Heavy rain: ಹಲವು ರಾಜ್ಯಗಳಿಗೆ ಅಲರ್ಟ್
Team Udayavani, Jul 7, 2023, 7:12 AM IST
ಹೊಸದಿಲ್ಲಿ: ದೇಶದ ಹಲವೆಡೆ ಭಾರೀ ಮಳೆ ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ¬ “ರೆಡ್ ಹಾಗೂ ಆರೆಂಜ್ ಅಲರ್ಟ್’ ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಗೋವಾದಲ್ಲಿ ಗುರುವಾರ 24 ಗಂಟೆಗಳ ಅವಧಿಯಲ್ಲಿ ವರುಣನ ಅಬ್ಬರಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡು, ಪ್ರವಾಹದ ನೀರಲ್ಲಿ 56 ವರ್ಷದ ಮಹಿಳೆಯೊಬ್ಬರು ಕೊಚ್ಚಿಹೋಗಿದ್ದಾರೆ. ಹಲವು ಮರಗಳು ಧರಾಶಾಯಿಯಾಗಿವೆ. ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇತರ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆಯಿಂದಾಗಿ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಶಾಲೆ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ. ತಗ್ಗುಪ್ರದೇಶಗಳ ಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ರಾಜಧಾನಿ ದಿಲ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗುರುವಾರ ಹಲವು ರಸ್ತೆಗಳು ಜಲಾವೃತಗೊಂಡು, ಸಂಚಾರ ದಟ್ಟಣೆ ಉಂಟಾಯಿತು. ಮಹಾರಾಷ್ಟ್ರದ ಮುಂಬಯಿಯಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಪಾಕ್ನಲ್ಲಿ 11 ಸಾವು: ಪಾಕಿಸ್ಥಾನದ ಪಂಜಾಬ್ ಪ್ರಾಂತದಲ್ಲೂ ದಾಖಲೆಯ ಮಳೆಯಾಗುತ್ತಿದ್ದು, ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ. ಜು. 8ರ ವರೆಗೂ ಇಲ್ಲಿ ಮಳೆ, ಪ್ರವಾಹ ಸ್ಥಿತಿ ಮುಂದು ವರಿಯಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.