ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ 20 ವರ್ಷ ಕಠಿನ ಸಜೆ


Team Udayavani, Jun 14, 2023, 6:19 AM IST

lok adalat

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದೆ.

ಅಂಕೋಲಾ ಕಾವಳಗದ್ದೆಯ ಸಚಿನ್‌ ಸಂತೋಷ್‌ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್‌ ಜಯಪಾಲ್‌ ನಾಯ್ಕ (33) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ
ಪಿಯುಸಿ ವಿದ್ಯಾರ್ಥಿನಿ 2022ರ ಎ.12ರಂದು ಮಧ್ಯಾಹ್ನ 12.45ರ ಸುಮಾರಿಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗುವ ಟಿಕೆಟ್‌ ಪಡೆಯಲೆಂದು ನಿಂತಿದ್ದಾಗ ಅಲ್ಲಿಗೆ ಬಂದ ಅಪರಾಧಿಗಳು ಆಕೆಯನ್ನು ಮಾತನಾಡಿಸುತ್ತ ಟಿಕೆಟ್‌ ಮಾಡಿಸಿಕೊಡುವುದಾಗಿ ಹೇಳಿದ್ದರು. ಅನಂತರ ಟಿಕೆಟ್‌ ಕೌಂಟರ್‌ನಲ್ಲಿ ಟಿಕೆಟ್‌ ಪಡೆಯುವಂತೆ ನಟಿಸಿ ಬಳಿಕ “ಇಲ್ಲಿ ಟಿಕೆಟ್‌ ಸಿಗುವುದಿಲ್ಲ. ಕಾರವಾರದಲ್ಲಿ ಟಿಕೆಟ್‌ ತೆಗೆಸಿಕೊಡುತ್ತೇವೆ. ಅಲ್ಲಿಗೆ ಹೋಗೋಣ” ಎಂದು ನಂಬಿಸಿ ಆಕೆಯನ್ನು ರೈಲಿನಲ್ಲಿ ಕಾರವಾರಕ್ಕೆ ಕರೆದೊಯ್ದಿದ್ದರು.

ಅಂಕೋಲಾದಲ್ಲಿ ಅಪರಾಧಿ ಪ್ರವೀಣ್‌ ಜಯಪಾಲ್‌ ನಾಯ್ಕನ ಮನೆಗೆ ಕರೆದೊಯ್ದು ಇಬ್ಬರು ಕೂಡ ಅತ್ಯಾಚಾರ ನಡೆಸಿದ್ದರು. ಎ.13ರಂದು ಕಾರವಾರದ ಲಾಡ್ಜ್ಗೆ ಕರೆದೊಯ್ದು ಅಲ್ಲಿಯೂ ಅತ್ಯಾಚಾರವೆಸಗಿದ್ದರು. ಎ.14ರಂದು ಮಂಗಳೂರು ರೈಲು ನಿಲ್ದಾಣಕ್ಕೆ ಕರೆತಂದು ಬಿಟ್ಟಿದ್ದರು. ಬಾಲಕಿಯನ್ನು ಗಮನಿಸಿದ ರೈಲ್ವೆ ಪೊಲೀಸರಿಗೆ ಸಂಶಯ ಬಂದು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಳು. ಅಪರಾಧಿಗಳನ್ನು ಬಂಧಿಸುವಲ್ಲಿ ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದರು. ರೈಲ್ವೇ ಪೊಲೀಸ್‌ ಇನ್‌ಸ್ಪೆಕ್ಟರ್‌ ಮೋಹನ್‌ ಕೊಟ್ಟಾರಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ಜೂ.12ರಂದು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಕ್ಸೋ ಕಾಯಿದೆ ಕಲಂ 6ರಂತೆ ಇಬ್ಬರಿಗೂ ತಲಾ 20 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಠಿನ ಸಜೆ, ಭಾರತೀಯ ದಂಡ ಸಂಹಿತೆ ಕಲಂ 366ರಡಿ ತಲಾ 10 ವರ್ಷ ಕಠಿನ ಸಜೆ, 30,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 6 ತಿಂಗಳ ಕಠಿನ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ 5 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶ ನೀಡಿದರು. ಆ ಹಣದಲ್ಲಿ 1 ಲ.ರೂ.ಗಳನ್ನು ಕೂಡಲೇ ಆಕೆಯ ವಿದ್ಯಾಭ್ಯಾಸಕ್ಕೆ ಒದಗಿಸಬೇಕು. ಉಳಿದ ಮೊತ್ತವನ್ನು ಠೇವಣಿಯಾಗಿ ಇಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.