![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
Hunasuru: ಸರಣಿ ಅಪಘಾತ, 6 ಕಾರುಗಳು ಜಖಂ
ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ದುರ್ಘಟನೆ
Team Udayavani, Jun 23, 2024, 6:36 PM IST
![Accident](https://www.udayavani.com/wp-content/uploads/2024/06/Accident-5-620x310.jpg)
ಹುಣಸೂರು: ತಾಲೂಕಿನ ಕೊಳಘಟ್ಟ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಆರು ಕಾರುಗಳು ಜಖಂ ಆದ ಘಟನೆ ನಡೆದಿದೆ. ಈ ವೇಳೆ ಕೆಲವರಿಗೆ ಸಣ್ಣ ಪುಟ್ಟಗಾಯಗಳಾಗಿವೆ.
ಕೊಳಘಟ್ಟ ಗ್ರಾಮದ ಬಳಿಯ ಹಂಪ್ಸ್ ಬಳಿ ಒಂದರ ಹಿಂದೆ ಒಂದರಂತೆ ನಿರಂತರ ಬರುತ್ತಿದ್ದ ಆರು ಕಾರುಗಳಿಂದ ಢಿಕ್ಕಿ ಸಂಭವಿಸಿದ್ದು, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರು ಚಾಲಕನ ಎಡವಟ್ಟಿನಿಂದ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೆ ಒಂದು ಢಿಕ್ಕಿ ಹೊಡೆದು ಜಖಂ ಗೊಂಡಿದೆ.
ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಕೊಡಗು ಮತ್ತಿತರ ಕಡೆಗಳಿಗೆ ತೆರಳಿದ್ದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿ ಒಂದರ ಹಿಂದೆ ಒಂದರಂತೆ ತೆರಳುತ್ತಿದ್ದ ವಾಹನಗಳಿಂದಾಗಿ ಮುಂದಿನ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ.
ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು. ಘಟನೆಯಿಂದ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಟಾಪ್ ನ್ಯೂಸ್
![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.