![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 28, 2020, 11:03 AM IST
ಹೊಸದಿಲ್ಲಿ: ದಿನಗಳೆದಂತೆ ದೇಶದ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ದೇಶದಲ್ಲಿ ಗರಿಷ್ಠ 77,266 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರೊಂದಿಗೆ 24 ಗಂಟೆಯಲ್ಲಿ 1,057 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 33,87,501ಕ್ಕೆ ಏರಿಕೆಯಾಗಿದೆ. ಇವರಲ್ಲಿ 61,529 ಮಂದಿ ಸಾವನ್ನಪ್ಪಿದ್ದು, ಇನ್ನೂ 7,42,023 ಸಕ್ರಿಯ ಪ್ರಕರಣಗಳಿವೆ.
ಭಾರತದಲ್ಲಿ ಕಳೆದ ಐದು ತಿಂಗಳಿನಲ್ಲಿ 3/4 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಚೇತರಿಸಿಕೊಂಡಿವೆ ಹಾಗೂ 1/4 ಕ್ಕಿಂತ ಕಡಿಮೆ ಪ್ರಕರಣಗಳು ಮಾತ್ರ ಈಗ ಸಕ್ರೀಯವಾಗಿವೆ ಎಂದು ಅರೋಗ್ಯ ಇಲಾಖೆ ಹೇಳಿದೆ.
ಕೇಂದ್ರ ಅರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಅರೋಗ್ಯ ಇಲಾಖೆಯ ವರದಿಯ ಬೆನ್ನಲ್ಲೇ ಗುರುವಾರ (ಆಗಸ್ಟ್ 27) ಕೋವಿಡ್ ಸೋಂಕಿತರ ಸಂಖ್ಯೆ ಒಂದೇ ದಿನ 75,760 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಏರಿಕೆಯಾಗಿದೆ ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷ ಗಡಿಯನ್ನು ದಾಟಿದೆ ಎನ್ನಲಾಗಿದೆ.
ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೇಳಿಕೆ ಪ್ರಕಾರ ಸದ್ಯ 7,25,991 ಸಕ್ರೀಯ ಪ್ರಕರಣಗಳಿದ್ದು, 25,23,771 ಜನರು ಚೇತರಿಸಿಕೊಂಡಿದ್ದಾರೆ ಜೊತೆಗೆ 60,472 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.