ಜಿದ್ದಾಜಿದ್ದಿನ ಅಖಾಡ: ಇಂದು ಮಧ್ಯಾಹ್ನ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕ ಘೋಷಣೆ
ಗುಜರಾತ್ ವಿಧಾನಸಭೆಯ ಅವಧಿ 2023ರ ಫೆಬ್ರವರಿ 18ರಂದು ಕೊನೆಗೊಳ್ಳಲಿದೆ
Team Udayavani, Oct 14, 2022, 11:57 AM IST
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಘೋಷಿಸಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕರ್ವಾ ಚೌತ್ ಗೆ ಪ್ರೇಯಸಿ ಜತೆ ಶಾಪಿಂಗ್…ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ..ಮುಂದೇನಾಯ್ತು
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಹಾಗೂ ರಾಜಕೀಯದ ದೃಷ್ಟಿಕೋನದಿಂದ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ. ಗುಜರಾತ್ ವಿಧಾನಸಭೆಯ ಅವಧಿ 2023ರ ಫೆಬ್ರವರಿ 18ರಂದು ಕೊನೆಗೊಳ್ಳಲಿದೆ. ಹಿಮಾಚಲ ಪ್ರದೇಶದ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಅಂತ್ಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಇತ್ತೀಚೆಗೆ ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಟಿ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 92 ಸ್ಥಾನಗಳ ಅಗತ್ಯವಿದೆ. ಹಿಮಾಚಲ ಪ್ರದೇಶ ವಿಧಾನಸಭೆ 68 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 111 ಸ್ಥಾನಗಳಲ್ಲಿ ಜಯಭೇರಿ ಗಳಿಸಿ ಬಹುಮತ ಪಡೆದಿತ್ತು. ಕಾಂಗ್ರೆಸ್ 62, ಬಿಟಿಪಿ 2, ಎನ್ ಸಿಪಿ 1 ಸ್ಥಾನ ಪಡೆದಿತ್ತು. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಗಳಿಸಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಗುಜರಾತ್ ನಲ್ಲಿ ಈ ಬಾರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಮತದಾರರಿಗೆ ಹಲವು ಭರವಸೆಗಳನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ದೀರ್ಘಕಾಲದ ಆಡಳಿತ ನಡೆಸಿರುವ ಬಿಜೆಪಿಗೆ ಆಮ್ ಆದ್ಮಿ ಪಕ್ಷ ಸವಾಲೊಡ್ಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.