“ಗ್ಯಾರಂಟಿ” ನೀಡದಿದ್ರೆ ಅಧಿಕಾರ ಬಿಟ್ಟು ತೊಲಗಿ: ಬಿ.ಎಸ್‌. ಯಡಿಯೂರಪ್ಪ

ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಕೇಂದ್ರವನ್ನು ಕೇಳಿ ಭರವಸೆ ಕೊಟ್ಟಿದ್ರಾ: ಬಿಎಸ್‌ವೈ ಪ್ರಶ್ನೆ

Team Udayavani, Jun 23, 2023, 7:00 AM IST

bsy

ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಲು ಕಾಂಗ್ರೆಸ್‌ ಸರಕಾರಕ್ಕೆ ಆಗದಿದ್ದರೆ ಅಧಿ ಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುಡುಗಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರುಳು ಮಾಡಲು ಕಾಂಗ್ರೆಸ್‌ ದಿನಕ್ಕೊಂದು ನಾಟಕವಾಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಕೇಳಿ ಭರವಸೆ ಕೊಟ್ಟಿದ್ದರಾ? ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಅವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದ್ದು, ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಲೇಬೇಕು ಎಂದರು.

ಶೀಘ್ರ ವಿಪಕ್ಷ ನಾಯಕನ ಆಯ್ಕೆ
ಸದ್ಯದಲ್ಲೇ ವಿಪಕ್ಷ ನಾಯಕರ ಆಯ್ಕೆ ಆಗಲಿದೆ. ಆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಬಿಜೆಪಿ ನಾಯಕರ ಮಧ್ಯೆ ಅಸಮಾಧಾನ ಸ್ಫೋಟ
ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಬಳಿಕ ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಕುದಿಯುತ್ತಿರುವ ಆಂತರಿಕ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ. ಗುರುವಾರ ಜಿಲ್ಲಾ ಕೇಂದ್ರದಲ್ಲಿ ನಡೆಯಬೇಕಿದ್ದ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಮಾವೇಶ ದಿಢೀರನೆ ಬಾಗೇಪಲ್ಲಿ ಪಟ್ಟಣಕ್ಕೆ ಸ್ಥಳಾಂತರಗೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಾರದ ಮೊದಲೇ ನಗರದ ಜಿಲ್ಲಾ ಕೇಂದ್ರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮಾಜಿ ಸಚಿವರಾದ ಆರ್‌.ಅಶೋಕ್‌ ನೇತೃತೃತ್ವದಲ್ಲಿ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಆದರೆ ಮಾಜಿ ಸಚಿವ ಡಾ| ಕೆ.ಸುಧಾಕರ್‌ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂಬ ಸುಳಿವು ಅರಿತ ಬಿಜೆಪಿ ನಾಯಕರು ಸಮಾವೇಶವನ್ನು ಬಾಗೇಪಲ್ಲಿಯಲ್ಲಿ ಆಯೋಜಿಸಿದ್ದಾರೆ. ಡಾ| ಕೆ.ಸುಧಾಕರ್‌ ಚುನಾವಣೆಯಲ್ಲಿ ಸೋತ ಬಳಿಕ ವಿದೇಶಕ್ಕೆ ಹೋಗಿದ್ದು, ನಾಲ್ಕೈದು ದಿನಗಳ ಹಿಂದೆ ಮರಳಿದ್ದಾರೆ ಎನ್ನಲಾಗಿದೆ. ಆದರೂ ಸಮಾವೇಶಕ್ಕೆ ಆಹ್ವಾನಿಸಲು ಪಕ್ಷದ ನಾಯಕರು ಎಷ್ಟೇ ಸಂಪರ್ಕ ಮಾಡಿದರೂ ಸುಧಾಕರ್‌ ಸಿಕ್ಕಿಲ್ಲ.

ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ: ನಳಿನ್‌
ಕಲಬುರಗಿ: ಅಧಿವೇಶನದೊಳಗೆ ರಾಜ್ಯ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲು ಹೇಳಿದರು. ಸುದ್ದಿ
ಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕನ ಅಗತ್ಯ ಇರುವುದು ಅಧಿವೇಶನದಲ್ಲಿ. ಈಗಾಗಲೇ ಪಕ್ಷದ ವೇದಿಕೆಯಲ್ಲಿ ಈ ಕುರಿತು ಚರ್ಚೆಯಾಗಿದೆ ಎಂದರು.
ಅಕ್ಕಿ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿಲ್ಲ.

ದ್ವೇಷದ ರಾಜಕಾರಣ ಆರಂಭ ಮಾಡಿದ್ದೇ ಸಿಎಂ ಸಿದ್ದರಾಮಯ್ಯ. ಪ್ರಮುಖವಾಗಿ ಗೋಹತ್ಯೆ ಕಾಯ್ದೆ ವಾಪಸ್‌ ಪಡೆಯುತ್ತಿದ್ದಾರೆ. ಪಠ್ಯ ಪುಸ್ತಕದಲ್ಲಿ ಬದಲಾವಣೆ ತಂದಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿ ಸಲು ಆರಂಭಿಸಿದ್ದಾರೆ. ಹೀಗೆ ಎಲ್ಲ ರೀತಿಯ ದ್ವೇಷದ ರಾಜಕಾರಣ ಆರಂಭಿಸಿದ್ದೇ ಸಿದ್ದರಾಮಯ್ಯ. ಕೇಂದ್ರ ಸರಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದನ್ನು ಬಿಟ್ಟು ರಾಜ್ಯ ಸರಕಾರ 10 ಕೆಜಿ ಅಕ್ಕಿ ಕೊಡಲಿ. ಅವರೇ ಮೊದಲು ಹೇಳಿದಂತೆ ಅಕ್ಕಿ ಕೊಡಲಿ. ನುಡಿದಂತೆ ನಡೆದು ತೋರಿಸಲಿ. ಸಾರಿಗೆ ಸಂಸ್ಥೆ ಸಿಬಂದಿಗೆ ಬರುವ ತಿಂಗಳಿನಿಂದ ಸರಿಯಾಗಿ ವೇತನ ಕೊಡಲಿ. ಹೆಚ್ಚಿಸಿರುವ ವಿದ್ಯುತ್‌ ದರವನ್ನು ಕಡಿಮೆ ಮಾಡುವ ಮೂಲಕ ಜನರ ನೋವಿಗೆ ಸ್ಪಂದಿಸಲಿ ಎಂದರು.

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.