![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 1, 2021, 12:55 PM IST
ನವದೆಹಲಿ:ಪತ್ನಿಯೊಂದಿಗೆ ಜಗಳವಾಡಿಕೊಂಡ ನಂತರ ಪತಿ ತನ್ನ ಮೂವರು ಮಕ್ಕಳಿಗೆ ಐಸ್ ಕ್ರೀಮ್ ನಲ್ಲಿ ಇಲಿ ಪಾಷಾಣ ಬೆರೆಸಿಕೊಟ್ಟ ಪರಿಣಾಮ ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಇದನ್ನೂ ಓದಿ:ಪುನೀತ್ ಹೊಸ ಚಿತ್ರದ ಟೈಟಲ್ ಲಾಂಚ್..ವಿಭಿನ್ನ ಲುಕ್ ಗೆ ಅಪ್ಪು ಫ್ಯಾನ್ಸ್ ಫಿದಾ
ಜೂನ್ 25ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಐಸ್ ಕ್ರೀಮ್ ತಿಂದ ನಂತರ ಮಕ್ಕಳು ಅಸ್ವಸ್ಥಗೊಂಡಾಗ ಪತ್ನಿ ಆಸ್ಪತ್ರೆಗೆ ದಾಖಲಿಸಿದ್ದಳು. ಪರೀಕ್ಷೆ ನಡೆಸಿದಾಗ ವಿಷ ಪ್ರಾಶನ ಮಾಡಿಸಿರುವುದು ತಿಳಿದುಬಂದಿದ್ದು, ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಆರು ವರ್ಷದ ಬಾಲಕ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಘಟನೆ ಬಗ್ಗೆ ಸಯನ್ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಮುಂಬಯಿ ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ತಾನು ಮತ್ತು ಪತಿ ಅಲಿ ನೌಶಾದ್ ಅನ್ಸಾರಿ(27ವರ್ಷ) ದಿನಗೂಲಿ ಕಾರ್ಮಿಕರಾಗಿದ್ದು, ಹಣಕಾಸು ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದಿರುವುದಾಗಿ ಪತ್ನಿ ನಾಝಿಯಾ ಬೇಗಂ ತಿಳಿಸಿದ್ದಾಳೆ. ಜೂನ್ 25ರಂದು ಅನ್ಸಾರಿ ಮಕ್ಕಳಿಗೆ ಐಸ್ ಕ್ರೀಮ್ ಕೊಡಿಸುವುದಾಗಿ ಇಬ್ಬರು ಗಂಡು ಮಕ್ಕಳು, ಒಬ್ಬ ಹೆಣ್ಣು ಮಗಳನ್ನು ಕರೆದೊಯ್ದಿರುವುದಾಗಿ ನಾಝಿಯಾ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಪತಿ ಮಕ್ಕಳಿಗೆ ಐಸ್ ಕ್ರೀಮ್ ನಲ್ಲಿ ಇಲಿ ಪಾಷಾಣ ಬೆರೆಸಿ ಕೊಟ್ಟಿದ್ದ. ಮನೆಗೆ ಬಂದ ನಂತರ ಮಕ್ಕಳು ಹೊಟ್ಟೆನೋವಿನಿಂದ ವಾಂತಿ ಮಾಡಿಕೊಳ್ಳಲು ಆರಂಭಿಸಿದಾಗ ಆಸ್ಪತ್ರೆಗೆ ದಾಖಲಿಸಿರುವುದಾಗಿ ನಾಝಿಯಾ ತಿಳಿಸಿದ್ದು, ಮಗ ಸಾವನ್ನಪ್ಪಿದ್ದ ನಂತರ ತಾನು ವೈದ್ಯರಿಗೆ ನಿಜ ವಿಷಯ ತಿಳಿಸಿರುವುದಾಗಿ ಹೇಳಿದ್ದಾಳೆ.
ಪತಿ ಅನ್ಸಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಏತನ್ಮಧ್ಯೆ ಅನ್ಸಾರಿ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ ಪ್ರಾಣಾಪಾಯದಿಂದ ಪಾರಾಗಿರುವ ಇಬ್ಬರು ಮಕ್ಕಳ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.