ಅಕ್ರಮ ವ್ಯವಹಾರ: ತನಿಖೆ ನಿಷ್ಪಕ್ಷವಾಗಿರಲಿ


Team Udayavani, Apr 13, 2023, 5:55 AM IST

lok adalat

ರಾಜ್ಯದ ಕೆಲವೊಂದು ಸಹಕಾರ ಬ್ಯಾಂಕ್‌ಗಳು ಅಕ್ರಮ ಹಣಕಾಸು ವ್ಯವಹಾರದಲ್ಲಿ ಶಾಮೀಲಾಗಿರುವುದು ಆದಾಯ ತೆರಿಗೆ ಇಲಾಖೆ ನಡೆಸಿದ ತನಿಖೆಯ ವೇಳೆ ಬಯಲಾಗಿದ್ದು, ಇದೊಂದು ಆಘಾತಕಾರಿ ವಿಷಯವಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾ. 31ರಂದು ರಾಜ್ಯದ 16 ಸ್ಥಳಗಳ ಮೇಲೆ ನಡೆಸಿದ ದಾಳಿಯ ವೇಳೆ ವಶಪಡಿಸಿಕೊಳ್ಳಲಾದ ದಾಖಲೆಪತ್ರಗಳು ಈ ಸಹಕಾರಿ ಬ್ಯಾಂಕ್‌ಗಳಲ್ಲಿ 1,000 ಕೋ. ರೂ. ಮೌಲ್ಯಗಳಷ್ಟು ಅಕ್ರಮ ಹಣಕಾಸು ವ್ಯವಹಾರ ನಡೆದಿರುವುದನ್ನು ದೃಢಪಡಿಸಿವೆ.

ಈ ದಾಳಿಯ ವೇಳೆ ಬ್ಯಾಂಕ್‌ಗಳು ವಿವಿಧ ಅಡ್ಡಮಾರ್ಗಗಳ ಮೂಲಕ ಈ ಅಕ್ರಮ ವ್ಯವಹಾರ ಎಸಗಿರುವುದು ಸಾಬೀತಾಗಿದ್ದು ಇದರ ಹಿಂದೆ ಬಲುದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ರಾಜ್ಯದ ಕೆಲವೊಂದು ಸಹಕಾರಿ ಬ್ಯಾಂಕ್‌ಗಳ ವ್ಯವಹಾರದ ಮೇಲೆ ಹದ್ದುಗಣ್ಣಿರಿಸಿತ್ತು. ಈ ಬ್ಯಾಂಕ್‌ಗಳಲ್ಲಿನ ವ್ಯವಹಾರಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಭಾರೀ ಪ್ರಮಾಣದ ದಾಖಲೆಪತ್ರಗಳನ್ನು ಪರಿಶೀಲಿಸಿದಾಗ ಈ ಸಹಕಾರಿ ಬ್ಯಾಂಕ್‌ಗಳ ಅಕ್ರಮಗಳ ಸರಣಿ ಬಯಲಾಗಿದೆ. ಅಸ್ತಿತ್ವದಲ್ಲಿ ಇಲ್ಲದ ಸಂಸ್ಥೆಗಳ ಹೆಸರಲ್ಲಿ ಚೆಕ್‌ಗಳ ಡಿಸ್ಕೌಂಟ್‌, ಬ್ಯಾಂಕ್‌ಗಳ ಆಡಳಿತ ಮಂಡಳಿಯ ಸದಸ್ಯರೇ ಹಣವನ್ನು ಸ್ವಂತ ಉದ್ದೇಶಗಳಿಗೆ ಬಳಸಿಕೊಂಡಿರುವುದು ಮಾತ್ರವಲ್ಲದೆ ಈ ಅಕ್ರಮಗಳಲ್ಲಿ ರಿಯಲ್‌ಎಸ್ಟೇಟ್‌ ಕಂಪೆನಿಗಳು, ಗುತ್ತಿಗೆದಾರರು ಶಾಮೀಲಾಗಿರುವುದೂ ಪತ್ತೆಯಾಗಿದೆ ಎಂದು ಸಿಬಿಡಿಟಿ ಹೇಳಿಕೆಯಲ್ಲಿ ತಿಳಿಸಿದೆ.

