![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
Team Udayavani, Apr 25, 2024, 1:43 AM IST
![ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ](https://www.udayavani.com/wp-content/uploads/2024/04/chowta-george-620x349.jpg)
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರು ತಮ್ಮ ಚುನಾವಣೆ ಪ್ರಚಾರದ ಕೊನೆಯಲ್ಲಿ ಬಿಜೈ ಬಳಿಯಲ್ಲಿರುವ ಮಾಜಿ ರಕ್ಷಣ ಸಚಿವ ದಿ| ಜಾರ್ಜ್ ಫೆರ್ನಾಂಡಿಸ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಜಾರ್ಜ್ ಫೆರ್ನಾಂಡಿಸ್ ನನಗೆ ದೊಡ್ಡ ಮಟ್ಟದ ಸ್ಫೂರ್ತಿ, ಅವರ ಆದರ್ಶಗಳನ್ನು ಮುಂದಿಟ್ಟು ರಾಜಕಾರಣದಲ್ಲಿ ಇರಬೇಕೆಂದು ಬಯಸಿದ್ದೇನೆ. 2000ನೇ ಇಸವಿಯಲ್ಲಿ 50ನೇ ಗಣರಾಜ್ಯೋತ್ಸವ ಪರೇಡ್ ಸಂದರ್ಭದಲ್ಲಿ ದಿಲ್ಲಿಯಲ್ಲಿ ಎನ್ಸಿಸಿ ಕೆಡೆಟ್ ಆಗಿ ಪಾಲ್ಗೊಂಡಿದ್ದೆ. ಅಂದಿನ ಪ್ರಧಾನಿ ವಾಜಪೇಯಿ ಮತ್ತು ರಕ್ಷಣ ಸಚಿವ ಜಾರ್ಜ್ ಅವರನ್ನು ಹತ್ತಿರದಿಂದ ಕಂಡಿದ್ದೆ. ಅದೇ ನನಗೆ ಮುಂದೆ ದೇಶ ಸೇವೆಗೆ ಮತ್ತು ಸಮಾಜ ಸೇವೆಗೆ ಸ್ಫೂರ್ತಿ ನೀಡಿತ್ತು ಎಂದು ಕ್ಯಾ| ಚೌಟ ಸ್ಮರಿಸಿದರು.
ಮಂಗಳೂರಿನಲ್ಲಿ ಹುಟ್ಟಿ ಬೆಳೆದು ಮುಂಬಯಿ, ಬಿಹಾರದಲ್ಲಿ ರಾಜಕೀಯ ಜೀವನ ನಡೆಸಿದ ಜಾರ್ಜ್ ಫೆರ್ನಾಂಡಿಸ್ ನಮಗೆಲ್ಲ ಆದರ್ಶ ಪ್ರಾಯರು. ತಮ್ಮದೇ ಕನಸಿನಂತೆ ಕೊಂಕಣ ರೈಲ್ವೇಯನ್ನು ಅಭಿವೃದ್ಧಿ ಪಡಿಸಿದ್ದು ಜಾರ್ಜ್ ಫೆರ್ನಾಂಡಿಸ್ ಹೆಗ್ಗಳಿಕೆ. ಅವರು ತುಳುನಾಡಿನ ಹೆಮ್ಮೆ. ಸರಳತೆಯ ಸಾಕಾರಮೂರ್ತಿಯಾಗಿದ್ದ ಜಾರ್ಜ್ ತುಳುನಾಡಿನ ಹೆಮ್ಮೆಯ ಮಗ. ದ. ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ದೊಡ್ಡದಿದೆ. ಜಾರ್ಜ್ ಸವೆಸಿದ ಹಾದಿ ಯಲ್ಲೇ ಮುನ್ನಡೆಯುತ್ತೇನೆ. ಅವರ ಸರಳತೆ, ದೂರದೃಷ್ಟಿ ಆದರ್ಶ ಎಂದರು.
ಅಭ್ಯರ್ಥಿ ಘೋಷಣೆಯಾದ ಕೂಡಲೇ ಕದ್ರಿಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದೆ. ಅಲ್ಲಿಂದಲೇ ಪ್ರಚಾರ ಆರಂಭಿಸಿದ್ದೆ. ಈಗ ಜಾರ್ಜ್ ಅವರ ಸಮಾಧಿಗೆ ನಮಿಸಿ, ಅವರ ರೀತಿಯಲ್ಲೇ ನಡೆಯುತ್ತೇನೆ ಎಂದು ಹೇಳಿ ಪ್ರಚಾರ ಕೊನೆಗೊಳಿಸುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣ ಪ್ರಭಾರಿ ಕ್ಯಾ| ಗಣೇಶ್ ಕಾರ್ಣಿಕ್, ಜಗದೀಶ್ ಶೇಣವ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು](https://www.udayavani.com/wp-content/uploads/2024/07/mangaluru-150x74.jpg)
Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
![ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್ ಸೇತುವೆ ಶೀಘ್ರ ಪೂರ್ಣ](https://www.udayavani.com/wp-content/uploads/2024/07/Brider-150x94.jpg)
ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್ ಸೇತುವೆ ಶೀಘ್ರ ಪೂರ್ಣ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.