![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Nov 13, 2020, 7:17 PM IST
ಹಾವೇರಿ: ಜಿಲ್ಲೆಗೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬೆಂಗಳೂರಿನಿಂದ ವರ್ಚೂವಲ್ ವಿಡಿಯೋ ಮೂಲಕ ಶಂಕುಸ್ಥಾಪನೆ ಮಾಡಿದರು.
ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಬಳಿ ಆವರಣದಲ್ಲಿರುವ 56 ಎಕರೆಯಲ್ಲಿ ಸಿದ್ದವಾಗುತ್ತಿರುವ ವೈದ್ಯಕೀಯ ಕಾಲೇಜು ಕಟ್ಟಡದ ಶಂಕುಸ್ಥಾಪನೆಯನ್ನು ದೀಪ ಬೆಳಗಿಸುವ ಮೂಲಕ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಒಂದೆ ವೇದಿಕೆಯೊಳಗೆ ಬೆಂಗಳೂರು ಮತ್ತು ಹಾವೇರಿ ಎರಡು ಕಡೆ ದೀಪ ಬೆಳಗಿಸಿ ಭೂಮಿ ಪೂಜೆಯ ಶಂಕಸ್ಥಾಪನೆ ಮಾಡಿದರು.
ಬೆಂಗಳೂರಿನಿಂದ ರಿಮೋಟ್ ಒತ್ತುವ ಮೂಲಕ ಕಟ್ಟಡದ ಅಡಿಗಲ್ಲು ಸಮಾರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಮತ್ತು ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ,ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ,ಸುಧಾಕರ, ಸಂಸದ ಶಿವಕುಮಾರ ಉದಾಸಿ ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.