ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್‌ ಗುರಿ : ಡಾ| ಸುಧಾಕರ್‌


Team Udayavani, Mar 30, 2021, 9:40 AM IST

ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್‌ ಗುರಿ : ಡಾ| ಸುಧಾಕರ್‌

ಉಡುಪಿ: ಉಡುಪಿ ಜಿಲ್ಲೆಯಲ್ಲಿ 13 ಲಕ್ಷ ಜನರಲ್ಲಿ 7 ಲಕ್ಷ ಜನರಿಗೆ ಆರೋಗ್ಯ ಕಾರ್ಡ್‌ ನೀಡಲಾಗಿದೆ. 6 ಲಕ್ಷ ಕಾರ್ಡ್‌ ನೀಡಲು ಬಾಕಿಯಿದೆ. ಇದಕ್ಕಾಗಿ 90 ದಿನಗಳ ಗುರಿ ನೀಡಲಾಗಿದೆ. ಈ ಅವಧಿಯಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ| ಕೆ. ಸುಧಾಕರ್‌ ಮಂಗಳವಾರ ಪ್ರಗತಿ ಪರಿಶೀಲನ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಕ್ತದೊತ್ತಡ, ಮಧುಮೇಹದ ಬಗ್ಗೆ ಆದಷ್ಟು ಎಚ್ಚರಿಕೆ ವಹಿಸಬೇಕು. ಎಚ್‌1ಎನ್‌1 ಸ್ಥಿತಿಗತಿಗಳ ಬಗ್ಗೆಯೂ ಗಮನಹರಿಸಬೇಕು. ಮುಂದಿನ 60ರಿಂದ 90 ದಿನಗಳು ಸವಾಲಿನದ್ದಾಗಲಿವೆ. ಒಬ್ಬ ವ್ಯಕ್ತಿಗೆ ಕೋವಿಡ್‌ ಪಾಸಿಟಿವ್‌ ಕಂಡುಬಂದರೆ ಪ್ರಾಥಮಿಕ ಸಂಪರ್ಕವನ್ನು ಗುರುತಿಸಬೇಕು ಎಂದರು.

ಎ. 1ರಿಂದ ಕಡ್ಡಾಯ ಲಸಿಕೆ
ಎ. 1ರಿಂದ 45 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯವಾಗಿ ಕೋವಿಡ್‌ ಲಸಿಕೆ ನೀಡಬೇಕು. ಮನೆಯಲ್ಲಿರುವ ವಿದ್ಯಾವಂತರು ಹಿರಿಯವರನ್ನು ಕರೆದುಕೊಂಡು ಹೋಗಿ ಲಸಿಕೆ ಹಾಕಿಸಿಕೊಳ್ಳ ಬೇಕು ಎಂದರು. ಆ್ಯಂಬುಲೆನ್ಸ್‌, ಡಾಟಾ ಉಪಕರಣಗಳ ಕೊರತೆಯನ್ನು ಶೀಘ್ರದಲ್ಲಿ ನೀಗಿಸಬೇಕು. ಪ್ರತೀ ಬುಧವಾರ ಇನ್‌ಸ್ಪೆಕ್ಷನ್‌ ಡೇ ಇರಲಿದೆ. ಪ್ರಾಥಮಿಕ ಸಹಿತ ಎಲ್ಲ ಆರೋಗ್ಯ ಕೇಂದ್ರಗಳಲ್ಲಿಯೂ ಪ್ರತಿಯೊಂದು ಆಡಳಿತಾಧಿಕಾರಿಗಳೂ ಇನ್‌ಸ್ಪೆಕ್ಷನ್‌ ಮಾಡಬೇಕು ಎಂದು ತಿಳಿಸಿದರು.

ಶಾಸಕ ಕೆ. ರಘುಪತಿ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ. ಜಗದೀಶ್‌, ಸಿಇಒ ಡಾ| ನವೀನ್‌ ಭಟ್‌, ಎಸ್‌ಪಿ ಎನ್‌. ವಿಷ್ಣುವರ್ಧನ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಆರೋಗ್ಯ ಕರ್ನಾಟಕ-ಆಯುಷ್ಮಾನ್‌ ಭಾರತ್‌ ವಿಲೀನದಿಂದ ಉಪಯೋಗ
ಬಿ.ಆರ್‌. ಶೆಟ್ಟಿ ಆಸ್ಪತ್ರೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಅವರು ಸರಕಾರದ ನೆರವು ಯಾಚಿಸುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಆರೋಗ್ಯ ಕರ್ನಾಟಕ ಹಾಗೂ ಆಯುಷ್ಮಾನ್‌ ಭಾರತ್‌ ವಿಲೀನ ಮಾಡಿರುವುದರಿಂದ ಹಲವಾರು ಪ್ರಯೋಜನಗಳಾಗಿವೆ. ಇದರಲ್ಲಿರುವ ಕೆಲವೊಂದು ನ್ಯೂನತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.