![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 15, 2021, 3:50 PM IST
ನವದೆಹಲಿ: ಇಡೀ ಜಗತ್ತಿನಲ್ಲಿಯೇ ಹಿಂದೂಗಳು ಹೆಚ್ಚು ಸಹಿಷ್ಣುತೆ ಹೊಂದಿರುವ ಬಹುಸಂಖ್ಯಾತರಾಗಿದ್ದಾರೆ ಎಂದು ಬಾಲಿವುಡ್ ನ ಹಿರಿಯ ಗೀತ ರಚನೆಕಾರ, ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಪುತ್ರಿಯ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಅಖ್ತರ್ ಬರೆದಿರುವ ಲೇಖನದಲ್ಲಿ, ಭಾರತವನ್ನು ಎಂದಿಗೂ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತೀಯರು ಸ್ವಭಾವತಃ ಸಹಿಷ್ಣುತೆ ಹೊಂದಿದವರಾಗಿದ್ದಾರೆ.
ವಾಸ್ತವವಾಗಿ ನಾನು ಇತ್ತೀಚೆಗಿನ ಸಂದರ್ಶನದಲ್ಲಿ ಹೇಳಿದ್ದೆ, ಹಿಂದೂಗಳು ಇಡೀ ಜಗತ್ತಿನಲ್ಲಿಯೇ ತುಂಬಾ ಶಿಸ್ತಿನ ಮತ್ತು ಸಹಿಷ್ಣುತೆ ಹೊಂದಿರುವ ಬಹುಸಂಖ್ಯಾತರು ಎಂಬುದಾಗಿ. ಈಗಲೂ ನಾನು ಆ ಮಾತನ್ನು ಪುನರಾವರ್ತಿಸುತ್ತೇನೆ. ಭಾರತ ಎಂದಿಗೂ ಅಫ್ಘಾನಿಸ್ತಾನದಂತೆ ಆಗಲು ಸಾಧ್ಯವಿಲ್ಲ. ಯಾಕೆಂದರೆ ಭಾರತೀಯರು ಸ್ವಭಾವತಃ ಉಗ್ರವಾದ ಹೊಂದಿಲ್ಲ. ಭಾರತೀಯರು ಸೌಮ್ಯವಾಗಿರುವುದು ಅವರ ಡಿಎನ್ ಎನಲ್ಲೇ ಇದೆ ಎಂದು ಅಖ್ತರ್ ಸಾಮ್ನಾದಲ್ಲಿ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಜಾವೇದ್ ಅಖ್ತರ್ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ನಂತರ ಅಲ್ಲಿನ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ತಾಲಿಬಾನ್ ಮನಸ್ಥಿತಿಯನ್ನು ಭಾರತದ ಆರ್ ಎಸ್ ಎಸ್ ಗೆ ಹೋಲಿಕೆ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದಲ್ಲದೇ, ಅಖ್ತರ್ ಕ್ಷಮೆಯಾಚಿಸುವವರೆಗೂ ಅವರ ಸಿನಿಮಾಗಳನ್ನು ನಿಷೇಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿದ್ದವು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.