ಗೋವಾದಲ್ಲಿ ಶೀಘ್ರ ಸ್ವಂತ ವಿದ್ಯುತ್ ಉತ್ಪಾದನೆ ಆರಂಭ: ಗೋವಾ ಇಂಧನ ಸಚಿವ ಸುದಿನ್ ಧವಳಿಕರ್
ಮುಂದಿನ 25 ವರ್ಷಗಳಲ್ಲಿ ಗೋವಾ ವಿದ್ಯುತ್ ಸಮಸ್ಯೆಗೆ ಪರಿಹಾರ
Team Udayavani, Jun 30, 2023, 5:39 PM IST
ಪಣಜಿ: ಪ್ರಸ್ತುತ, ಗೋವಾ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುತ್ತಿಲ್ಲ. ಶೀಘ್ರದಲ್ಲೇ ಗೋವಾ ರಾಜ್ಯವು ಸ್ವಂತವಾಗಿ ವಿದ್ಯುತ್ ಉತ್ಪಾದಿಸಲು ಪ್ರಾರಂಭಿಸುತ್ತದೆ. 1,200 ಕೋಟಿ ವೆಚ್ಚದಲ್ಲಿ ಭೂಗತ ವಿದ್ಯುತ್ ಮಾರ್ಗಗಳನ್ನು ಹಾಕಲು ಆರಂಭಿಸಿದ್ದೇವೆ. ಇದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ. ಮುಖ್ಯಮಂತ್ರಿ ಡಾ.ಸಾವಂತ್ ನೇತೃತ್ವದ ಸರ್ಕಾರದ ಮೇಲೆ ಗೋವಾದ ಜನತೆ ವಿಶ್ವಾಸವಿಡಬೇಕು. ಮುಂದಿನ 25 ವರ್ಷಗಳಲ್ಲಿ ಗೋವಾದಲ್ಲಿ ವಿದ್ಯುತ್ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ಇಂಧನ ಸಚಿವ ಸುದಿನ್ ಧವಳಿಕರ್ ಭರವಸೆ ನೀಡಿದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ದಕ್ಷಿಣ ಗೋವಾದಲ್ಲಿ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ, ಇನ್ನೆರಡು ವರ್ಷಗಳಲ್ಲಿ ಗೋವಾದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುತ್ತೇನೆ ಎಂದು ಧವಲೀಕರ್ ಹೇಳಿದರು. “ಇಂಡಸ್ಟ್ರಿಯಲ್ ಎಸ್ಟೇಟ್ಗೆ ವಿದ್ಯುತ್ ಏರಿಳಿತದ ಸಮಸ್ಯೆ 65 ಎಂವಿಎ ಟ್ರಾನ್ಸ್ಫಾರ್ಮರ್ ಸ್ಥಾಪಿಸಿದ ನಂತರ ಬಗೆಹರಿಯಲಿದೆ. ಕುಂಕಳ್ಳಿ ಸಬ್ ಸ್ಟೇಶನ್ ಅಪ್ಗ್ರೇಡ್ ಮಾಡುವ ಕಾರ್ಯವನ್ನೂ ಕೈಗೆತ್ತಿಕೊಳ್ಳಲಾಗಿದೆ.ಕಾಣಕೋಣ ಭಾಗದಲ್ಲಿ 200 ಕೋಟಿ ರೂ ವೆಚ್ಛದಲ್ಲಿ ಅಂಡರ್ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಹೆಚ್ಚು ಸಬ್ ಸ್ಟೇಶನ್ ಅಗತ್ಯವಿರುವ ಸ್ಥಳಗಳಲ್ಲಿ ಸಬ್ ಸ್ಟೇಶನ್ ಸ್ಥಾಪಿಸಲಾಗುವುದು ಎಂದು ಸಚಿವ ಧವಳೀಕರ್ ಮಾಹಿತಿ ನೀಡಿದರು.
350 ಕೋಟಿ ರೂ. ವೆಚ್ಛದಲ್ಲಿ ವೆರ್ನಾ ಸಬ್ ಸ್ಟೇಷನ್ ಗೆ ಟೆಂಡರ್ ಆಗಿದ್ದು, ಸಾಲಗಾಂವ್ ಸಬ್ ಸ್ಟೇಷನ್ ಗೆ 200 ಕೋಟಿ ರೂ.ಗೆ ಟೆಂಡರ್ ಮುಂದಿನ ತಿಂಗಳು ನಡೆಯಲಿದೆ. ಹಲವು ಸಬ್ ಸ್ಟೇಷನ್ ಗಳ ಕಾಮಗಾರಿ ನಡೆಸಲು 2 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ ಎಂದು ಸಚಿವ ಧವಲೀಕರ್ ಮಾಹಿತಿ ನೀಡಿದರು.
ಇದನ್ನೂ ಓದಿ: ಫ್ರೀ ಬಸ್ಸಲ್ಲಿ ಪಿಕ್ನಿಕ್ ಹೋದ ಹೆಂಡತಿ, ಕುಡಿದು ಬಸ್ ಚಕ್ರದ ಕೆಳಗೆ ತಲೆಯಿಟ್ಟ ಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.