ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಅಂತಿಮ ತೀರ್ಪಿಗೆ ಇನ್ನೂ ಕಾಯಬೇಕು

Team Udayavani, Feb 9, 2022, 3:11 PM IST

1-ffdsfsd

ಬೆಂಗಳೂರು : ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನಲ್ಲಿ ಬುಧವಾರ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿ ಆದೇಶ ನೀಡಿದ್ದಾರೆ.

ಮಧ್ಯಂತರ ಆದೇಶವನ್ನು ವಿಭಾಗೀಯ ಪೀಠವೇ ನೀಡಲಿ , ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ವಿಸ್ಕ್ರತ ಪೀಠ ರಚನೆನ್ನು ನ್ಯಾಯಮೂರ್ತಿಯೇ ನಿರ್ಧರಿಸಲಿ ಎಂದು ಹೇಳಿ ಸಂಪೂರ್ಣ ಕಡತವನ್ನು ಮುಖ್ಯ ನ್ಯಾಯಮೂರ್ತಿಗೆ ಹಸ್ತಾಂತರಿಸಿ ದಾಖಲೆಗಳನ್ನು ಸಲ್ಲಿಸುವಂತೆ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ.

ಇದು ತುರ್ತಾಗಿ ಬಗೆ ಹರಿಸಬೇಕಾದ ಪ್ರಕರಣ. ಪ್ರಕರಣದಲ್ಲಿ ಅನೇಕ ಮುಖ್ಯ ಪ್ರಶ್ನೆಗಳು ಮೂಡಿದ್ದು, ಮಧ್ಯಂತರ ಆದೇಶವನ್ನೂ ನ್ಯಾಯಮೂರ್ತಿಗಳೇ ನೀಡಲಿ ಎಂದು ಏಕ ಸದಸ್ಯ ಪೀಠ ಹೇಳಿದೆ.

ನಾಡಿದ್ದು, ಶುಕ್ರವಾರ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ತೀರ್ಪಿಗಾಗಿ ಇಡೀ ರಾಜ್ಯವೇ ಕಾಯುತ್ತಿದ್ದ ವೇಳೆ ಬೆಂಗಳೂರು ನಗರ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹಿಜಾಬ್‌ ಧರಿಸಿದವರಿಗೆ ಪ್ರವೇಶ ನಿರ್ಬಂಧ ಮತ್ತು ವಸ್ತ್ರ ಸಂಹಿತೆ ಜಾರಿಗೊಳಿಸಿರುವ ಸರಕಾರದ ಆದೇಶ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಚಾರಣೆ ನಡೆಸಿ ತೀರ್ಪು ನೀಡಲಿದೆ.

ಅರ್ಜಿದಾರ ವಿದ್ಯಾರ್ಥಿನಿ ಪರ  ಸಂಜಯ್ ಹೆಗಡೆ ಮತ್ತು ಇತರ ವಕೀಲರು  ವಾದ ಮಂಡಿಸಿದರು. ಕಾಲೇಜಿನ ಪರ ವಕೀಲ ಸಜ್ಜನ್ ಪೂವಯ್ಯ,ಸರಕಾರದ ಪರ ವಕೀಲ ಎಜಿ ನಾವದಗಿ ವಾದ ಮಂಡನೆ ಮಾಡಿದರು.

ಹಿಜಾಬ್‌ ಪ್ರಕರಣ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್‌, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸ ಬಾರದು, ಶಾಂತಿ ಮತ್ತು ಸುವ್ಯವಸ್ಥೆ ಕಾಯ್ದು ಕೊಳ್ಳಬೇಕು ಎಂದು ಮಂಗಳವಾರ ಸೂಚಿಸಿತ್ತು.

ಜನರ ವಿವೇಕದ ಮೇಲೆ ನ್ಯಾಯಾಲಯಕ್ಕೆ ಸಂಪೂರ್ಣ ನಂಬಿಕೆ ಇದೆ. ಅದನ್ನು ಜನರು ಕಾರ್ಯರೂಪಕ್ಕೆ ತರುತ್ತಾರೆ ಎಂದು ನ್ಯಾಯಾಲಯ ವಿಶ್ವಾಸ ಹೊಂದಿದೆ ಎಂದು ಹೇಳಿತು. ಇಂತಹ ಸಂಗತಿಗಳಿಂದ ನ್ಯಾಯಾಲಯ ವನ್ನು ಯಾರೂ ಪ್ರಭಾ ವಿಸುವಂತಿಲ್ಲ. ನ್ಯಾಯಾಲಯ ಮತ್ತು ನ್ಯಾಯಾ ಧೀಶರು ಇಂತಹದಕ್ಕೆಲ್ಲ ಮಣಿಯುವುದಿಲ್ಲ. ಆದರೆ ಇಂತಹ ಪ್ರತಿ ಭಟನೆಗಳು ಮತ್ತು ಗಲಭೆಗಳನ್ನು ಟಿ.ವಿ. ಗಳಲ್ಲಿ ನೋಡಿದರೆ ಅದು ನ್ಯಾಯಮೂರ್ತಿಗಳ ಮೇಲೆ ಪ್ರಭಾವ ಬೀರುತ್ತದೆ. ಮನಸ್ಸು ಘಾಸಿಯಾಗುತ್ತದೆ. ಬೌದ್ಧಿಕ ಶಕ್ತಿ ಬಳಸಿ, ಹೃದಯದಿಂದ ತೀರ್ಪು ನೀಡಬೇಕಾದಾಗ ಇಂಥ ಘಟನೆಗಳು ಮನಸ್ಸನ್ನು ಘಾಸಿಗೊಳಿಸುತ್ತವೆ. ಹಾಗಾಗಿ ಶಾಂತಿಯಿಂದ ತೀರ್ಪು ನೀಡಲು ಬಿಡಿ ಎಂದು ನಾ| ಕೃಷ್ಣ ದೀಕ್ಷಿತ್‌ ಮಂಗಳವಾರ ಹೇಳಿದ್ದರು.

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.