ಉರಿಯದ ಬೀದಿದೀಪ : ಕತ್ತಲೆಯಲ್ಲಿ ಬಂಡಿಮಠ ಬಸ್‌ ನಿಲ್ದಾಣ

ಕುಡುಕರ ಹಾವಳಿ, ಸ್ವಚ್ಛತೆಯ ಕೊರತೆ

Team Udayavani, Mar 10, 2021, 5:40 AM IST

ಉರಿಯದ ಬೀದಿದೀಪ : ಕತ್ತಲೆಯಲ್ಲಿ ಬಂಡಿಮಠ ಬಸ್‌ ನಿಲ್ದಾಣ

ಕಾರ್ಕಳ: ಸಂಜೆ ಪಶ್ಚಿಮ ದಿಕ್ಕಿನಲ್ಲಿ ಸೂರ್ಯ ಮುಳುಗುತ್ತಿದ್ದಂತೆ ಕಾರ್ಕಳ ಬಂಡಿಮಠ ಬಸ್‌ನಿಲ್ದಾಣವೂ ಕತ್ತಲಲ್ಲಿ ಮುಳುಗುತ್ತದೆ.

ಹಲವು ಸಮಯಗಳಿಂದ ಬಂಡಿಮಠ ಬಸ್‌ ನಿಲ್ದಾಣದ ಬೀದಿದೀಪ ಉರಿಯುತ್ತಿಲ್ಲ. ದೀಪಗಳಿಲ್ಲದ್ದರಿಂದ ಮಹಿಳೆಯರು, ಮಕ್ಕಳು, ವೃದ್ಧರು ಬಸ್‌ ನಿಲ್ದಾಣದಲ್ಲಿ ಬಸ್‌ಗೆ ಕಾಯಲು ಭಯ ಪಡುವಂತಾಗಿದೆ.

ರಾಜ್ಯದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ ತಾಣವಿದು. ನಿಲ್ದಾಣ ಪುರಸಭೆಯ 5ನೇ ವಾರ್ಡ್‌ನಲ್ಲಿದೆ. 2011-12ರಲ್ಲಿ 2.18 ಎಕರೆ ಜಾಗವನ್ನು ಬಸ್‌ ನಿಲ್ದಾಣಕ್ಕೆ ಕಾಯ್ದಿರಿಸಲಾಗಿತ್ತು. 1.78 ಎಕರೆ ವಿಸ್ತೀರ್ಣದಲ್ಲಿ 2 ಕೋ. ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಕಾಮಗಾರಿಗಳನ್ನು ನಡೆಸಿ ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ.

ಇಳಿಸಿದ ಬಳಿಕ ಏರಿಸಿಲ್ಲ
ಬಸ್‌ ನಿಲ್ದಾಣ ವ್ಯಾಪ್ತಿಯಲ್ಲಿ ಬೆಳಕಿನ ವ್ಯವಸ್ಥೆಗಾಗಿ ಹೈಮಾಸ್ಟ್‌ ದೀಪ ಅಳವಡಿಸ ಲಾಗಿತ್ತು. ಅದರಲ್ಲಿರುವ ಬಲ್ಬ್ಗಳೆಲ್ಲ ಹಲವು ಸಮಯದಿಂದ ಕೆಟ್ಟು ಹೋಗಿವೆ. ದುರಸ್ತಿಗೆಂದು ಹೈಮಾಸ್ಟ್‌ ದೀಪದ ಕಂಬದಲ್ಲಿ ಬಲ್ಬ್ಗಳಿರುವ ಯುನಿಟ್‌ ಅನ್ನು ಕೆಳಗಿಳಿಸಿ ದುರಸ್ತಿ ನಡೆಸದೆ ಹಾಗೆಯೇ ಬಿಡಲಾಗಿದೆ.

