ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ಸಾವಿರಾರು ಭಕ್ತರ ಸಂಭ್ರಮ
Team Udayavani, Oct 17, 2022, 7:21 PM IST
ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಸೋಮವಾರ ಪವಿತ್ರ ತೀರ್ಥೋದ್ಭವವಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ಆಗಮಿಸಿ ಪವಿತ್ರ ತೀರ್ಥ ವನ್ನು ಪಡೆಯುತ್ತಿದ್ದಾರೆ.
ಕಾವೇರಿ ತುಲಾ ಸಂಕ್ರಮಣ ಶುಭ ದಿನದಂದು ರಾತ್ರಿ 7.21 ಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವವಾಗಿದ್ದು, ಪುಣ್ಯಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.
ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ದೇವಾಲಯ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರ ನೇತೃತ್ವದಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಶಾಸ್ತ್ರೋಕ್ತವಾಗಿ ಚಿನ್ನಾಭರಣ ತೆಗೆದುಕೊಂಡು ಹೋಗಿ ತಾಯಿ ಶ್ರೀ ಕಾವೇರಿ ಮಾತೆಗೆ ತೊಡಿಸಿ. ಕ್ಷೇತ್ರದ ತುಂಬಾ ಹೂವಿನ ಅಲಂಕಾರ ಮಾಡಲಾಗಿದೆ.
ಭಾಗಮಂಡಲದಲ್ಲಿ ಪಿಂಡ ಪ್ರದಾನ, ಕೇಶ ಮುಂಡನಕ್ಕೆ ಪ್ರತ್ಯೇಕ ಸ್ಥಳಗಳನ್ನು ನಿಗದಿಪಡಿಸಲಾಗಿತ್ತು. ಪುಣ್ಯ ಸ್ನಾನಕ್ಕೆ ಅನುಕೂಲ ಮಾಡುವ ದೃಷ್ಟಿಯಿಂದ ತ್ರಿವೇಣಿ ಸಂಗಮದಲ್ಲಿ ಮರಳು ಮಿಶ್ರಿತ ಹೂಳನ್ನು ತೆಗೆದು, ಸೇತುವೆ ಬಳಿ ಮರದ ಹಲಗೆಗಳನ್ನು ಬಳಸಿ ನೀರನ್ನು ತಡೆ ಹಿಡಿಯಲಾಗಿತ್ತು.
ನಡೆದುಕೊಂಡು ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲು ಭಾಗಮಂಡಲದಿಂದ ತಲಕಾವೇರಿವರೆಗಿನ ರಸ್ತೆ ಬದಿಯಲ್ಲಿ ಬೆಳೆದಿದ್ದ ಕುರುಚಲು ಕಾಡುಗಳನ್ನು ತೆರವು ಮಾಡಿ 8 ಕಿ.ಮೀ ರಸ್ತೆ ಉದ್ದಕ್ಕೂ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸವಾರರು ಸಂಚರಿಸಲು ಅನುಕೂಲ ಕಲ್ಪಿಸಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.