Nilekani: ತಾವು ಶಿಕ್ಷಣ ಪಡೆದ ಬಾಂಬೆ IITಗೆ 315 ಕೋಟಿ ರೂಪಾಯಿ ದೇಣಿಗೆ ಕೊಟ್ಟ ನಿಲೇಕಣಿ

ಐಐಟಿಯೊಂದಿಗೆ 50 ವರ್ಷಗಳ ಒಡನಾಟವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾಗಿದೆ

Team Udayavani, Jun 20, 2023, 3:32 PM IST

Nilekani: ತಾವು ಶಿಕ್ಷಣ ಪಡೆದ ಬಾಂಬೆ IITಗೆ 315 ಕೋಟಿ ರೂಪಾಯಿ ದೇಣಿಗೆ ಕೊಟ್ಟ ನಿಲೇಕಣಿ

ಬೆಂಗಳೂರು: ಉದ್ಯಮಿ, ರಾಜಕಾರಣಿ, ಇನ್ಫೋಸಿಸ್‌ ಸಹಸಂಸ್ಥಾಪಕ ನಂದನ್‌ ನಿಲೇಕಣಿ ಅವರು ತಾವು ಶಿಕ್ಷಣ ಪಡೆದ ಬಾಂಬೆ ಐಐಟಿ (IIT) ಜತೆಗಿನ ನಿರಂತರ 50 ವರ್ಷಗಳ ಒಡನಾಟದ ನೆನಪಿಗಾಗಿ ಬರೋಬ್ಬರಿ 315 ಕೋಟಿ ರೂಪಾಯಿ ದೇಣಿಗೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಜೇವರ್ಗಿ ಮರಳು ಮಾಫಿಯಾಗೆ ಬಲಿಯಾದ ಪೇದೆ ಮನೆಗೆ ಪ್ರಿಯಾಂಕ್ ಖರ್ಗೆ ಭೇಟಿ; ಪರಿಹಾರ ವಿತರಣೆ

ನಂದನ್‌ ನಿಲೇಕಣಿ ಅವರು 1973ರಲ್ಲಿ ಬಾಂಬೆ ಐಐಟಿಯಲ್ಲಿ ಎಲೆಕ್ಟ್ರಾನಿಕ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿ ಸೇರ್ಪಡೆಗೊಂಡಿದ್ದರು. “ಬಾಂಬೆ ಐಐಟಿ ನನ್ನ ಜೀವನದ ತಳಹದಿಯಾಗಿದೆ. ನಾನು ಜೀವನದಲ್ಲಿ ಈ ಮಟ್ಟದಲ್ಲಿ ಬೆಳೆಯಲು ಈ ಶಿಕ್ಷಣ ಸಂಸ್ಥೆ ಕಾರಣವಾಗಿದೆ. ಆ ನಿಟ್ಟಿನಲ್ಲಿ ಪ್ರತಿಷ್ಠಿತ ಬಾಂಬೆ ಐಐಟಿಯೊಂದಿಗೆ 50 ವರ್ಷಗಳ ಒಡನಾಟವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾಗಿದೆ. ನಾನು ಈ ಸಂಸ್ಥೆಗೆ ಆಭಾರಿಯಾಗಿದ್ದು, ಭವಿಷ್ಯದ ದೃಷ್ಟಿಕೋನದ ಹಿನ್ನೆಲೆಯಲ್ಲಿ ದೇಣಿಗೆ ನೀಡಿದ್ದೇನೆ” ಎಂದು ನಿಲೇಕಣಿ ತಿಳಿರುವುದಾಗಿ ವರದಿ ವಿವರಿಸಿದೆ.

ನಾನು ನೀಡಿರುವ ದೇಣಿಗೆ ಹಣಕಾಸಿನ ಕೊಡುಗಿಗಿಂತ ಹೆಚ್ಚು. ನನಗೆ ಶಿಕ್ಷಣ ನೀಡಿದ ಸಂಸ್ಥೆಗೆ ಗೌರವ ನೀಡುವ ಮತ್ತು ನಾಳೆಯ ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳವ ವಿದ್ಯಾ ಸಂಸ್ಥೆಗೆ ನೀಡಿದ ಕಾಣಿಕೆಯಾಗಿದೆ ಎಂದು ನಿಲೇಕಣಿ ಹೇಳಿದ್ದಾರೆ.


ಮಂಗಳವಾರ (ಜೂನ್‌ 20) ಬೆಂಗಳೂರಿನಲ್ಲಿ ನಂದನ್‌ ನಿಲೇಕಣಿ ಮತ್ತು ಬಾಂಬೆ ಐಐಟಿಯ ಪ್ರೊಫೆಸರ್‌ ಸುಭಾಶಿಸ್‌ ಚೌಧುರಿ ಜಂಟಿಯಾಗಿ MoUಗೆ ಸಹಿ ಹಾಕಿದ್ದರು.

ನಮ್ಮ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ನಂದನ್‌ ನಿಲೇಕಣಿ ಅವರು ಉದಾರ ಕೊಡುಗೆ ನೀಡುವುದನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ನಂದನ್‌ ನಿಲೇಕಣಿ ಈ ಮೊದಲು ಐಐಟಿಗೆ 85 ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ಇದರೊಂದಿಗೆ ನಿಲೇಕಣಿ ಒಟ್ಟು 400 ಕೋಟಿ ರೂಪಾಯಿ ದೇಣಿಗೆ ಕೊಟ್ಟಂತಾಗಿದೆ ಎಂದು ವರದಿ ಹೇಳಿದೆ.

ಈ ಐತಿಹಾಸಿಕ  ಸಂಸ್ಥೆಗೆ ದೊಡ್ಡ ಮೊತ್ತದ ದೇಣಿಗೆ ನೀಡಿರುವುದರಿಂದ ಬಾಂಬೆ ಐಐಟಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲು ಸಹಾಯಕವಾಗಲಿದೆ. ಅಷ್ಟೇ ಅಲ್ಲ ಜಾಗತಿಕವಾಗಿಯೂ ಉನ್ನತ ಶಿಕ್ಷಣ ಸಂಸ್ಥೆಯನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ ಎಂದು ಬಾಂಬೆ ಐಐಟಿ ಡೈರೆಕ್ಟರ್‌, ಪ್ರೊ.ಚೌಧುರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.