ಹರ್ಷ ಹತ್ಯೆ ಖಂಡನೀಯ: ಶಿವಮೊಗ್ಗ ಮುಸ್ಲಿಂ ಜಾಯಿಂಟ್ ಆಕ್ಷನ್ ಕಮಿಟಿ

ಪೊಲೀಸರು ಕುರುಡರಂತೆ ವರ್ತಿಸಿದ್ದಾರೆ, ಬಿಜೆಪಿ ಮುಖಂಡರ ಹೇಳಿಕೆಗಳೆ ಪ್ರಚೋದನೆ ನೀಡಿದವು

Team Udayavani, Feb 24, 2022, 1:27 PM IST

1-sadasds

ಶಿವಮೊಗ್ಗ : ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಯನ್ನು ಶಿವಮೊಗ್ಗ ಮುಸ್ಲಿಂ ಜಾಯಿಂಟ್ ಆಕ್ಷನ್ ಕಮಿಟಿ ಖಂಡಿಸಿದ್ದು, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಲಾಗಿದೆ.

ವಕೀಲ ಮುಜಾಹಿದ್‌‌ ಸಿದ್ದಿಕಿ ಮಾತನಾಡಿ, ಶಿವಮೊಗ್ಗದಲ್ಲಿ ಪರಿಸ್ಥಿತಿ ಈ ಮಟ್ಟಕ್ಕೆ ಬರಲು ಯಾರು ಕಾರಣ ಎಂಬುದು ಎಲ್ಲರಿಗೂ ಗೊತ್ತು.ಫೆ.20ರಂದು ರಾತ್ರಿ ಹರ್ಷನನ್ನು ಅಮಾನವೀಯವಾಗಿ ಕೊಲೆ ಮಾಡಿದ್ದನ್ನು ನಾವು ಖಂಡಿಸುತ್ತೇವೆ.ಇಂಥ ಘಟನೆಗಳು ನಡೆಯಬಾರದು ಎಂದರು.

ಹರ್ಷ ಕೊಲೆ ಪ್ರಕರಣದ ಬಳಿಕ ಪೊಲೀಸರು ತನಿಖೆ ಆರಂಭಿಸಿರುವುದಿಲ್ಲ. ಜೊತೆಗೆ ಆತನ ಕುಟುಂಬದವರು ಎಫ್ ಐ ಆರ್ ದಾಖಲಿಸಿರುವುದಿಲ್ಲ. ಆದರೆ ಅಷ್ಟರ ಒಳಗಾಗಿ ಈಶ್ವರಪ್ಪ ಅವರು ಮುಸ್ಲಿಂ ಗೂಂಡಾಗಳು ಈ ಕೃತ್ಯ ಮಾಡಿದ್ದಾರೆ. ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳುತ್ತಾರೆ.ಈ ಹೇಳಿಕೆಯಿಂದ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ : ಹರ್ಷ ಚಿತಾಭಸ್ಮ ರಥಯಾತ್ರೆಗೆ ತಡೆ: ಸರಕಾರದ ವಿರುದ್ಧ ಕಾಳಿ ಸ್ವಾಮಿ ಆಕ್ರೋಶ

ಸೆಕ್ಷನ್ 144 ನಿಷೇದಾಜ್ಞೆ ನಡುವೆ ಮೆರವಣಿಗೆಯಲ್ಲಿ ಶವ ತರುವಾಗ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ.ಈ ಎಲ್ಲ ಘಟನೆಗಳು ಪೊಲೀಸರ ಎದುರೇ ನಡೆದರೂ ಪೊಲೀಸರು ಕುರುಡರಂತೆ ವರ್ತಿಸಿದ್ದಾರೆ.ಕಲ್ಲುತೂರಾಟ ನಡೆಸಿದ ಆರೋಪಿಗಳನ್ನು ಬಂಧಿಸಿದ್ದರೆ ಈ ರೀತಿಯ ಸ್ಥಿತಿ‌ ನಿರ್ಮಾಣವಾಗುತ್ತಲೇ ಇರಲಿಲ್ಲ.ಇನ್ನು ಅಜಾದ್ ನಗರದಲ್ಲಿ ಗೂಂಡಾಗಳು ಮನೆಮನೆಗೆ ನುಗ್ಗಿ ಹಲ್ಲೆ‌ ನಡೆಸುತ್ತಾರೆ. ಸಿಕ್ಕಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚುತ್ತಾರೆ‌. ಇಲ್ಲಿ ಪೊಲೀಸ್ ಇಲಾಖೆ ವೈಪಲ್ಯ ಎದ್ದು ಕಾಣುತ್ತದೆ.ಇದಾದ ಬಳಿಕ ಬಿಜೆಪಿ ಮುಖಂಡರ ಹೇಳಿಕೆಗಳು ಜನರಿಗೆ ಇನ್ನಷ್ಟು ಪ್ರಚೋದನೆ ನೀಡಿದರಿಂದ ಪರಿಸ್ಥಿತಿ ಬಿಗಡಾಯಿಸಿತು ಎಂದು ಆಕ್ರೋಶ ಹೊರ ಹಾಕಿದರು.

ಮನೆಯಿಂದ ಸ್ಮಶಾನಕ್ಕೆ ತೆರಳುವಾಗಲೂ ಸಿಕ್ಕ ಸಿಕ್ಕ ಕಟ್ಟಡಕ್ಕೆ ಕಲ್ಲು ತೂರಿ‌ಹಾನಿ ಹಾನಿಗೊಳಿಸಿದ್ದಾರೆ‌.ಈ ಪ್ರಕರಣನ್ನು ನ್ಯಾಯಾಂಗ ತನಿಖೆ ಅಥವಾ ಸಿಐಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

 

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.