![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 15, 2021, 1:01 PM IST
ಬೆಂಗಳೂರು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾದ ಸುಟ್ಟ ಗಾಯಗಳಿಂದ ರಕ್ಷಿಸಲ್ಪಟ್ಟು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಬುಧವಾರ(ಡಿಸೆಂಬರ್ 15) ಕೊನೆಯುಸಿರೆಳೆದಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಇತರ 12 ಮಂದಿ ತಮಿಳುನಾಡಿನಲ್ಲಿ ಸಂಭವಿಸಿದ್ದ ಭೀಕರ ದುರಂತದಲ್ಲಿ ವಿಧಿವಶರಾಗಿದ್ದು, ದುರಂತದಲ್ಲಿ ಬದುಕುಳಿದ ಏಕೈಕ ಗಾಯಾಳು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Pained beyond words to learn of the demise of IAF pilot, Group Captain Varun Singh. He was a true fighter who fought till his last breath. My thoughts and deepest condolences are with his family and friends. We stand firmly with the family, in this hour of grief. https://t.co/hZrdatjaAA
— Rajnath Singh (@rajnathsingh) December 15, 2021
ತೀವ್ರ ಸುಟ್ಟ ಗಾಯದಿಂದ ಬಳಲುತ್ತಿರುವ ಪೈಲಟ್ ಕ್ಯಾ.ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್ ನ ಮಿಲಿಟರಿ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ನಲ್ಲಿ ಸೂಲೂರು ವಾಯುನೆಲೆಗೆ ತರಲಾಗಿದ್ದು, ಅಲ್ಲಿಂದ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ಡಿಸೆಂಬರ್ 8ರಂದು ನಡೆದಿದ್ದ ದುರಂತದಲ್ಲಿ ಮೂರು ಸೇನೆಯ ಮಹಾದಂಡನಾಯಕ ಜ.ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಆದರೆ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಗಂಭೀರವಾದ ಸುಟ್ಟ ಗಾಯಗಳಿಂದ ಬದುಕುಳಿದಿದ್ದ ಏಕೈಕ ಸಾಕ್ಷಿಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಇಂದು ಸಿಂಗ್ ವಿಧಿವಶರಾಗಿದ್ದಾರೆ. ಇದರೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಎಲ್ಲಾ 14 ಮಂದಿಯೂ ಮಡಿದಂತಾಗಿದೆ.
Group Captain Varun Singh served the nation with pride, valour and utmost professionalism. I am extremely anguished by his passing away. His rich service to the nation will never be forgotten. Condolences to his family and friends. Om Shanti.
— Narendra Modi (@narendramodi) December 15, 2021
ಪ್ರಧಾನಿ ಮೋದಿ ಸಂತಾಪ:
ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ವರುಣ್ ಸಿಂಗ್ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.