![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 18, 2021, 11:31 PM IST
ಹಾಸನ: ಕ್ಷುಲ್ಲಕ ಕಾರಣಕ್ಕೆ ಗಂಡನೇ ಹೆಂಡತಿಯನ್ನು ಕೊಲೆಗೈದಿದ್ದು, ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ತಾಲ್ಲೂಕಿನ ಶಾಂತಿಗ್ರಾಮದಲ್ಲಿ ಇಂತಹುದೊಂದು ಧಾರುಣ ಘಟನೆ ನಡೆದಿದ್ದು, ಸ್ವತಃ ತನ್ನ ಮಡದಿಯಾದ ಅನ್ನಪೂರ್ಣ(30)ಳನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ಕೌಟುಂಬಿಕ ಸಮಸ್ಯೆಯೇ ಕಾರಣ ಎಂಬ ಮಾತು ಕೇಳಿ ಬಂದಿದ್ದು, ಬಳಿಕ ತಾನು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡವನನ್ನು ತುಳಿಸಿದಾಸ್ (40) ಎಂದು ಗುರುತಿಸಲಾಗಿದೆ. ಈತ ಹಾಸನದ ಎಟಿಎಂ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಇಂದು ಮಧ್ಯಾಹ್ನ ತುಳಿಸಿದಾಸ್ ತನ್ನ ಪತ್ನಿಯನ್ನ ಜಮೀನಿಗೆ ಜೊತೆಯಲ್ಲಿಯೇ ಕರೆದುಕೊಂಡು ಹೋಗಿದ್ದ. ಈ ಸಮಯದಲ್ಲಿ ಇಬ್ಬರಿಗೂ ಸ್ವಲ್ಪಹೊತ್ತು ಜಗಳವಾಗಿದೆ ಎನ್ನಲಾಗಿದೆ. ಬಳಿಕ ಆತ ಆಕೆಯನ್ನ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:ಬೆಳಗಾವಿ : ಸಿಡಿಲು ಬಡಿದು ಕಾರ್ಮಿಕ ಸಾವು
ಮೂರು ತಿಂಗಳ ಹಿಂದೆ ಮೈಸೂರು ಮೂಲದ ಅನ್ನಪೂರ್ಣಳನ್ನ ಮದುವೆಯಾಗಿದ್ದ ತುಳಸಿದಾಸ, 1 ಒಂದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ ತುಳಿಸಿದಾಸ್ ಸಂಸಾರದಲ್ಲಿ 15 ದಿನಗಳಿಂದ ವಿರಸ ಮೂಡಿತ್ತು. ವಾರದಿಂದ ಮನೆಯಲ್ಲಿಯೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದು, ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.