![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 18, 2023, 10:59 AM IST
ವಾಷಿಂಗ್ಟನ್: ಸುಮಾರು ಒಂದು ವರ್ಷದ ಹಿಂದೆ ChatGPTಯನ್ನು ತಯಾರಿಸಿದ್ದ ಓಪನ್ ಎಐ ಕಂಪನಿ ಇದೀಗ ಮೈಕ್ರೋಸಾಫ್ಟ್ ಬೆಂಬಲಿತ ಸಂಸ್ಥೆಯನ್ನು ಮುನ್ನಡೆಸುವ ಸಾಮರ್ಥ್ಯ ಇಲ್ಲದ ಸಿಇಒ ಸ್ಯಾಮ್ ಆಲ್ಟಾಮನ್ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:Betting: ಬೆಟ್ಟಿಂಗ್ನ ಮಾಸ್ಟರ್ ಬುಕ್ಕಿ ಬಂಧನ, 41 ಲಕ್ಷ ರೂ. ವಶ
ಮೈಕ್ರೋಸಾಫ್ಟ್ ಬೆಂಬಲಿತ ಓಪನ್ ಎಐ ಕಂಪನಿ ತಿಂಗಳಿಗೆ ಕೋಟ್ಯಂತರ ರೂಪಾಯಿ ಆದಾಯಗಳಿಸುತ್ತಿತ್ತು. ಚಾಟ್ ಜಿಪಿಟಿ ಎಂಬ ತಂತ್ರಜ್ಞಾನವನ್ನು ಬಿಡುಗಡೆ ಮಾಡುವ ಮೂಲಕ ಟೆಕ್ ಲೋಕದಲ್ಲಿ ದೊಡ್ಡ ಸಂಚಲನ ಹುಟ್ಟು ಹಾಕಿತ್ತು. ಅದಕ್ಕೆ ಕಾರಣ ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ನ ಚಾಟ್ ಬೋಟ್ ಕೆಲವೇ ಸೆಕೆಂಡ್ಸ್ ಗಳಲ್ಲಿ ನಮಗೆ ಬೇಕಾದ ಮಾಹಿತಿ, ಪದ್ಯ, ಕಲೆಯನ್ನು ರಚಿಸಿ ಕೊಡುತ್ತಿರುವುದು.
ಓಪನ್ ಎಐ ಕಂಪನಿಯ ಸಿಇಒ ಆಲ್ಟ್ ಮನ್ (38ವರ್ಷ) ಆಡಳಿತ ಮಂಡಳಿಯೊಂದಿಗೆ ನಿರಂತರವಾದ ಯಾವುದೇ ಸಂಪರ್ಕ ಹೊಂದಿಲ್ಲ. ಅಷ್ಟೇ ಅಲ್ಲ ಕಂಪನಿಯನ್ನು ಮುನ್ನಡೆಸುವ ವಿಶ್ವಾಸವನ್ನು ಕಳೆದುಕೊಂಡಿದ್ದರಿಂದ ಹುದ್ದೆಯಿಂದ ವಜಾಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಓಪನ್ ಎಐ ಮಂಡಳಿ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.
ಓಪನ್ ಎಐ ಮುನ್ನಡೆಸಿಕೊಂಡು ಹೋಗುವ ಸಾಮರ್ಥ್ಯ ಆಲ್ಟಮನ್ ಗೆ ಇಲ್ಲ ಎಂಬುದು ಮಂಡಳಿಗೆ ಮನವರಿಕೆಯಾಗಿದೆ. ಓಪನ್ ಎಐ ಕಂಪನಿಗಾಗಿ ಮೈಕ್ರೋಸಾಫ್ಟ್ ಬಿಲಿಯನ್ ಗಟ್ಟಲೇ ಹಣವನ್ನು ಹೂಡಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.
ಓಪನ್ ಎಐ ಕಂಪನಿಗೆ ಸ್ಯಾಮ್ ಆಲ್ಟ್ ಮನ್ ಅವರ ಕೆಲವು ಕೊಡುಗೆಯನ್ನು ಶ್ಲಾಘಿಸಿದ್ದು, ಶೀಘ್ರದಲ್ಲೇ ನೂತನ ಸಿಇಒ ನೇಮಕ ಮಾಡುವುದಾಗಿ ತಿಳಿಸಿದೆ. ಏತನ್ಮಧ್ಯೆ ಆಲ್ಟಮನ್ ಅವರ ಸ್ಥಾನಕ್ಕೆ ಹಂಗಾಮಿಯಾಗಿ ಕಂಪನಿಯ ಚೀಫ್ ಟೆಕ್ನಾಲಜಿ ಅಧಿಕಾರಿ ಮೀರಾ ಮುರಾಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಂಪನಿ ಪ್ರಕಟನೆಯಲ್ಲಿ ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.