ಇಬ್ಬರು ಅನಾಥ ಮಕ್ಕಳನ್ನು ದತ್ತು ಪಡೆದ ಗಾಲಿ ಜನಾರ್ದನ ರೆಡ್ಡಿ ದಂಪತಿಗಳು

ಗೆದ್ದರೆ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಗಾರ್ಮೆಂಟ್ ಫ್ಯಾಕ್ಟರಿ

Team Udayavani, Mar 19, 2023, 7:12 PM IST

1-zcds-sdadsa

ಗಂಗಾವತಿ: ವಿರೂಪಾಪೂರ ತಾಂಡದ ಇಬ್ಬರು ಅನಾಥ ಮಕ್ಕಳಿಗೆ ಶಿಕ್ಷಣ ವಸತಿ ವ್ಯವಸ್ಥೆ ಕಲ್ಪಿಸಲು ದತ್ತು ಪಡೆದಿದ್ದು ಅವರ ಭವಿಷ್ಯ ರೂಪಿಸಲಾಗುತ್ತದೆ. ಇದುವರೆಗೂ ಗಂಗಾವತಿ ಮತ ಕ್ಷೇತ್ರದಲ್ಲಿ ಈಗಾಗಲೇ ಇಕ್ಬಾಲ್ ಅನ್ಸಾರಿ ಹಾಗೂ ಪರಣ್ಣ ಮುನವಳ್ಳಿಯವರಿಗೆ ಎರಡೆರಡು ಅವಕಾಶವನ್ನು ನೀಡಲಾಗಿದೆ. ತಮಗೂ ಒಂದು ಅವಕಾಶ ನೀಡಿದರೆ ಮಹಿಳಾ ಉದ್ಯೋಗಕ್ಕಾ ಗಾರ್ಮೆಂಟ್ ಫ್ಯಾಕ್ಟರಿ ಸ್ಥಾಪನೆ ಸೇರಿ ಗಂಗಾವತಿಯ ಚಿತ್ರಣವನ್ನು ಮುಂಬೈ ನಂತೆ ಮಾರ್ಪಾಡು ಮಾಡುವುದಾಗಿ ಕೆಆರ್‌ಪಿ ಪಾರ್ಟಿ ಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ನಗರದ ವಿರೂಪಾಪೂರ ತಾಂಡದಲ್ಲಿ ಕೆಆರ್‌ಪಿ ಪಾರ್ಟಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಗಂಗಾವತಿಯಲ್ಲಿ ಭತ್ತದ ಬೆಳೆಯು ವಿಪರೀತ ಹಾನಿಯಾಗುತ್ತಿದ್ದು ಮೊದಲಿನಂತೆ ರೈತರಿಗೆ ರೈಸ್ ಮಿಲ್ ಮಾಲೀಕರೂ ಸೇರಿ ಗಂಜ್ ವ್ಯಾಪಾರಿಗಳಿಗೆ ಸರಿಯಾದ ವ್ಯಾಪಾರ ವ್ಯವಹಾರವಿಲ್ಲ. ಗಂಗಾವತಿಯ ಭಾಗದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಮೂಲಕ ಪ್ರಗತಿ ಸಾಧಿಸಬಹುದಾಗಿದೆ. ಇದಕ್ಕಾಗಿ ಅಂಜನಾದ್ರಿ ಹಾಗೂ ಸುತ್ತಲಿನ ಪ್ರದೇಶವನ್ನು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿಪಡಿಸಲು 5 ಸಾವಿರ ಕೋಟಿ ರೂ.ಗಳನ್ನು ಸರಕಾರದಿಂದ ಮಂಜೂರಿ ಮಾಡಿಸಲಾಗುತ್ತದೆ. ಹೊಸಪೇಟೆ ಗಂಗಾವತಿ ಪ್ರವಾಸೋದ್ಯಮ ಜೋಡಣೆಗೆ ವರ್ತೂಲ ರಸ್ತೆಗಳ ನಿರ್ಮಾಣ, ಪ್ರತಿ ವಾರ್ಡು ಮತ್ತು ಗ್ರಾಮಗಳಲ್ಲಿ ರೈತರಿಗೆ, ವಿದ್ಯಾರ್ಥಿಗಳಿಗೆ ಜನಸಾಮಾನ್ಯರಿಗೆ ಕೂಲಿಕಾರ್ಮಿಕರಿಗೆ ಅನುಕೂಲವಾಗುವಂತಹ ಯೋಜನೆ ರೂಪಿಸುವ ಕನಸು ಹೊಂದಿದ್ದು ಗಂಗಾವತಿ ಕ್ಷೇತ್ರದ ಜನರು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ಇಬ್ಬರು ಮಕ್ಕಳ ದತ್ತು: ವಿರೂಪಾಪೂರ ತಾಂಡದಲ್ಲಿ ಅನಾರೋಗ್ಯದಿಂದ ಮೃತ ಲಂಬಾಣಿ ಮಹಿಳೆ ಶ್ರೀದೇವಿ ಅವರ ಮಕ್ಕಳಾದ ಸ್ವರೂಪ್ ಮತ್ತು ವೇಣು ಎನ್ನುವವರಿಗೆ ಶಿಕ್ಷಣ ಸೇರಿ ಅಗತ್ಯ ಸೌಕರ್ಯ ಕಲ್ಪಿಸಲು ಅವರ ಕುಟುಂಬದ ಹಿರಿಯರ ಜತೆ ಮಾತನಾಡಿ ದತ್ತು ಪಡೆದು ಆರ್ಥಿಕ ನೆರವು ನೀಡಲಾಗುವುದು. ಈಗಾಗಲೇ 6 ತಿಂಗಳ ಹಿಂದೆ ಮಕ್ಕಳಿಗೆ ನೆರವು ನೀಡುತ್ತಿದ್ದು ಎಲ್ಲಿಯೂ ಹೇಳದಂತೆ ಮನವಿ ಮಾಡಿದರೂ ಅವರ ಕುಟುಂಬದವರು ಬಹಿರಂಗ ಪಡಿಸುವಂತೆ ಕೋರಿದ್ದರಿಂದ ಇಂದು ನನ್ನ ಪತ್ನಿ ಅರುಣಾ ಲಕ್ಷ್ಮಿ ಲಂಬಾಣಿ ವೇಷದಲ್ಲಿ ಮಕ್ಕಳ ಜತೆ ಇದ್ದಾರೆಂದರು.

