![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 18, 2020, 11:50 AM IST
ರಾಯಚೂರು: ರಾಯಚೂರು ಹೈದರಾಬಾದ್ ಮುಖ್ಯರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾದ ಕಾರಣ ಪ್ರಯಾಣಿಕರು ಗಂಟೆಗಟ್ಟಲೇ ಪ್ರಯಾಸ ಪಡುವಂತಾಯಿತು.
ಸಮೀಪದ ಯರಮರಸ್ ಬಳಿಯ ಕೈಗಾರಿಕೆ ವಲಯದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಟ್ರಾಫಿಕ್ ಜಾಮ್ ಉಂಟಾಗಿ ಸಮಸ್ಯೆ ಸೃಷ್ಟಿಯಾಯಿತು. ಈ ಭಾಗದಲ್ಲಿ ಹತ್ತಿ ಮಿಲ್ ಗಳು ಹೆಚ್ಚಾಗಿದ್ದು, ರೈತರು ಹತ್ತಿ ಬೆಳೆ ಮಾರಾಟಕ್ಕೆ ತರುತ್ತಿರುವ ಕಾರಣ ವಾಹನಗಳು ಸಾಲುಗಟ್ಟಿವೆ. ಅಡ್ಡಾದಿಡ್ಡಿ ಓಡಾಡುವುದರಿಂದ ಸಮಸ್ಯೆಯಾಗುತ್ತಿದೆ.
ಯರಮರಸ್ ವಿಐಪಿ ಸರ್ಕ್ಯೂಟ್ ಬಳಿಯಿಂದ ಯರಮರಸ್ ಕ್ಯಾಂಪ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದ್ದು , ನಿತ್ಯ ಸಾವಿರಾರು ವಾಹನ ಸಂಚರಿಸುತ್ತಿವೆ.
ಇದನ್ನೂ ಓದಿ:ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು
ಸ್ಥಳದಲ್ಲಿ ಟ್ರಾಫಿಕ್ ಪೊಲೀಸರು ಇಲ್ಲದ ಕಾರಣ ಸಾಕಷ್ಟು ತೊಂದರೆಯಾಯಿತು. ಹತ್ತಿ ಮಾರಾಟ ಮುಗಿಯುವವರೆಗೆ ಈ ರಸ್ತೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.