವೇಳೆ ಮುಲಾಯಂ ಸಿಂಗ್ ಯಾದವ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1990ರಲ್ಲಿ ಅಯೋಧ್ಯೆಯಲ್ಲಿ ಪ್ರತಿಭಟನಾನಿರತ ಹಿಂದೂ ಕರಸೇವಕರ ಮೇಲೆ ಪೊಲೀಸ್ ಫೈರಿಂಗ್ ನಡೆಸಲು ಮುಲಾಯಂ ಆದೇಶ ನೀಡಿದ್ದರು. ಮುಲಾಯಂ ಅವರ ಈ ನಿರ್ಧಾರದ ಬಗ್ಗೆ ಹಿಂದೂಗಳು ಮತ್ತು ಮುಸ್ಲಿಮರು ತೀವ್ರವಾಗಿ ಖಂಡಿಸಿದ್ದರು. 1992ರಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡ ನಂತರ ಮುಲಾಯಂ ಸಿಂಗ್ ಮುಸ್ಲಿಮರ ಹೀರೋ ಆಗಿ ಹೊರಹೊಮ್ಮಿದ್ದರು ಎಂದು ಬಿಸಿಸಿ ವರದಿ ಮಾಡಿತ್ತು. ಉತ್ತರಪ್ರದೇಶದಲ್ಲಿ ದೀರ್ಘಕಾಲದ ರಾಷ್ಟ್ರಪತಿ ಆಡಳಿತದ ನಂತರ ಮುಲಾಯಂ ಸಿಂಗ್ ಯಾದವ್ 1994ರಲ್ಲಿ ಮತ್ತೆ ಸಿಎಂ ಪಟ್ಟಕ್ಕೇರಿದ್ದರು.
ಮುಲಾಯಂ ಸಿಂಗ್ ಯಾದವ್ ಅವರು 1989-1991, 1993 – 1995 ಮತ್ತು 2003-2007 ಸೇರಿದಂತೆ ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ್ದರು. 1996ರಿಂದ 1998ರವರೆಗೆ ಕೇಂದ್ರದಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.