ಹಿರೇಜಂತಗಲ್, ನೀಲಕಂಠೇಶ್ವರ ಕ್ಯಾಂಪ್ ಸೇರಿ ವಿವಿಧ ವಾರ್ಡುಗಳಲ್ಲಿ ಸಮಾವೇಶ ಮಾಡುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪತ್ನಿ ಅರುಣಾ ಲಕ್ಷ್ಮೀ , ಕೆಆರ್‌ಪಿ ಪಾರ್ಟಿಯ ಜಿಲ್ಲಾಧ್ಯಕ್ಷ ಎ.ಮನೋಹರಗೌಡ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಅಮರಜ್ಯೋತಿ ನರಸಪ್ಪ, ಈ.ರಾಮಕೃಷ್ಣ, ಹೊಸಮಲಿ ರಮೇಶ ನಾಯಕ, ಯಮನೂರ ಚೌಡ್ಕಿ, ರಾಮನಾಯಕ್, ಐಲಿ ಚಂದ್ರಪ್ಪ,. ಐಲಿ ನಾರಾಯಣಪ್ಪ, ಪೊಲಕಾಲ್ ಗಾಳಿನಾಥ, ಐಲಿ ಶಂಕರ್, ಸತೀಶ ದಂಡಿನ್ ಸೇರಿ ಅನೇಕರಿದ್ದರು.

ಲಂಬಾಣಿ ಉಡುಗೆಯಲ್ಲಿಗಮನ ಸೆಳೆದ ಅರುಣಾ
ನಗರದ ವಿರೂಪಾಪೂರ ತಾಂಡದಲ್ಲಿ ಕೆಆರ್‌ಪಿ ಪಾರ್ಟಿ ಸಮಾವೇಶದಲ್ಲಿ ಗಾಲಿ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಯವರು ಲಂಬಾಣಿ ಸಂಪ್ರದಾಯ ವೇಷ ಧರಿಸುವ ಮೂಲಕ ಗಮನ ಸೆಳೆದರು. ಲಂಬಾಣಿ ತಾಂಡದ ಮಹಿಳೆಯರ ಜತೆ ಫೋಟೋ ತೆಗೆಸಿಕೊಂಡರು. ನಂತರ ಲಂಬಾಣಿ ಭಾಷೆಯಲ್ಲಿ ಮಾತನಾಡಿ, ನನ್ನ ಪತಿ ಗಾಲಿ ಜನಾರ್ದನರೆಡ್ಡಿಯವರು ಯಾವುದೇ ತಪ್ಪು ಮಾಡಿಲ್ಲ. ಷಡ್ಯಂತ್ರ ನಡೆಸಿ ಕೇಸ್‌ಗಳಲ್ಲಿ ಸಿಲುಕಿಸಿದ್ದಾರೆ. ದೇವರ ದಯೆಯಿಂದ ಜೀವಂತ ಇದ್ದಾರೆ. ಗಂಗಾವತಿಯ ತಂದೆ ತಾಯಿಂದಿರು ಅವರನ್ನು ಗೆಲ್ಲಿಸುವ ಮೂಲಕ ಆಶೀರ್ವಾದ ಮಾಡಿದರೆ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ನಮ್ಮ ಇಡೀ ಕುಟುಂಬ ಶ್ರಮಿಸಲಿದೆ ಎಂದರು.

ಟಾಪ್ ನ್ಯೂಸ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.