![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 16, 2021, 5:21 PM IST
ಕುಂದಾಪುರ: “ನಾನು ಇವತ್ತಿನವರೆಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲ. ಅವರು ಕೊಟ್ಟಿಲ್ಲ’ . ಇದು ರಾಜ್ಯ ಸರಕಾರದ ಸಂಪುಟ ವಿಸ್ತರಣೆಯ ಕುರಿತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಪ್ರತಿಕ್ರಿಯೆ.
ಕುಂದಾಪುರದಲ್ಲಿ ಶನಿವಾರ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪತ್ರಕರ್ತರೊಂದಿಗೆ ಮಾತನಾಡಿದ ಅವರು.
5 ಬಾರಿ ಶಾಸಕರಾದರೂ ಸಚಿವ ಸ್ಥಾನ ನೀಡದಿರುವ ಬಗ್ಗೆ ನಿಮಗೆ ಅಸಮಾಧಾನ ಇದೆಯೇ ಎಂದು ಕೇಳಲಾದ ಪ್ರಶ್ನೆಗೆ, ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನಾನು ಸಮಾಧಾನವಾಗಿಯೇ ಇದ್ದೇನೆ. ನಾನಾಗಿಯೇ ಸಚಿವ ಸ್ಥಾನ ಕೊಡಿ ಎಂದು ಕೇಳಿಲ್ಲ. ಅವರೂ ಕೊಟ್ಟಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೈಕಮಾಂಡ್ ಅವರ ಪರಮಾಧಿಕಾರ. ನಾನು ಈ ಬಗ್ಗೆ ಏನನ್ನೂ ಹೇಳಲು ಹೋಗುವುದಿಲ್ಲ ಎಂದವರು ಉತ್ತರಿಸಿದರು.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ; ಸರ್ಕಾರ ಸತ್ತು ಹೋಗಿದೆ: ಸಿದ್ದರಾಮಯ್ಯ
ಕುಂದಾಪುರದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಶೀಘ್ರವೇ ಪೂರ್ಣಗೊಳ್ಳಲಿದೆ ಎಂದವರು ಕಾಮಗಾರಿ ವಿಳಂಬದ ಕುರಿತಂತೆ ಸ್ಪಷ್ಟನೆ ನೀಡಿದರು.
You seem to have an Ad Blocker on.
To continue reading, please turn it off or whitelist Udayavani.