ಪ್ರಜಾಪ್ರಭುತ್ವ ಬಲಪಡಿಸುವ ಹೆಮ್ಮೆಯ ಸಂಪ್ರದಾಯ ಭಾರತಕ್ಕಿದೆ: ಪ್ರಧಾನಿ ಮೋದಿ

“ಪ್ರಧಾನ್ ಮಂತ್ರಿ ಸಂಗ್ರಹಾಲಯ”ವನ್ನು ಉದ್ಘಾಟಿಸಿ ಮಾತನಾಡಿದರು

Team Udayavani, Apr 14, 2022, 3:29 PM IST

ಪ್ರಜಾಪ್ರಭುತ್ವ ಬಲಪಡಿಸುವ ಹೆಮ್ಮೆಯ ಸಂಪ್ರದಾಯ ಭಾರತಕ್ಕಿದೆ: ಪ್ರಧಾನಿ ಮೋದಿ

ನವದೆಹಲಿ: ಕೆಲವೊಂದು ವಿರೋಧಗಳನ್ನು ಹೊರತುಪಡಿಸಿ ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ಹೆಮ್ಮೆಯ ಸಂಪ್ರದಾಯವನ್ನು ಭಾರತ ಹೊಂದಿದೆ. ಇದರ ಪರಿಣಾಮವಾಗಿಯೇ ನಮ್ಮ ಬಹುತೇಕ ಪ್ರಧಾನಿಗಳು ತುಂಬಾ ಸಾಮಾನ್ಯ ಕುಟುಂಬದಿಂದ ಬಂದವರಾಗಿದ್ದಾರೆ ಎಂಬುದು ಎಲ್ಲಾ ಭಾರತೀಯರು ಹೆಮ್ಮೆ ಪಡುವ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ:ಅಂಬೇಡ್ಕರ್ ಬಗ್ಗೆ ಮಾತನಾಡಲು ಕಾಂಗ್ರೆಸ್‍ ಗೆ ನೈತಿಕತೆಯೇ ಇಲ್ಲ: ಎನ್. ರವಿಕುಮಾರ್

ಗುರುವಾರ(ಏ.14) ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ “ಪ್ರಧಾನ್ ಮಂತ್ರಿ ಸಂಗ್ರಹಾಲಯ”ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಧಾನ್ ಮಂತ್ರಿ ಸಂಗ್ರಹಾಲಯದಲ್ಲಿ ದೇಶದ ಈ ಹಿಂದಿನ ಎಲ್ಲಾ ಪ್ರಧಾನಮಂತ್ರಿಗಳ ಸ್ಮರಣಾರ್ಥದ ಅಪರೂಪದ ವಸ್ತುಗಳ ಮ್ಯೂಸಿಯಂ ಇದಾಗಿದೆ ಎಂದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಈ ಸಂಗ್ರಹಾಲಯ ದೊಡ್ಡ ಸ್ಫೂರ್ತಿಯಾಗಿದೆ. ನಾನು ಇಂದು ಮಾಜಿ ಪ್ರಧಾನಮಂತ್ರಿಗಳ ಕುಟುಂಬ ಸದಸ್ಯರನ್ನು ಕಾಣುವಂತಾಯಿತು.ಈ ಸಮಾರಂಭ ಅವರ ಉಪಸ್ಥಿತಿಯಿಂದ ಕಳೆಗಟ್ಟಿರುವುದಾಗಿ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟನೆಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಮ್ಯೂಸಿಯಂ ವೀಕ್ಷಿಸಲು ಮೊದಲ ಟಿಕೆಟ್ ಖರೀದಿಸಿದ್ದರು.

ಟಿಕೆಟ್ ಬೆಲೆ ಎಷ್ಟು?

ಪ್ರಧಾನಮಂತ್ರಿ ಸಂಗ್ರಹಾಲಯ ವೀಕ್ಷಿಸಲು ಟಿಕೆಟ್ ಬೆಲೆ ಆನ್ ಲೈನ್ ಖರೀದಿಸಿದರೆ 100 ರೂಪಾಯಿ, ಆಫ್ ಲೈನ್ ನಲ್ಲಿ (ಭಾರತೀಯರು) ಖರೀದಿಸಿದರೆ 110 ರೂಪಾಯಿ. ವಿದೇಶಿಯರಿಗೆ 750 ರೂಪಾಯಿ. 5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಶೇ.50ರಷ್ಟು ಡಿಸ್ಕೌಂಟ್ ಇದೆ ಎಂದು ವರದಿ ತಿಳಿಸಿದೆ.

ಪ್ರಧಾನ್ ಮಂತ್ರಿ ಸಂಗ್ರಹಾಲಯ ಮೆಟ್ರೋ ನಿಲ್ದಾಣ ಸಮೀಪದ ಲೋಕ್ ಕಲ್ಯಾಣ್ ಮಾರ್ಗದ ಹಳದಿ ಲೈನ್ ನಲ್ಲಿದೆ. ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳಿಗೆ ಶೇ.25ರಷ್ಟು ಡಿಸ್ಕೌಂಟ್ ನಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.