![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 17, 2021, 1:30 PM IST
ಹುಳಿಯಾರು: ಹೋಬಳಿಯ ಸೀಗೆಬಾಗಿ ಗ್ರಾಮದಲ್ಲಿ ಕಾಡಿನಿಂದ ಹಿಡಿದು ತಂದ ಮೊಲವನ್ನು ಮತ್ತೆ ಕಾಡಿಗೆ ಬಿಡುವ ಮೂಲಕ ಸಂಕ್ರಾಂತಿ ಆಚರಣೆ ಪೂರ್ಣಗೊಳಿಸಿದರು.
ಸಂಕ್ರಾಂತಿ ಹಬ್ಬವನ್ನು ಸೀಗೆಬಾಗಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವಾಗಿ ಆಚರಿಸುತ್ತಾರೆ. ಹಬ್ಬಕ್ಕೆ ಮೂರು ದಿನದ ಮೊದಲೇ ಗ್ರಾಮದ ಕೆಲವರು ಕಾಡಿಗೆ ಹೋಗಿ ಮೊಲವನ್ನು ಜೀವಂತವಾಗಿ ಹಿಡಿದು ತಂದು ಮೊಲದ ಕಿವಿವೆ ಓಲೆ ಹಾಕುತ್ತಾರೆ. ಸಂಕ್ರಾಂತಿ ಹಬ್ಬದಂದು ವಿಶೇಷವಾಗಿ ಪೂಜಿಸಿ ಜೋಪಾನವಾಗಿ ಹಿಡಿದಿಟ್ಟಿರುತ್ತಾರೆ. ಹಬ್ಬದ ನಂತರದ ದಿನಗಳಲ್ಲಿ ವರದರಾಜಸ್ವಾಮಿ ದೇಗುಲದ ಆವರಣದಿಂದ ವರದರಾಜಸ್ವಾಮಿ ಹಾಗೂ ವಿವಿಧ ದೇವರು ಗಳೊಂದಿಗೆ ಮಂಗಳವಾಧ್ಯ ಸಹಿತ ಉತ್ಸವ ಮಾಡುತ್ತಾರೆ.
ಇದನ್ನೂ ಓದಿ:ಎಸ್ಟಿ ಹೋರಾಟಕ್ಕೆ ಸಿದ್ದರಾಮಯ್ಯ ಬರುವುದಾದರೆ ಬರಲಿ, ಗೊಂದಲ ಸೃಷ್ಟಿ ಬೇಡ: ಈಶ್ವರಪ್ಪ
ನಂತರ ಶಾಲಾ ಆವರಣದಲ್ಲಿ ನೂರಾರು ಮಂದಿಯ ಸಮ್ಮುಖದಲ್ಲಿ ಮೊಲಕ್ಕೆ ವಿಶೇಷ ಪೂಜೆ ಸಲ್ಲಿಸಿ ಕಿವಿಗೆ ಓಲೆ ಹಾಕಿದ್ದ
ಮೊಲವನ್ನು ಪುನಃ ಕಾಡಿಗೆ ಬಿಡುತ್ತಾರೆ. ಅದು ಯಾವ ದಿಕ್ಕಿಗೆ ಓಡುತ್ತದೆಯೋ ಆ ದಿಕ್ಕಿನಲ್ಲಿ ಉತ್ತಮ ಬೆಳೆಯಾಗುತ್ತದೆ ಎಂಬ ಪ್ರತೀತಿ ಗ್ರಾಮಸ್ಥರಲ್ಲಿದೆ. ಈ ಅಪರೂಪದ ಆಚರಣೆಗೆ ಸೀಗೆಬಾಗಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಶ್ರೀ ವರದರಾಜಸ್ವಾಮಿಯ
ಭಕ್ತರು ಸೇರುತ್ತಾರೆ. ಒಟ್ಟಾರೆ ಇದೊಂದು ಪುಟ್ಟ ಜಾತ್ರೆಯ ರೀತಿ ನಡೆಯುತ್ತಿದ್ದು ಅನಾದಿ ಕಾಲದಿಂದ ನಡೆಸಿಕೊಂಡು ಬರುತ್ತಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.