![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 16, 2020, 4:05 PM IST
ಹುಬ್ಬಳ್ಳಿ: ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನೌಕರರೊಬ್ಬರು ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಅವರದೇ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೃತ್ತ ನೌಕರ ಓಂಕಾರಗೌಡ ಪಾಟೀಲ ಅವರು ನವನಗರ ಠಾಣೆ ಇನ್ಸ್ಪೆಕ್ಟರ್ ಪ್ರಭು ಸೂರಿನ ವಿರುದ್ಧ ನವನಗರ ಠಾಣೆಯಲ್ಲೇ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಓಂಕಾರಗೌಡರ ಸೊಸೆ ಶಿವಲೀಲಾ ಪಾಟೀಲ ಹಾಗೂ ಸಂತೋಷಕುಮಾರ ಗುಡ್ಡಾಪುರಮಠ ಎನ್ನುವವರೊಂದಿಗೆ ಸೇರಿ ನವನಗರ ಠಾಣೆ ಇನ್ಸ್ಪೆಕ್ಟರ್ ಪ್ರಭು ಸೂರಿನ ಅವರು ತಮಗೆ ಜೀವ ಬೆದರಿಕೆ ಹಾಕಿ 1 ಕೋಟಿ ರೂ. ಮೌಲ್ಯದ 2ಕೆಜಿ ಚಿನ್ನಾಭರಣ ಕಿತ್ತುಕೊಂಡಿದ್ದಾರೆಂದು ಆರೋಪಿಸಿ ಓಂಕಾರಗೌಡ ಅವರು ನವನಗರ ಠಾಣೆ ಇನ್ಸ್ಪೆಕ್ಟರ್ ಸೇರಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಶಿವಲೀಲಾ ಮತ್ತು ಸಂತೋಷಕುಮಾರ ಚಿನ್ನಾಭರಣ ಕಿತ್ತುಕೊಂಡ ಬಗ್ಗೆ ಓಂಕಾರಗೌಡ ಅವರು ಎಪಿಎಂಸಿ-ನವನಗರ ಠಾಣೆಗೆ ದೂರು ಸಲ್ಲಿಸಲು ಹಲವಾರು ಬಾರಿ ಅಲೆದಾಡಿದರೂ ದೂರು ದಾಖಲಿಸಿಕೊಂಡಿರಲಿಲ್ಲ.
ಇದನ್ನೂ ಓದಿ:ಆನೆಗೊಂದಿ: ಹಾಡಹಗಲೇ ನಡೆದ ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಸಾವು
ಹೀಗಾಗಿ ಓಂಕಾರಗೌಡರು 3ನೇಹಿರಿಯ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಇದನ್ನು ಆಧರಿಸಿ ನ್ಯಾಯಾಲಯವು ಎಪಿಎಂಸಿ – ನವನಗರ ಠಾಣೆಗೆ ದೂರು ದಾಖಲಿಸಿಕೊಳ್ಳುವಂತೆ ನಿರ್ದೇಶಿಸಿದ್ದರಿಂದ ಠಾಣೆಯ ಇನ್ಸ್ಪೆಕ್ಟರ್ ಪ್ರಭುಸೂರಿನ ಸೇರಿ ಮೂವರ ವಿರುದ್ಧ ನ. 13ರಂದು ಓಂಕಾರಗೌಡ ದೂರು ದಾಖಲಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆದಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.