Hockey ಏಷ್ಯಾಡ್‌ ವೈಫ‌ಲ್ಯ ಕಾಡುತ್ತಲೇ ಇತ್ತು: ನಾಯಕಿ ಸವಿತಾ

ಭಾರತಕ್ಕೆ 2ನೇ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ

Team Udayavani, Nov 7, 2023, 12:06 AM IST

1-saddsa

ಹೊಸದಿಲ್ಲಿ: “ಏಷ್ಯಾಡ್‌ ವೈಫ‌ಲ್ಯ ನಮ್ಮನ್ನು ಕಾಡುತ್ತಲೇ ಇತ್ತು. ಇದನ್ನು ಹೊಡೆದೋಡಿಸಲು ನಮ್ಮ ಮುಂದಿದ್ದ ಉತ್ತಮ ಅವಕಾಶವೆಂದರೆ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ. ಇಲ್ಲಿ ಚಿನ್ನದ ಪದಕ ಗೆಲ್ಲಲೇಬೇಕೆಂದು ಪಟತೊಟ್ಟು ಆಡಿದ ಪರಿಣಾಮ ಪ್ರಶಸ್ತಿ ಒಲಿಯಿತು’ ಎಂಬುದಾಗಿ ಭಾರತೀಯ ವನಿತಾ ಹಾಕಿ ತಂಡದ ನಾಯಕಿ ಸವಿತಾ ಪುನಿಯ ಪ್ರತಿಕ್ರಿಯಿಸಿದ್ದಾರೆ.

ರವಿವಾರ ತಡರಾತ್ರಿ ನಡೆದ ಫೈನಲ್‌ನಲ್ಲಿ ಆತಿಥೇಯ ಭಾರತ ಹಾಲಿ ಚಾಂಪಿಯನ್‌ ಜಪಾನ್‌ ತಂಡವನ್ನು 4-0 ಗೋಲುಗಳಿಂದ ಸೋಲಿಸಿ ಎರಡನೇ ಬಾರಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪ್ರಶಸ್ತಿ ಜಯಿಸಿತ್ತು.
“ನಮ್ಮದು ಆತಿಥೇಯ ತಂಡವಾಗಿತ್ತು. ಭಾರತದಲ್ಲಿ ಮೊದಲ ಸಲ ಆಯೋಜನೆಗೊಂಡ ಪಂದ್ಯಾವಳಿಯೂ ಇದಾಗಿತ್ತು. ಹೀಗಾಗಿ ಉತ್ತಮ ಪ್ರದರ್ಶನ ನೀಡುವುದು ಅನಿವಾರ್ಯವಾಗಿತ್ತು. ಏಷ್ಯಾಡ್‌ ಸೆಮಿಫೈನಲ್‌ನಲ್ಲಿ ಎಡವಿದ ಬಳಿಕ ನಮ್ಮ ಮುಂದೆ ಉತ್ತಮ ಅವಕಾಶವೊಂದು ತೆರೆಯಲ್ಪಟ್ಟಿತು. ಅಜೇಯವಾಗಿ ಸಾಗಿ ಚಾಂಪಿಯನ್‌ ಆಗುವ ಯೋಜನೆಯನ್ನು ರೂಪಿಸಿದೆವು. ಇದು ಯಶಸ್ವಿಯಾದುದಕ್ಕೆ ಬಹಳ ಹೆಮ್ಮೆಯಾಗುತ್ತಿದೆ’ ಎಂಬುದಾಗಿ ಸವಿತಾ ಹೇಳಿದರು.

ಫ್ಲಡ್‌ಲೈಟ್‌ ಸಮಸ್ಯೆ
ಫ್ಲಡ್‌ಲೈಟ್‌ ಸಮಸ್ಯೆಯಿಂದಾಗಿ ಈ ಪಂದ್ಯ 50 ನಿಮಿಷ ತಡವಾಗಿ ಆರಂಭಗೊಂಡಿತ್ತು. ಭಾರತ ಆರಂಭ ದಿಂದಲೇ ಹಾಲಿ ಚಾಂಪಿಯನ್‌ ಜಪಾನ್‌ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡುತ್ತ ಹೋಯಿತು. ಸಂಗೀತಾ ಕುಮಾರಿ (17ನೇ ನಿಮಿಷ), ನೇಹಾ (46ನೇ ನಿಮಿಷ), ಲಾರೆಮಿÕಯಾಮಿ (57ನೇ ನಿಮಿಷ) ಮತ್ತು ವಂದನಾ ಕಟಾರಿಯಾ (60ನೇ ನಿಮಿಷ) ಭಾರತದ ಗೋಲುವೀರರೆನಿಸಿದರು. ಕಳೆದ ಸಲದ ಚಾಂಪಿಯನ್‌ ಜಪಾನ್‌ಗೆ ಒಂದೂ ಗೋಲು ಸಿಡಿಸಲಾಗಲಿಲ್ಲ.

ಭಾರತ 2016ರ ಸಿಂಗಾಪುರ ಕೂಟದಲ್ಲಿ ಮೊದಲ ಸಲ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪ್ರಶಸ್ತಿ ಜಯಿಸಿತ್ತು. ಜಪಾನ್‌ 2013 ಮತ್ತು 2021ರಲ್ಲಿ ಚಾಂಪಿಯನ್‌ ಆಗಿತ್ತು.

ಟಾಪ್ ನ್ಯೂಸ್

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.