Modi ಅವರನ್ನು ಎದುರಿಸಬೇಕಾದರೆ ರಾಹುಲ್ ವಿಪಕ್ಷ ನಾಯಕನಾಗಬೇಕೆಂದಿದ್ದೆ: ಸಿದ್ದರಾಮಯ್ಯ
ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ... ಸಿಎಂ ಸ್ಪಷ್ಟನೆ ನೀಡಿದ್ದು ಹೀಗೆ
Team Udayavani, Jun 26, 2024, 3:19 PM IST
ಬೆಂಗಳೂರು: ‘ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು’ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಸಿಎಂ ”ರಾಹುಲ್ ಗಾಂಧಿಯವರು ಲೋಕಸಭೆಯ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಅವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂಬುದು ನನ್ನ ಹಾಗೂ ಕಾರ್ಯಕಾರಿಣಿ ಸಮಿತಿಯ ಒತ್ತಾಯವಾಗಿತ್ತು. ಆ ಹುದ್ದೆ ಅಲಂಕರಿಸಿರುವುದಕ್ಕೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು’ ಎಂದರು.
ದರ ಏರಿಸುವ ಅಗತ್ಯವೇನಿದೆ?
”ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್ ಗಿಂತ ಹೆಚ್ಚಾಗಿದೆ. ರೈತರು ಡೈರಿಗೆ ತರುವ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಒಂದು ಲೀಟರ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ 2.10 ರೂ. ವೆಚ್ಚವಾಗುತ್ತೆ. ಹಾಲಿನ ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗುತ್ತಿದೆ, ಅದನ್ನು ಗ್ರಾಹಕರಿಗೆ ಹೆಚ್ಚು ನೀಡಿ ಅದಕ್ಕೆ ತಕ್ಕ ದರವನ್ನಷ್ಟೇ ನಿಗದಿ ಮಾಡಲಾಗಿದೆ.ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಂಡು ಗ್ರಾಹಕರಿಗೆ ತಲುಪಿಸಬೇಕೇ ಹೊರತು ಚೆಲ್ಲಲಾಗುವುದಿಲ್ಲ. ಹೋಟೆಲ್ಗಳಲ್ಲಿ ಕಾಫಿ ಟೀ ದರಗಳನ್ನು ಹೇಗೆ ಹೆಚ್ಚಿಸುತ್ತಾರೆ? ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು. ಹಾಲಿನ ಪ್ರಮಾಣವೂ ಹೆಚ್ಚಿಸಿ, ಅದಕ್ಕೆ ಅನುಗುಣವಾಗಿ ದರ ನಿಗದಿ ಮಾಡಲಾಗಿದೆ. ಹೆಚ್ಚುವರಿಯಾಗಿ ನೀಡುವ 2 ರೂಪಾಯಿಗೆ ಹೆಚ್ಚು ಹಾಲು ಸಿಗುತ್ತಿದೆ. ಹೀಗಿರುವಾಗ ಕಾಫಿ, ಟೀ ದರ ಏರಿಸುವ ಅಗತ್ಯವೇನಿದೆ?’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.