ಗೃಹಲಕ್ಷ್ಮೀಗೆ ಜು. 14ರಿಂದ ಅರ್ಜಿ ಸಲ್ಲಿಕೆ ಆರಂಭ : ಲಕ್ಷ್ಮೀ ಹೆಬ್ಟಾಳ್ಕರ್
ಇಂದು ಅಥವಾ ನಾಳೆ ಅಧಿಕೃತ ಘೋಷಣೆ
Team Udayavani, Jul 3, 2023, 7:19 AM IST
ಬೆಳಗಾವಿ: ಈ ತಿಂಗಳ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಬಗ್ಗೆ ಮಾತನಾಡಿಕೊಂಡಿದ್ದೇವೆ. ಜು.3 ಅಥವಾ 4ರಂದು ಈ ಬಗ್ಗೆ ಅಧಿಕೃತ
ವಾಗಿ ಘೋಷಿಸುತ್ತೇವೆ. ಮುಂದಿನ ಆಗಸ್ಟ್ ನಿಂದ ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ ಧನಸಹಾಯ ಸಿಗಲಿದೆ ಎಂದು ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ. ಸರಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲೂ ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.
ನಮ್ಮ ಸರಕಾರ ಆಡಳಿತ ಆರಂಭಿಸಿ ಒಂದು ತಿಂಗಳು 5 ದಿನಗಳು ಮಾತ್ರ ಆಗಿದೆ. ಅಷ್ಟರಲ್ಲೇ ನಾವು ಕೊಟ್ಟ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ವೈಎಸ್ಟಿ ಸಂಗ್ರಹ ಆರಂಭವಾಗಿದೆ ಎನ್ನುವ ಎಚ್.ಡಿ. ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿ. ಅವರು ಕೂಡ ಹಿಂದೆ ಸಿಎಂ ಆಗಿದ್ದವರು. ಆಡಳಿತ ನಡೆಸಿದ ಅನುಭವ ಇದೆ. ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ್ದಾರೆ. ಈಗಲೇ ನೀವು ಈ ರೀತಿ ಮಾತನಾಡಲು ಆರಂಭಿಸಿದರೆ ಅದು ತಪ್ಪಾಗುತ್ತದೆ. ಸ್ವಲ್ಪ ಸಮಯ ಕೊಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.