ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್‌ :ಪತ್ನಿಯಿಂದ ಠಾಣೆಗೆ ದೂರು


Team Udayavani, Jan 16, 2021, 9:05 PM IST

ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್‌ :ಪತ್ನಿಯಿಂದ ಠಾಣೆಗೆ ದೂರು

ಬೆಂಗಳೂರು: ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಪತಿಯ ವಿರುದ್ಧ ಪತ್ನಿಯೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಫ್ರೆಜರ್‌ಟೌನ್‌ ನಿವಾಸಿ 39 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಪುಲಕೇಶಿನಗರ ಪೊಲೀಸರು ಆರೋಪಿ ಪತಿ ರಾಜು ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸೆರೆ ಹಿಡಿದು ಬೇರೆಯವರಿಗೆ ಕಳಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:
ಸಂತ್ರಸ್ತೆ 2019ರಲ್ಲಿ ರಾಜು ಎಂಬಾತನನ್ನು ಮದುವೆಯಾಗಿದ್ದು, ಅತ್ತಿಗುಪ್ಪೆಯ ಇಂದಿರಾ ಕಾಲೋನಿಯಲ್ಲಿ ವಾಸವಾಗಿದ್ದರು. ಆರಂಭದಲ್ಲಿ ದಂಪತಿ ಅನ್ಯೂನ್ಯವಾಗಿದ್ದರು. ಅನಂತರ ಪತಿ ರಾಜು ನಿತ್ಯ ಕುಡಿದು ಬಂದು ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸುತ್ತಿದ್ದ. ಪತಿಯ ಕಿರುಕುಳವನ್ನು ಸಿಹಿಸಿಕೊಂಡು ಮಹಿಳೆ ಜೀವನ ಮಾಡುತ್ತಿದ್ದರು. ಆದರೆ, ಪರಪುರುಷನ ಜತೆ ಅಕ್ರಮ ಸಂಬಂಧ ಇಟ್ಟು ಕೊಂಡಿರುವುದಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಕೆಯ ಸಹೋದ್ಯೋಗಿಗಳಿಗೆ ಕರೆ ಮಾಡಿ “ನನ್ನ ಪತ್ನಿಗೆ ನಿಮಗೂ ಏನು ಸಂಬಂಧ’ ಎಂದು ಕೇಳುತ್ತಿದ್ದ. ಅಲ್ಲದೆ, ತನ್ನ ಮೊಬೈಲ್‌ನಲ್ಲಿ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋಗಳನ್ನು ಸೆರೆ ಹಿಡಿದು ಇತರರಿಗೆ ಕಳುಹಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಅಮಿತ್ ಶಾ ಭೇಟಿಗೆ ಸಮಯ ಕೇಳಿದ 15ಕ್ಕೂ ಹೆಚ್ಚು ಅತೃಪ್ತ ಶಾಸಕರು

ಕಾರು ಉಡುಗೊರೆ
ಮದುವೆ ಸಂದರ್ಭದಲ್ಲಿ ಸಂತ್ರಸ್ತೆ ಮನೆಯವರು ಆರೋಪಿಗೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ, ಪತ್ನಿಗೆ ಗೊತ್ತಿಲ್ಲದಂತೆ ಆರೋಪಿ ಕಾರು ಮಾರಾಟ ಮಾಡಿದ್ದ. ಅದನ್ನು ಕೇಳಿದ್ದಕ್ಕೆ ಮಹಿಳೆ ಕೊಲೆಗೆ ಯತ್ನಿಸಿದ್ದ. ದುಪ್ಪಟ್ಟದಿಂದ ಪತ್ನಿಯ ಕತ್ತನ್ನು ಬಿಗಿದು ಹತ್ಯೆಗೆ ಯತ್ನಿಸಿದ್ದ. ಆಕೆಗೆ ಉಸಿರಾಡಲು ಸಾಧ್ಯವಾಗದೇ ಕೈ, ಕಾಲು ಒದರುತ್ತಿದ್ದಾಗ ಅಡುಗೆ ಮನೆಯಲ್ಲಿದ್ದ ವಸ್ತುಗಳು ಕಾಲಿಗೆ ಸಿಕ್ಕಿ ಕೆಳಗೆ ಬಿದ್ದು ಜೋರಾಗಿ ಶಬ್ದ ಉಂಟಾಗಿತ್ತು. ಶಬ್ದ ಕೇಳಿ ಸ್ಥಳೀಯರು ಮನೆಗೆ ಬಂದಿದ್ದರು.ಆಗ ಆತಂಕಗೊಂಡ ಪತಿ, “ಇವತ್ತು ನೀನು ಬದುಕಿದೆ. ಮುಂದೆ ನಿನ್ನನ್ನು ಬಿಡುವುದಿಲ್ಲ’ ಎಂದು ಪ್ರಾಣ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಮೂರು ಮದುವೆ
ಅನಂತರ ಆರೋಪಿಯ ಹಿನ್ನೆಲೆ ವಿಚಾರಿಸಿದಾಗ ಆರೋಪಿ ಈಗಾಗಲೇ ಮೂರು ಮದುವೆಯಾಗಿದ್ದು, ಮೂವರಿಗೆ ವಂಚಿಸಿದ್ದು, ತನ್ನನ್ನು ನಾಲ್ಕನೇ ಮದುವೆಯಾಗಿದ್ದಾನೆ ಎಂಬುದು ಗೊತ್ತಾಗಿದೆ. ಹೀಗಾಗಿ ಆರೋಪಿ ಪತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.