ದಿನಕ್ಕೆ 150ಕ್ಕೂ ಅಧಿಕ ಬಸ್‌ಗಳು ಈ ನಿಲ್ದಾಣಕ್ಕೆ ಬಂದು ಹೋಗುತ್ತವೆ. ತಾಲೂಕು ಕೇಂದ್ರದಿಂದ 3 ಕಿ.ಮೀ. ದೂರದಲ್ಲಿ ಈ ಬಸ್‌ ನಿಲ್ದಾಣವಿದೆ. ಆದರೆ ಇಲ್ಲಿನ ಪರಿಸರ ಮಾತ್ರ ಪುಂಡರ ತಾಣವಾಗಿದೆ. ಬೆಳಕಿಲ್ಲದೆ ಇರುವುದರಿಂದ ಕತ್ತಲಿನಲ್ಲಿ ನಿಂತು ಬಸ್‌ ಕಾಯುವ ಪರಿಸ್ಥಿತಿಯಿದೆ. ಹೆಣ್ಣುಮಕ್ಕಳಿಗೆ ಸುರಕ್ಷತೆ ಭೀತಿ ಎದುರಾಗಿದೆ.

ರಾತ್ರಿ ಮದ್ಯ ಸೇವನೆ ಮಾಡಿ ಸುತ್ತಾಡುವುದು, ಸಾರ್ವಜನಿಕ ಸ್ಥಳ ಗಳಲ್ಲಿ ಸಿಗರೇಟು, ಬೀಡಿ ಸೇದುವುದು ಇಲ್ಲಿ ಸಾಮಾನ್ಯವಾಗಿದೆ. ಬಸ್‌ ನಿಲ್ದಾಣದ ಒಳಗೆ ಕೆಲವರು ಮಲಗಿರುತ್ತಾರೆ.

ಸ್ವಚ್ಛತೆ ಕೊರತೆ
ಬಸ್‌ ನಿಲ್ದಾಣ ಪರಿಸರದಲ್ಲಿ ಸ್ವಚ್ಛತೆ ಕೊರತೆಯೂ ಕಂಡು ಬರುತ್ತಿದೆ. ಪರಿಸರದ ಅಲ್ಲಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಖಾಲಿ ಮದ್ಯದ ಬಾಟಲಿಗಳು ಬಿದ್ದಿವೆ. ಬೀಡಿ, ಸಿಗರೇಟು ತುಂಡುಗಳನ್ನು ಎಸೆಯಲಾಗಿದೆ.

ಲಾಕ್‌ಡೌನ್‌ ಬಳಿಕ ಬಸ್‌ ಸಂಚಾರ ಎಂದಿನಂತೆ ಇದೆ. ಆದರೆ ಬೆಳಕು ಇನ್ನಿತರ ಕೆಲ ಮೂಲ ಸೌಕರ್ಯ ಕೊರತೆಯಿಂದ
ಹೆಣ್ಣುಮಕ್ಕಳು ಇತ್ತ ಸುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಬೆಳಕಿನ ವ್ಯವಸ್ಥೆ ಜತೆಗೆ ರಾತ್ರಿ ಇಲ್ಲಿ ಮದ್ಯ ಸೇವನೆ ಮಾಡುವುದಕ್ಕೆ ನಿಯಂತ್ರಣ ಹೇರಬೇಕಿದೆ ಎನ್ನುತ್ತಾರೆ ಪ್ರಯಾಣಿಕರು.

ಕೊಟೇಶನ್‌ ಸಿದ್ಧ
ಬಂಡಿಮಠ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ದೀಪ ದುರಸ್ತಿಗೆ ಕೊಟೇಶನ್‌ ಸಿದ್ಧವಾಗಿದೆ. ದುರಸ್ತಿಗೆಂದು ಕಂಬದಿಂದ ಬಲುºಗಳನ್ನು ಕೆಳಗೆ ಇಳಿಸಲಾಗಿದೆ. ಶೀಘ್ರ ಇದರ ದುರಸ್ತಿ ನಡೆಸಲಾಗುವುದು.
-ಪದ್ಮನಾಭ, ಎಂಜಿನಿಯರ್‌ , ಪುರಸಭೆ, ಕಾರ್ಕಳ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.