ಡಿಸಿ ಕಚೇರಿ ಮುಂದೆ ಅನುಚಿತ ವರ್ತನೆ: ಮಹಿಳೆ ಬಂಧನ


Team Udayavani, May 5, 2022, 2:27 PM IST

10women

ಕಲಬುರಗಿ: ಪ್ರಕರಣವೊಂದರ ವಿಚಾರಣೆ ನಡೆಸದಂತೆ ಕಲಬುರಗಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿಗಳಿಗೆ ನೋಟಿಸ್‌ ನೀಡಿದ್ದಲ್ಲದೆ, ಕಚೇರಿ ಮುಂದೆ ಅನುಚಿತವಾಗಿ ವರ್ತಿಸಿ, ರಂಪಾಟ ಮಾಡಿದ ಮಹಿಳೆಯೋರ್ವಳನ್ನು ಬುಧವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.

ಸಪ್ನಾ ಪೊಲೀಸರು ಬಂಧಿಸಿರುವ ಮಹಿಳೆ.

ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಅನಿಯಮ-2007ರ ಕಲಂ 16ರ ಅಡಿ ಸಲ್ಲಿಸಲಾಗಿರುವ ಮೇಲ್ಮನವಿಗೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಚಾರಣೆಗೆ ಮಹಿಳೆ ಹಾಜರಾಗಿದ್ದರು.

ಈ ಸಂದರ್ಭದಲ್ಲಿ 30 ದಿನಗಳ ಕಾಲ ಮೇಲ್ಮನವಿಯ ವಿಚಾರಣೆ ಮಾಡಬಾರದು ಹಾಗೂ ಸದರಿ ಪ್ರಕರಣವನ್ನು ಬೇರೊಂದು ಪ್ರಕಾರಕ್ಕೆ ವರ್ಗಾಯಿಸಬೇಕೆಂದು ಜಿಲ್ಲಾ ದಂಡಾಕಾರಿಗಳಿಗೆ ನೋಟೀಸ್‌ ನೀಡಿದ್ದರು. ಜೊತೆಗೆ ನನ್ನ ವಿರುದ್ಧ ತೀರ್ಪು ನೀಡುತ್ತೀರಿ ಎಂದೆಲ್ಲಾ ಮಹಿಳೆ ಕಚೇರಿ ಮುಂದೆ ರಂಪಾಟ ಮಾಡಿದ್ದರಿಂದ ಪ್ರಕರಣ ದಾಖಲಿಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದ ಹಿನ್ನೆಲೆ: ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರು ತನ್ನ ಮಗ ರಾಜಶೇಖರ ತಂದೆ ಶಿವಶರಣಪ್ಪ ಮಂಗಲಗಿ ಹಾಗೂ ಈತನ ಪತ್ನಿ ಸಪ್ನಾ ಅವರು ತನ್ನನ್ನು ಹಾಗೂ ತನ್ನ ಪತ್ನಿಯನ್ನು ಪೋಷಣೆ ಮಾಡುತ್ತಿಲ್ಲ. ಆಳಂದ ರಸ್ತೆಯ ವಿಜಯ ನಗರ ಕಾಲೋನಿಯಲ್ಲಿ ಇರುವ ಸ್ವ-ಅರ್ಜಿತ ಮನೆಯನ್ನು ಸೊಸೆ ಮತ್ತು ಮಗ ಕಬ್ಜಾ ಮಾಡಿಕೊಂಡಿದ್ದು, ತನಗೆ ವಹಿಸಿಕೊಡುವಂತೆ ಹಿರಿಯ ನಾಗರಿಕರ ನಿರ್ವಹಣಾ ಮಂಡಳಿಯ ಅಧ್ಯಕ್ಷರೂ ಆಗಿರುವ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಈ ನಡುವೆ ದಿನಾಂಕ: 28-12-2013 ರಂದು ಕಲಬುರಗಿ ಕುಟುಂಬ ನ್ಯಾಯಾಲಯದಲ್ಲಿ ಸಪ್ನಾ ಮತ್ತು ಗಂಡ ರಾಜಶೇಖರ ಮಂಗಲಗಿ ಅವರು ವಿಚ್ಛೇದನ ಪಡೆದಿರುತ್ತಾರೆ. ಕಲಬುರಗಿ ನ್ಯಾಯಾಲಯ ವಿಚ್ಛೇದನ ನೀಡಿರುವ ಹಿನ್ನೆಲೆಯಲ್ಲಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅನಿಯಮ 2007ರ ಕಲಂ 9ರ ಅಡಿ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು, ಅನಧಿಕೃತವಾಗಿ ಕಬ್ಜಾ ಮಾಡಿರುವ ಮನೆಯನ್ನು ಮನವಿದಾರರರಾದ ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರಿಗೆ ಹಸ್ತಾಂತರಿಸುವಂತೆ ದಿನಾಂಕ: 20-01-2020 ರಂದು ಆದೇಶ ನೀಡಿರುತ್ತಾರೆ.

ಈ ನಡುವೆ ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರು ತನ್ನ ಸ್ವ-ಅರ್ಜಿತ ಮನೆಯನ್ನು ತಮ್ಮ ಧರ್ಮಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್‌ ಪತ್ರ ಬರೆದು 2020ರಲ್ಲಿ ನಿಧನ ಹೊಂದಿರುತ್ತಾರೆ. ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ಗಂಡ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ ಅನಧಿಕೃತವಾಗಿ ತಾನೇ ವಾಸವಾಗಿದ್ದಲ್ಲದೆ, ಕಲಬುರಗಿ ಉಪ ವಿಭಾಗೀಯ ದಂಡಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರ ಆದೇಶದ ವಿರುದ್ಧ ಜಿಲ್ಲಾ ದಂಡಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.