Goa ಕಾಡ್ಗಿಚ್ಚಿನಿಂದ ಹಲವು ಕಡೆ ಅಪಾರ ಅರಣ್ಯ ನಾಶ; ರಾಜ್ಯಸಭೆಯಲ್ಲಿ ಮಾಹಿತಿ
Team Udayavani, Apr 7, 2023, 3:42 PM IST
ಪಣಜಿ: ಕಳೆದ ಎರಡು ತಿಂಗಳಲ್ಲಿ ಗೋವಾ ರಾಜ್ಯ ಅರಣ್ಯ ಪ್ರದೇಶದಲ್ಲಿ ಹಲವು ಬಾರಿ ಕಾಡ್ಗಿಚ್ಚಿನ ಘಟನೆಗಳು ನಡೆದಿವೆ. ಬೆಂಕಿಯಿಂದಾಗಿ ಒಟ್ಟು 4.18 ಚದರ ಕಿಲೋಮೀಟರ್ ಅರಣ್ಯ ಪ್ರದೇಶ ನಾಶವಾಗಿದೆ ಎಂಬ ಮಾಹಿತಿ ಇದೀಗ ಪರಿಸರ ಪ್ರೇಮಿಗಳನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಗುರುವಾರ ರಾಜ್ಯಸಭೆಯಲ್ಲಿ ಸಂಸದ ಲೂಯಿಝಿನ್ ಫಾಲೆರೊ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳು ರಾಜ್ಯಾದ್ಯಂತ ಅಭಯಾರಣ್ಯ ಪ್ರದೇಶದಲ್ಲಿ 74 ಕಾಡ್ಗಿಚ್ಚು ಸಂಭವಿಸಿವೆ. ಕಳೆದ ತಿಂಗಳು, ರಾಜ್ಯದಾದ್ಯಂತ ಖಾಸಗಿ ಭೂಮಿ, ಮೀಸಲು ಅರಣ್ಯಗಳು, ಸಮುದಾಯ ಭೂಮಿ ಮತ್ತು ಸಂರಕ್ಷಿತ ಪ್ರದೇಶಗಳಲ್ಲಿ ಕಾಡ್ಗಿಚ್ಚು ಘಟನೆ ನಡೆದಿದೆ. ಈ ಕಾಡ್ಗಿಚ್ಚು ಮೂರು ವನ್ಯಜೀವಿ ಅಭಯಾರಣ್ಯಗಳ ನಡುವಿನ 2.27 ಚದರ ಕಿಲೋಮೀಟರ್ ಪ್ರದೇಶವು ಬೆಂಕಿಗಾಹುತಿಯಾಗಿದೆ. ಇದು ಸೇರಿ ಒಟ್ಟು 4.18 ಚದರ ಕಿಲೋಮೀಟರ್ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.
ಮಾರ್ಚ್ ಮೊದಲ ಹದಿನೈದು ದಿನಗಳಲ್ಲಿ ದಾಖಲಾದ ಒಟ್ಟೂ 74 ಕಾಡ್ಗಿಚ್ಚು ಪ್ರಕರಣದಲ್ಲಿ 32 ಪ್ರಕರಣಗಳು 3 ವನ್ಯಜೀವಿ ಅಭಯಾರಣ್ಯಗಳಲ್ಲಿ ನಡೆದಿದೆ ಎಂದು ಸಚಿವ ಚೌಬೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ದೂರದ ಮತ್ತು ದೂರದ ಪರ್ವತ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಭಾರತೀಯ ವಾಯುಪಡೆಯ (ಐಎಎಫ್) ನೆರವಿನೊಂದಿಗೆ ಗ್ರೌಂಡ್ ಟೀಂ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಶ್ವಿಯಾಗಿದೆ. ಅಭಯಾರಣ್ಯದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ನಿಂದ ವಾಟರ್ ಸ್ಪ್ರೇ ಕೂಡ ಬಳಸಲಾಗಿದೆ. ಎನ್ಡಿಆರ್ ಎಫ್ನ ಎರಡು ಬೆಟಾಲಿಯನ್ಗಳಿಗೆ ಕಾಡ್ಗಿಚ್ಚುಗಳ ವಿರುದ್ಧ ಹೋರಾಡಲು ತರಬೇತಿ ನೀಡಲಾಗಿದೆ ಎಂದು ಸಚಿವ ಚೌಬೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.