Indian citizenship: ಭಾರತದ ಪೌರತ್ವ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ಪಾಕ್‌-ಭಾರತ ದಂಪತಿಗೆ ದುಬೈನಲ್ಲಿ ಜನಿಸಿದ‌ ಇಬ್ಬರು ಮಕ್ಕಳು: ಪಾಕ್‌ ಪೌರತ್ವ ತ್ಯಜಿಸಿ ಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಸಿ ಎಂದ ಹೈಕೋರ್ಟ್‌

Team Udayavani, Apr 8, 2023, 7:03 AM IST

high court karnataka

ಬೆಂಗಳೂರು: ಪಾಕಿಸ್ತಾನದ ತಂದೆ ಹಾಗೂ ಭಾರತದ ತಾಯಿಗೆ ದುಬೈನಲ್ಲಿ ಜನಸಿದ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಭಾರತದ ಪೌರತ್ವ ನೀಡಲು ನಿರಾಕರಿಸಿರುವ ಹೈಕೋರ್ಟ್‌, ತನ್ನ ದೇಶದ ಪೌರತ್ವ ತ್ಯಜಿಸಲು 21 ವರ್ಷ ಆಗಬೇಕು ಎಂದು ಪಾಕಿಸ್ತಾನ ಹೇಳಿರುವಾಗ, ಮತ್ತೂಂದು ದೇಶ ಅಪ್ರಾಪ್ತರಿಗೆ ಪೌರತ್ವ ನೀಡುವುದಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದೆ.

ಭಾರತದ ಪೌರತ್ವ ನೀಡುವಂತೆ ಕೋರಿ ಬೆಂಗಳೂರಿನಲ್ಲಿ ನೆಲೆಸಿರುವ 17 ಮತ್ತು 14 ವರ್ಷದ ಇಬ್ಬರು ಪಾಕಿಸ್ತಾನಿ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪೌರತ್ವವನ್ನು ತ್ಯಜಿಸಲು 21 ವರ್ಷ ವಯಸ್ಸಾಗಬೇಕು ಎಂದು ಪಾಕಿಸ್ತಾನ ತಿಳಿಸಿರುವ ಸಂದರ್ಭದಲ್ಲಿ ಪಾಕಿಸ್ತಾನದ ತಂದೆ ಮತ್ತು ಭಾರತದ ತಾಯಿಗೆ ದುಬೈನಲ್ಲಿ ಜನಿಸಿರುವ ಇಬ್ಬರು ಮಕ್ಕಳಿಗೆ 21 ವರ್ಷಕ್ಕಿಂತಲೂ ಮುನ್ನ ಭಾರತದ ಪೌರತ್ವ ನೀಡಲು ನಿರ್ದೇಶನ ನೀಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಅಲ್ಲದೆ, ಪಾಕಿಸ್ತಾನದ ಪೌರತ್ವ ತ್ಯಜಿಸಬೇಕಾದಲ್ಲಿ 21 ವರ್ಷ ಕಳೆದಿರಬೇಕು ಎಂದಿರುವಾಗ, ಅದಕ್ಕೆ ಭಾರತದ ಕಾನೂನುಗಳು ಹೊಂದಿಕೊಳ್ಳಲು ಸಾಧ್ಯವಿಲ್ಲ. ಜತೆಗೆ, ಪಾಕಿಸ್ತಾನದ ಪೌರತ್ವವನ್ನು ತ್ಯಜಿಸಿದ ಬಳಿಕವೇ ಅರ್ಜಿದಾರ ಮಕ್ಕಳು ಭಾರತದ ಪೌರತ್ವ ಕೋರಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ:
ಭಾರತದ ಮೂಲದ ಅಮೀನಾ ಎಂಬುವರು ದುಬೈನಲ್ಲಿರುವ ಪಾಕಿಸ್ತಾನದ ಪ್ರಜೆ ಅಸ್ಸಾದ್‌ ಮಲ್ಲಿಕ್‌ ಎಂಬುವರನ್ನು 2002ರಲ್ಲಿ ಷರಿಯಾ ಕಾನೂನಿನ ಪ್ರಕಾರ ವಿವಾಹವಾಗಿದ್ದರು. ದಂಪತಿಗೆ 2004 ಮತ್ತು 2008ರಲ್ಲಿ ಇಬ್ಬರು ಮಕ್ಕಳು ದುಬೈನಲ್ಲಿ ಜನಿಸಿದ್ದರು. ಈ ದಂಪತಿ ದುಬೈ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದರು. ಜತೆಗೆ, ಮಕ್ಕಳ ಮೇಲಿನ ಹಕ್ಕನ್ನು ತಾಯಿಗೆ ಬಿಟ್ಟುಕೊಡಲಾಗಿತ್ತು. ಈ ಮಕ್ಕಳು ದುಬೈನಲ್ಲಿ ಉದ್ಯೋಗದಲ್ಲಿದ್ದ ತಾಯಿಯೊಂದಿಗೆ ನೆಲೆಸಿದ್ದರು.

ಈ ಮಧ್ಯೆ ಅಮೀನಾ ಅವರು ದುಬೈನಲ್ಲಿ ಜೀವನ ನಡೆಸುವುದಕ್ಕೆ ಸಾಧ್ಯವಾಗದ ಕಾರಣ ಮಕ್ಕಳೊಂದಿಗೆ ಬೆಂಗಳೂರಿನಲ್ಲಿದ್ದ ತನ್ನ ಪೋಷಕರ ಮನೆಗೆ 2021ರಲ್ಲಿ ಹಿಂದಿರುಗಲು ಮುಂದಾಗಿದ್ದರು. ಇದಕ್ಕಾಗಿ ಪಾಕಿಸ್ತಾನಿ ಪ್ರಜೆಗಳಾಗಿದ್ದ ಮಕ್ಕಳ ಪಾಸ್‌ಪೋರ್ಟ್‌ ಹೊಂದಿದ್ದ ಪರಿಣಾಮ ಮಕ್ಕಳನ್ನು ಭಾರತಕ್ಕೆ ಕರೆತರಲು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಮಾಡಿದ್ದರು. ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ಅರ್ಜಿದಾರರಿಗೆ, ಪಾಕಿಸ್ತಾನದ ಪಾಸ್‌ಪೋರ್ಟ್‌ ಹಿಂದಿರುಗಿಸಿದ ಬಳಿಕ ಅವರ ಪೌರತ್ವದ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಷರತ್ತನ್ನು ವಿಧಿಸಿ ಮಾನವೀಯತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಭಾರತ ಪ್ರವೇಶಕ್ಕೆ ಪಾಸ್‌ ಪೋರ್ಟ್‌ ನೀಡಿದ್ದರು.

ಟಾಪ್ ನ್ಯೂಸ್

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.