ಕೆವೈಸಿ ಸಹಿತ ಆರ್‌ಬಿಐ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ನಗದು ಠೇವಣಿ ಇರಿಸಿಕೊಂಡು ನಿಶ್ಚಿತ ಠೇವಣಿ ಖಾತೆಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದಲ್ಲದೆ, ಇದನ್ನು ಆಧಾರವಾಗಿಸಿ ಸಾಲ ಮಂಜೂರು ಮಾಡಲಾಗಿದೆ. ತೆರಿಗೆ ವಂಚನೆಗಾಗಿ ಉದ್ಯಮಿಗಳು ಬೋಗಸ್‌ ವೆಚ್ಚ ತೋರಿಸಲು ಈ ಸಹಕಾರಿ ಬ್ಯಾಂಕ್‌ಗಳನ್ನು ಬಳಸಿಕೊಂಡಿರುವುದೂ ಸಾಬೀತಾಗಿದೆ. ಈ ಎಲ್ಲ ಅಕ್ರಮಗಳು ಅತ್ಯಂತ ವ್ಯವಸ್ಥಿತವಾಗಿ ನಡೆದಿದ್ದು, ಸಹಕಾರಿ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಇಂತಹ ದೊಡ್ಡ ಮಟ್ಟದ ಹಣಕಾಸು ಅಕ್ರಮ ನಡೆದಿರುವುದು ಬಹುದೊಡ್ಡ ಕಳಂಕವೆ. ವಿಶೇಷ ಎಂದರೆ ಕಾಲ ಕಾಲಕ್ಕೆ ಲೆಕ್ಕ ಪರಿಶೋಧನೆ ನಡೆಸುವ ಸಹಕಾರಿ ಇಲಾಖೆಗಾಗಲಿ, ಕೇಂದ್ರೀಯ ತನಿಖಾ ಸಂಸ್ಥೆಗಳಿಗಾಗಲಿ ಈ ಬಗ್ಗೆ ಯಾವುದೇ ಸುಳಿವು ಲಭಿಸದಿರುವುದು ತೀರಾ ಅಚ್ಚರಿಯೇ ಸರಿ. ಈ ಸಹಕಾರಿ ಬ್ಯಾಂಕ್‌ಗಳ ಆಡಳಿತ ಮಂಡಳಿಯಲ್ಲಿರುವವರೇ ಅಕ್ರಮ‌ದಲ್ಲಿ ನೇರವಾಗಿ ಶಾಮೀಲಾಗಿರುವುದಲ್ಲದೆ ಹಣವನ್ನು ಉದ್ಯಮ, ವ್ಯವಹಾರದಲ್ಲಿ ತೊಡಗಿಸಿಕೊಳ್ಳುವ ದಾಷ್ಟತನ ಪ್ರದರ್ಶಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದೀಚೆಗೆ ಸಹಕಾರ ಕ್ಷೇತ್ರದ ವ್ಯವಹಾರದ ಪಾರದರ್ಶಕತೆಯ ಬಗೆಗೆ ಅಪಸ್ವರಗಳು ಕೇಳಿಬರತೊಡಗಿವೆ. ಇದರ ನಡುವೆಯೇ ಕೆಲವೇ ಕೆಲವರು ನಡೆಸಿದ ಇಂತಹ ಅಕ್ರಮ ವ್ಯವಹಾರಗಳು ಸಹಕಾರಿ ಕ್ಷೇತ್ರದ ವಿಶ್ವಾಸಾರ್ಹತೆಯ ಕುರಿತು ಸಂಶಯ ಮೂಡುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಸಹಕಾರ ಇಲಾಖೆ ಕೂಡ ಕೇಂದ್ರದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

ARMY (2)

Jammu and Kashmir; ಉಗ್ರರ ದಮನದ ಜತೆಯಲ್ಲಿ ನಾಗರಿಕರ ರಕ್ಷಣೆಯೂ ಮುಖ್ಯ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.